Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಬಕಾರಿ ಕಾನ್ಸ್‌ಟೇಬಲ್‌; ಪಡೆದ ಹಣವೇಷ್ಟು?

ಲಂಚ (bribe) ಸ್ವೀಕರಿಸುವಾಗ ಅಬಕಾರಿ ಕಾನ್ಸ್‌ಟೇಬಲ್‌ ರೆಡ್​ಹ್ಯಾಂಡ್​ ಆಗಿ ಲೋಕಾಯುಕ್ತ  (Lokayukta) ಬಲೆಗೆ ಬಿದ್ದ ಘಟನೆ ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ಅಬಕಾರಿ ಕಚೇರಿಯಲ್ಲಿ ನಡೆದಿದೆ. ಇನ್ನು ಲೋಕಾಯುಕ್ತ ದಾಳಿ ವೇಳೆ ಅಬಕಾರಿ ಇನ್ಸ್​ಪೆಕ್ಟರ್‌​​ ಗೀತಾ ಪರಾರಿಯಾಗಿದ್ದಾರೆ.

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಬಕಾರಿ ಕಾನ್ಸ್‌ಟೇಬಲ್‌; ಪಡೆದ ಹಣವೇಷ್ಟು?
ಮಂಡ್ಯ ಲೋಕಾಯುಕ್ತ ದಾಳಿ
Follow us
ಪ್ರಶಾಂತ್​ ಬಿ.
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 06, 2023 | 6:35 PM

ಮಂಡ್ಯ, ಅ.06: ಲಂಚ (bribe) ಸ್ವೀಕರಿಸುವಾಗ ಅಬಕಾರಿ ಕಾನ್ಸ್‌ಟೇಬಲ್‌ ರೆಡ್​ಹ್ಯಾಂಡ್​ ಆಗಿ ಲೋಕಾಯುಕ್ತ  (Lokayukta) ಬಲೆಗೆ ಬಿದ್ದ ಘಟನೆ ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ಅಬಕಾರಿ ಕಚೇರಿಯಲ್ಲಿ ನಡೆದಿದೆ. ಇನ್ನು ಲೋಕಾಯುಕ್ತ ದಾಳಿ ವೇಳೆ ಅಬಕಾರಿ ಇನ್ಸ್​ಪೆಕ್ಟರ್‌​​ ಗೀತಾ ಪರಾರಿಯಾಗಿದ್ದಾರೆ. ಅಬಕಾರಿ ಪೇದೆ ದೇವರಾಜು ಬಲೆಗೆ ಬಿದ್ದ ಅಧಿಕಾರಿ. ಇತ ಸುರೇಶ್ ಎಂಬಾತನಿಂದ 10 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಮಂಡ್ಯ ಲೋಕಾಯುಕ್ತ ಎಸ್​ಪಿ ಸಜೀತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.  ಚಾರ್ಜ್‌ಶೀಟ್​ನಲ್ಲಿ ಜಮೀನು ಮಾಲೀಕನ ಹೆಸರು ಕೈಬಿಡಲು ಸುರೇಶ್‌ ಬಳಿ ಇನ್ಸ್​ಪೆಕ್ಟರ್‌ ಗೀತಾ 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.  ಗೀತಾ ಅವರ ಸೂಚನೆಯಂತೆ ಪೇದೆ ದೇವರಾಜು ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ.

ಪ್ರಾಥಮಿಕ ಆರೋಗ್ಯ ಕೇಂದ್ರದ SDA ಸುನೀಲ್​ ಕುಮಾರ್ ಲೋಕಾ ಬಲೆಗೆ

ಇನ್ನು ಬೀದರ್ ಜಿಲ್ಲೆಯಲ್ಲೂ ಇಂತಹದೊಂದು ಘಟನೆ ಬೆಳಕಿಗೆ ಬಂದಿದೆ. ಹೌದು, ಹುಮ್ನಾಬಾದ್ ತಾಲೂಕಿನ ಹುಡುಗಿ ಗ್ರಾಮದ ಪ್ರಾಥಮಿಕ ಕೇಂದ್ರದ ಎಸ್​ಡಿಎ ಅಧಿಕಾರಿ ಆಗಿ ಕೆಲಸ ಮಾಡುತ್ತಿದ್ದ ಸುನೀಲ್ ಕುಮಾರ್ ಎಂಬಾತ, ಹೆಲ್ತ್​​ ಇನ್ಸ್​ಪೆಕ್ಟರ್​ ಸಂಬಳ ಮಂಜೂರು ಮಾಡಲು 20 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, ಅದನ್ನು ಪಡೆಯುವಾಗ ಲೋಕಾಯುಕ್ತ ಡಿವೈಎಸ್​ಪಿ ಎನ್.ಎಂ.ಓಲೇಕಾರ್ ಮಾರ್ಗದರ್ಶನದಲ್ಲಿ ದಾಳಿ ನಡೆಸಿದಾಗ ಸಿಕ್ಕಿಬಿದ್ದಿದ್ದಾನೆ.

ಇದನ್ನೂ ಓದಿ:ಟಿವಿ9 ವರದಿ ಫಲಶ್ರುತಿ: ಚಿಕ್ಕಬಳ್ಳಾಪುರ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ನ್ಯಾಯಾಧೀಶರು ಹಾಗೂ ಲೋಕಾಯುಕ್ತ ಅಧಿಕಾರಿಗಳ ಭೇಟಿ!

ಇನ್ನು ಕಳೆದ ತಿಂಗಳು ಒಂದು ಲಕ್ಷ ಲಂಚ ಸ್ವೀಕರಿಸುವಾಗ ಬೀದರ್​ ಜಿಲ್ಲೆಯ ಬಸವಕಲ್ಯಾಣ ತಹಶೀಲ್ದಾರ್​ ​ ಶಿವಾನಂದ ಬಿರಾದಾರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿತ್ತು. ಇವರು ಕೊಹಿನೂರು ನಾಡಕಚೇರಿ ಉಪ ತಹಶೀಲ್ದಾರ್ ಆಗಿದ್ದು, ಮುಚ್ಚಿಳಮ ಗ್ರಾಮದ ರೈತ ಸುಧೀರ್​ ಎಂಬುವವರು ಜಮೀನು ಪಹಣಿ ಕೊಡುವಂತೆ ಕೇಳಿದ್ದರು. ಈ ಹಿನ್ನಲೆ ಉಪ ತಹಶೀಲ್ದಾರ್​ 1 ಲಕ್ಷ ರೂಪಾಯಿಗೆ ಲಂಚಕ್ಕೆ ಬೇಡಿಕೆ‌ ಇಟ್ಟಿದ್ದರು. ಈ ಕುರಿತು ಲೋಕಾಯುಕ್ತ DySP ಎನ್​ಎಂ ಓಲೇಕಾರ್ ಮಾರ್ಗದರ್ಶನದಲ್ಲಿ ದಾಳಿ ಮಾಡಲಾಗಿದ್ದು, ಲಂಚ ಸ್ವೀಕರಿಸುವಾಗ ಶಿವಾನಂದ ಅವರು ಸಿಕ್ಕಿಬಿದ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್