AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಜನ್ಯ ಕೇಸ್​: ನಾನೇ ಸಾಕ್ಷಿ ಎಂದಿದ್ದ ಮಹಿಳೆ ಬಗ್ಗೆಯೇ ಸ್ಫೋಟಕ ಆರೋಪ!

ಧರ್ಮಸ್ಥಳ ಸೌಜನ್ಯ ಕೇಸ್​ ಗೆ ನಾನೇ ಪ್ರತ್ಯಕ್ಷ ಸಾಕ್ಷಿ. ನನ್ನ ಕಣ್ಣ ಮುಂದೆಯೇ ಘಟನೆ ನಡೆದಿದೆ ಎಂದಿದ್ದ ಮಂಡ್ಯ ಮೂಲದ ಮಹಿಳೆ ಬಗ್ಗೆಯೇ ಸ್ಫೋಟಕ ಆರೋಪ ಕೇಳಿಬಂದಿದೆ. TV9 ಜೊತೆ ಮಾತನಾಡಿರುವ ಮಹಿಳೆಯ ಸಹೋದರ, ಹತ್ತು ಹಲವು ವಿಚಾರಗಳನ್ನ ಬಿಚ್ಚಿಟ್ಟಿದ್ದಾರೆ. ತನ್ನ ಸಹೋದರಿ ಹೇಳಿದ್ದೆಲ್ಲ ಎಷ್ಟು ಸತ್ಯ ಎಂಬ ಬಗ್ಗೆ EXCLUSIVE ಮಾಹಿತಿ ನೀಡಿದ್ದಾರೆ.

ಸೌಜನ್ಯ ಕೇಸ್​: ನಾನೇ ಸಾಕ್ಷಿ ಎಂದಿದ್ದ ಮಹಿಳೆ ಬಗ್ಗೆಯೇ ಸ್ಫೋಟಕ ಆರೋಪ!
ಮಂಡ್ಯ ಮಹಿಳೆ ಬಗ್ಗೆ ಸಹೋದರನಿಂದಲೇ ಸ್ಫೋಟಕ ಹೇಳಿಕೆImage Credit source: Google
ದಿಲೀಪ್​, ಚೌಡಹಳ್ಳಿ
| Edited By: |

Updated on:Sep 24, 2025 | 1:32 PM

Share

ಮಂಡ್ಯ, ಸೆಪ್ಟೆಂಬರ್​ 24: ಸೌಜನ್ಯ ಪ್ರಕರಣಕ್ಕೆ (Soujanya Case) ಮತ್ತೊಂದು ಹೊಸ ಟ್ವಿಸ್ಟ್​ ಸಿಕ್ಕಿದೆ. ಸೌಜನ್ಯ ಅತ್ಯಾಚಾರ ಕಣ್ಣಾರೆ ಕಂಡಿದ್ದೆ ಎಂದು ದೂರು ಕೊಟ್ಟಿದ್ದ ಮಂಡ್ಯ (Mandya) ಮೂಲದ ಮಹಿಳೆ ಬಗ್ಗೆ ಆಕೆಯ ಸಹೋದರನೇ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. TV9 ಜೊತೆ ಮಾತನಾಡಿರುವ ಮಹಿಳೆಯ ಸಹೋದರ ಶಿವಕೆಂಪಯ್ಯ, ಆಕೆ ಹೇಳಿದ್ದೆಲ್ಲ ಬರೀ ಸುಳ್ಳು. ಅವಳ ಹಿಂದೆ ಯಾರೋ ನಿಂತು ಈ ರೀತಿ ಹೇಳಿಸುತ್ತಿದ್ದು, ಸೌಜನ್ಯಗೆ ನ್ಯಾಯ ಕೊಡಿಸುವ ಯಾವ ಉದ್ದೇಶವೂ ಆಕೆಗೆ ಇಲ್ಲ ಎಂದಿದ್ದಾರೆ.

ನನ್ನ ಸಹೋದರಿ 16 ವರ್ಷ ಇದ್ದಾಗಲೇ ಕೇರಳದ ಕ್ರಿಶ್ಚಿಯನ್ ಯುವಕನ ಜೊತೆ ಓಡಿ ಹೋಗಿದ್ದು, ಹಲವು ವರ್ಷ ಅಲ್ಲಿಯೇ ಇದ್ದಳು. ಬಳಿಕ 2 ಮಕ್ಕಳ ಜೊತೆ ಮಂಡ್ಯಕ್ಕೆ ಬಂದು ಗಂಡನಿಗೇ ಚಾಕು ಇರಿದಿದ್ದಳು. ಈ ಬಗ್ಗೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿದೆ. ನಂತರ ಮಹಿಳಾ ಸಂಘಟನೆಗೆ ಸೇರಿಕೊಂಡಿರುವ ಈಕೆಗೆ ಕ್ರಿಮಿನಲ್​ ಹಿನ್ನೆಲೆಯಿದೆ. ಅವಳು ಹೇಳೋದೆಲ್ಲ ಬರೀ ಸುಳ್ಳಾಗಿದ್ದು, ಸೌಜನ್ಯ ಕೇಸ್​ ವಿಚಾರವಾಗಿಯೂ ಆಕೆ ಹೇಳ್ತಿರೋದು ಅದನ್ನೇ ಎಂದಿದ್ದಾರೆ.

ಮಂಡ್ಯ ಮಹಿಳೆ ಸಹೋದರ ಹೇಳಿದ್ದೇನು ನೋಡಿ.

ಸಹೋದರಿಯ ನಡತೆಯೇ ಸರಿ ಇಲ್ಲ ಎಂದಿರುವ ಶಿವಕೆಂಪಯ್ಯ, ನನ್ನ ವಿರುದ್ಧವೂ ಆಕೆ ದೂರು ಕೊಟ್ಟಿದ್ದಳು. ಅದೇ ರೀತಿ ಬಹಳ ಜನರ ವಿರುದ್ಧ ಅವಳು ಕಂಪ್ಲೇಂಟ್​ ಕೊಟ್ಟಿದ್ದಾಳೆ. ಆಕೆ 1980ರಲ್ಲೇ ಮನೆ ಬಿಟ್ಟು ಗಾರೆ ಕೆಲಸ ಮಾಡುತ್ತಿದ್ದವನ ಜೊತೆ ಹೋದಳು. ಆ ಸಂಧರ್ಭದಲ್ಲಿ ಅಂತರ್ಜಾತಿ ವಿವಾಹ ಒಪ್ಪಿಕೊಳ್ಳುವ ಸ್ಥಿತಿಯಲ್ಲಿ ನಾವು ಇರಲಿಲ್ಲ. ಇನ್ನು ಸೌಜನ್ಯ ಕೇಸ್​ ವಿಚಾರವಾಗಿ ಒಡನಾಡಿ ಸಂಸ್ಥೆಯವರು ನಮ್ಮನ್ನ ಸಂಪರ್ಕ ಮಾಡಿದ್ರು. ಕೆಲ ಮಾಹಿತಿಯನ್ನೂ ಪಡೆದಿಕೊಂಡಿದ್ದಾರೆ ಎಂದು ಶಿವಕೆಂಪಯ್ಯ TV9ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ರಾಯಚೂರಿಗೆ ತಿಮರೋಡಿ ಗಡಿಪಾರಿಗೆ ವಿರೋಧ: ಮಹೇಶ್​ ಶೆಟ್ಟಿ ಮೇಲಿರೋ ಕೇಸ್​ಗಳು ಎಷ್ಟು?

ಮಂಡ್ಯ ಮಹಿಳೆ ಏನು ಹೇಳಿದ್ದಳು?

ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯದ ಸಮೀಪ ಒಬ್ಬ ಹುಡುಗಿಯ ಅಪಹರಣ ಮಾಡಿದ್ದನ್ನು ನಾನು ಕಣ್ಣಾರೆ ಕಂಡಿದ್ದೇನೆ. ಧರ್ಮಸ್ಥಳ ದೇಗುಲದಲ್ಲಿ ಪೂಜೆ ಸಲ್ಲಿಸಿ, ಪ್ರಕೃತಿ ಚಿಕಿತ್ಸಾಲಯಕ್ಕೆ ಹೊರಟಿದ್ದ ವೇಳೆ ಈ ಘಟನೆ ನನ್ನ ಎದುರಲ್ಲಿಯೇ ನಡೆದಿದೆ. ಘಟನೆ ನೋಡಿದ ಬಳಿಕ ಅಧಿಕಾರಿಗಳಿಗೆ ಈ ಬಗ್ಗೆ ಹೇಳಬೇಕು ಎಂದು ಭಾವಿಸಿದ್ದೆ. ಆದರೆ ಆ ಸಂದರ್ಭ ಅದು ಸಾಧ್ಯವಾಗಲಿಲ್ಲ ಎಂದು ಮಹಿಳೆ ಹೇಳಿದ್ದಳು. ಅಲ್ಲದೆ ತಾನು ಹೇಳುತ್ತಿರುವ ಆ ಸ್ಥಳಕ್ಕೆ ಯಾರೆಲ್ಲ ಬಂದಿದ್ದರು, ಅವರ ವರ್ತನೆ ಹೇಗಿತ್ತು ಎಂಬ ಬಗ್ಗೆಯೂ ಮಹಿಳೆ ತಿಳಿಸಿದ್ದಳು.

ರಾಜ್ಯದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:30 pm, Wed, 24 September 25

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ