AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಜನ್ಯ ಕೇಸ್​: ನಾನೇ ಸಾಕ್ಷಿ ಎಂದಿದ್ದ ಮಹಿಳೆ ಬಗ್ಗೆಯೇ ಸ್ಫೋಟಕ ಆರೋಪ!

ಧರ್ಮಸ್ಥಳ ಸೌಜನ್ಯ ಕೇಸ್​ ಗೆ ನಾನೇ ಪ್ರತ್ಯಕ್ಷ ಸಾಕ್ಷಿ. ನನ್ನ ಕಣ್ಣ ಮುಂದೆಯೇ ಘಟನೆ ನಡೆದಿದೆ ಎಂದಿದ್ದ ಮಂಡ್ಯ ಮೂಲದ ಮಹಿಳೆ ಬಗ್ಗೆಯೇ ಸ್ಫೋಟಕ ಆರೋಪ ಕೇಳಿಬಂದಿದೆ. TV9 ಜೊತೆ ಮಾತನಾಡಿರುವ ಮಹಿಳೆಯ ಸಹೋದರ, ಹತ್ತು ಹಲವು ವಿಚಾರಗಳನ್ನ ಬಿಚ್ಚಿಟ್ಟಿದ್ದಾರೆ. ತನ್ನ ಸಹೋದರಿ ಹೇಳಿದ್ದೆಲ್ಲ ಎಷ್ಟು ಸತ್ಯ ಎಂಬ ಬಗ್ಗೆ EXCLUSIVE ಮಾಹಿತಿ ನೀಡಿದ್ದಾರೆ.

ಸೌಜನ್ಯ ಕೇಸ್​: ನಾನೇ ಸಾಕ್ಷಿ ಎಂದಿದ್ದ ಮಹಿಳೆ ಬಗ್ಗೆಯೇ ಸ್ಫೋಟಕ ಆರೋಪ!
ಮಂಡ್ಯ ಮಹಿಳೆ ಬಗ್ಗೆ ಸಹೋದರನಿಂದಲೇ ಸ್ಫೋಟಕ ಹೇಳಿಕೆImage Credit source: Google
ದಿಲೀಪ್​, ಚೌಡಹಳ್ಳಿ
| Edited By: |

Updated on:Sep 24, 2025 | 1:32 PM

Share

ಮಂಡ್ಯ, ಸೆಪ್ಟೆಂಬರ್​ 24: ಸೌಜನ್ಯ ಪ್ರಕರಣಕ್ಕೆ (Soujanya Case) ಮತ್ತೊಂದು ಹೊಸ ಟ್ವಿಸ್ಟ್​ ಸಿಕ್ಕಿದೆ. ಸೌಜನ್ಯ ಅತ್ಯಾಚಾರ ಕಣ್ಣಾರೆ ಕಂಡಿದ್ದೆ ಎಂದು ದೂರು ಕೊಟ್ಟಿದ್ದ ಮಂಡ್ಯ (Mandya) ಮೂಲದ ಮಹಿಳೆ ಬಗ್ಗೆ ಆಕೆಯ ಸಹೋದರನೇ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. TV9 ಜೊತೆ ಮಾತನಾಡಿರುವ ಮಹಿಳೆಯ ಸಹೋದರ ಶಿವಕೆಂಪಯ್ಯ, ಆಕೆ ಹೇಳಿದ್ದೆಲ್ಲ ಬರೀ ಸುಳ್ಳು. ಅವಳ ಹಿಂದೆ ಯಾರೋ ನಿಂತು ಈ ರೀತಿ ಹೇಳಿಸುತ್ತಿದ್ದು, ಸೌಜನ್ಯಗೆ ನ್ಯಾಯ ಕೊಡಿಸುವ ಯಾವ ಉದ್ದೇಶವೂ ಆಕೆಗೆ ಇಲ್ಲ ಎಂದಿದ್ದಾರೆ.

ನನ್ನ ಸಹೋದರಿ 16 ವರ್ಷ ಇದ್ದಾಗಲೇ ಕೇರಳದ ಕ್ರಿಶ್ಚಿಯನ್ ಯುವಕನ ಜೊತೆ ಓಡಿ ಹೋಗಿದ್ದು, ಹಲವು ವರ್ಷ ಅಲ್ಲಿಯೇ ಇದ್ದಳು. ಬಳಿಕ 2 ಮಕ್ಕಳ ಜೊತೆ ಮಂಡ್ಯಕ್ಕೆ ಬಂದು ಗಂಡನಿಗೇ ಚಾಕು ಇರಿದಿದ್ದಳು. ಈ ಬಗ್ಗೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿದೆ. ನಂತರ ಮಹಿಳಾ ಸಂಘಟನೆಗೆ ಸೇರಿಕೊಂಡಿರುವ ಈಕೆಗೆ ಕ್ರಿಮಿನಲ್​ ಹಿನ್ನೆಲೆಯಿದೆ. ಅವಳು ಹೇಳೋದೆಲ್ಲ ಬರೀ ಸುಳ್ಳಾಗಿದ್ದು, ಸೌಜನ್ಯ ಕೇಸ್​ ವಿಚಾರವಾಗಿಯೂ ಆಕೆ ಹೇಳ್ತಿರೋದು ಅದನ್ನೇ ಎಂದಿದ್ದಾರೆ.

ಮಂಡ್ಯ ಮಹಿಳೆ ಸಹೋದರ ಹೇಳಿದ್ದೇನು ನೋಡಿ.

ಸಹೋದರಿಯ ನಡತೆಯೇ ಸರಿ ಇಲ್ಲ ಎಂದಿರುವ ಶಿವಕೆಂಪಯ್ಯ, ನನ್ನ ವಿರುದ್ಧವೂ ಆಕೆ ದೂರು ಕೊಟ್ಟಿದ್ದಳು. ಅದೇ ರೀತಿ ಬಹಳ ಜನರ ವಿರುದ್ಧ ಅವಳು ಕಂಪ್ಲೇಂಟ್​ ಕೊಟ್ಟಿದ್ದಾಳೆ. ಆಕೆ 1980ರಲ್ಲೇ ಮನೆ ಬಿಟ್ಟು ಗಾರೆ ಕೆಲಸ ಮಾಡುತ್ತಿದ್ದವನ ಜೊತೆ ಹೋದಳು. ಆ ಸಂಧರ್ಭದಲ್ಲಿ ಅಂತರ್ಜಾತಿ ವಿವಾಹ ಒಪ್ಪಿಕೊಳ್ಳುವ ಸ್ಥಿತಿಯಲ್ಲಿ ನಾವು ಇರಲಿಲ್ಲ. ಇನ್ನು ಸೌಜನ್ಯ ಕೇಸ್​ ವಿಚಾರವಾಗಿ ಒಡನಾಡಿ ಸಂಸ್ಥೆಯವರು ನಮ್ಮನ್ನ ಸಂಪರ್ಕ ಮಾಡಿದ್ರು. ಕೆಲ ಮಾಹಿತಿಯನ್ನೂ ಪಡೆದಿಕೊಂಡಿದ್ದಾರೆ ಎಂದು ಶಿವಕೆಂಪಯ್ಯ TV9ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ರಾಯಚೂರಿಗೆ ತಿಮರೋಡಿ ಗಡಿಪಾರಿಗೆ ವಿರೋಧ: ಮಹೇಶ್​ ಶೆಟ್ಟಿ ಮೇಲಿರೋ ಕೇಸ್​ಗಳು ಎಷ್ಟು?

ಮಂಡ್ಯ ಮಹಿಳೆ ಏನು ಹೇಳಿದ್ದಳು?

ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯದ ಸಮೀಪ ಒಬ್ಬ ಹುಡುಗಿಯ ಅಪಹರಣ ಮಾಡಿದ್ದನ್ನು ನಾನು ಕಣ್ಣಾರೆ ಕಂಡಿದ್ದೇನೆ. ಧರ್ಮಸ್ಥಳ ದೇಗುಲದಲ್ಲಿ ಪೂಜೆ ಸಲ್ಲಿಸಿ, ಪ್ರಕೃತಿ ಚಿಕಿತ್ಸಾಲಯಕ್ಕೆ ಹೊರಟಿದ್ದ ವೇಳೆ ಈ ಘಟನೆ ನನ್ನ ಎದುರಲ್ಲಿಯೇ ನಡೆದಿದೆ. ಘಟನೆ ನೋಡಿದ ಬಳಿಕ ಅಧಿಕಾರಿಗಳಿಗೆ ಈ ಬಗ್ಗೆ ಹೇಳಬೇಕು ಎಂದು ಭಾವಿಸಿದ್ದೆ. ಆದರೆ ಆ ಸಂದರ್ಭ ಅದು ಸಾಧ್ಯವಾಗಲಿಲ್ಲ ಎಂದು ಮಹಿಳೆ ಹೇಳಿದ್ದಳು. ಅಲ್ಲದೆ ತಾನು ಹೇಳುತ್ತಿರುವ ಆ ಸ್ಥಳಕ್ಕೆ ಯಾರೆಲ್ಲ ಬಂದಿದ್ದರು, ಅವರ ವರ್ತನೆ ಹೇಗಿತ್ತು ಎಂಬ ಬಗ್ಗೆಯೂ ಮಹಿಳೆ ತಿಳಿಸಿದ್ದಳು.

ರಾಜ್ಯದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:30 pm, Wed, 24 September 25

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ