AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಜನ್ಯ ಕೇಸ್​: ನಾನೇ ಸಾಕ್ಷಿ ಎಂದಿದ್ದ ಮಹಿಳೆ ಬಗ್ಗೆಯೇ ಸ್ಫೋಟಕ ಆರೋಪ!

ಧರ್ಮಸ್ಥಳ ಸೌಜನ್ಯ ಕೇಸ್​ ಗೆ ನಾನೇ ಪ್ರತ್ಯಕ್ಷ ಸಾಕ್ಷಿ. ನನ್ನ ಕಣ್ಣ ಮುಂದೆಯೇ ಘಟನೆ ನಡೆದಿದೆ ಎಂದಿದ್ದ ಮಂಡ್ಯ ಮೂಲದ ಮಹಿಳೆ ಬಗ್ಗೆಯೇ ಸ್ಫೋಟಕ ಆರೋಪ ಕೇಳಿಬಂದಿದೆ. TV9 ಜೊತೆ ಮಾತನಾಡಿರುವ ಮಹಿಳೆಯ ಸಹೋದರ, ಹತ್ತು ಹಲವು ವಿಚಾರಗಳನ್ನ ಬಿಚ್ಚಿಟ್ಟಿದ್ದಾರೆ. ತನ್ನ ಸಹೋದರಿ ಹೇಳಿದ್ದೆಲ್ಲ ಎಷ್ಟು ಸತ್ಯ ಎಂಬ ಬಗ್ಗೆ EXCLUSIVE ಮಾಹಿತಿ ನೀಡಿದ್ದಾರೆ.

ಸೌಜನ್ಯ ಕೇಸ್​: ನಾನೇ ಸಾಕ್ಷಿ ಎಂದಿದ್ದ ಮಹಿಳೆ ಬಗ್ಗೆಯೇ ಸ್ಫೋಟಕ ಆರೋಪ!
ಮಂಡ್ಯ ಮಹಿಳೆ ಬಗ್ಗೆ ಸಹೋದರನಿಂದಲೇ ಸ್ಫೋಟಕ ಹೇಳಿಕೆImage Credit source: Google
ದಿಲೀಪ್​, ಚೌಡಹಳ್ಳಿ
| Updated By: ಪ್ರಸನ್ನ ಹೆಗಡೆ|

Updated on:Sep 24, 2025 | 1:32 PM

Share

ಮಂಡ್ಯ, ಸೆಪ್ಟೆಂಬರ್​ 24: ಸೌಜನ್ಯ ಪ್ರಕರಣಕ್ಕೆ (Soujanya Case) ಮತ್ತೊಂದು ಹೊಸ ಟ್ವಿಸ್ಟ್​ ಸಿಕ್ಕಿದೆ. ಸೌಜನ್ಯ ಅತ್ಯಾಚಾರ ಕಣ್ಣಾರೆ ಕಂಡಿದ್ದೆ ಎಂದು ದೂರು ಕೊಟ್ಟಿದ್ದ ಮಂಡ್ಯ (Mandya) ಮೂಲದ ಮಹಿಳೆ ಬಗ್ಗೆ ಆಕೆಯ ಸಹೋದರನೇ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. TV9 ಜೊತೆ ಮಾತನಾಡಿರುವ ಮಹಿಳೆಯ ಸಹೋದರ ಶಿವಕೆಂಪಯ್ಯ, ಆಕೆ ಹೇಳಿದ್ದೆಲ್ಲ ಬರೀ ಸುಳ್ಳು. ಅವಳ ಹಿಂದೆ ಯಾರೋ ನಿಂತು ಈ ರೀತಿ ಹೇಳಿಸುತ್ತಿದ್ದು, ಸೌಜನ್ಯಗೆ ನ್ಯಾಯ ಕೊಡಿಸುವ ಯಾವ ಉದ್ದೇಶವೂ ಆಕೆಗೆ ಇಲ್ಲ ಎಂದಿದ್ದಾರೆ.

ನನ್ನ ಸಹೋದರಿ 16 ವರ್ಷ ಇದ್ದಾಗಲೇ ಕೇರಳದ ಕ್ರಿಶ್ಚಿಯನ್ ಯುವಕನ ಜೊತೆ ಓಡಿ ಹೋಗಿದ್ದು, ಹಲವು ವರ್ಷ ಅಲ್ಲಿಯೇ ಇದ್ದಳು. ಬಳಿಕ 2 ಮಕ್ಕಳ ಜೊತೆ ಮಂಡ್ಯಕ್ಕೆ ಬಂದು ಗಂಡನಿಗೇ ಚಾಕು ಇರಿದಿದ್ದಳು. ಈ ಬಗ್ಗೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿದೆ. ನಂತರ ಮಹಿಳಾ ಸಂಘಟನೆಗೆ ಸೇರಿಕೊಂಡಿರುವ ಈಕೆಗೆ ಕ್ರಿಮಿನಲ್​ ಹಿನ್ನೆಲೆಯಿದೆ. ಅವಳು ಹೇಳೋದೆಲ್ಲ ಬರೀ ಸುಳ್ಳಾಗಿದ್ದು, ಸೌಜನ್ಯ ಕೇಸ್​ ವಿಚಾರವಾಗಿಯೂ ಆಕೆ ಹೇಳ್ತಿರೋದು ಅದನ್ನೇ ಎಂದಿದ್ದಾರೆ.

ಮಂಡ್ಯ ಮಹಿಳೆ ಸಹೋದರ ಹೇಳಿದ್ದೇನು ನೋಡಿ.

ಸಹೋದರಿಯ ನಡತೆಯೇ ಸರಿ ಇಲ್ಲ ಎಂದಿರುವ ಶಿವಕೆಂಪಯ್ಯ, ನನ್ನ ವಿರುದ್ಧವೂ ಆಕೆ ದೂರು ಕೊಟ್ಟಿದ್ದಳು. ಅದೇ ರೀತಿ ಬಹಳ ಜನರ ವಿರುದ್ಧ ಅವಳು ಕಂಪ್ಲೇಂಟ್​ ಕೊಟ್ಟಿದ್ದಾಳೆ. ಆಕೆ 1980ರಲ್ಲೇ ಮನೆ ಬಿಟ್ಟು ಗಾರೆ ಕೆಲಸ ಮಾಡುತ್ತಿದ್ದವನ ಜೊತೆ ಹೋದಳು. ಆ ಸಂಧರ್ಭದಲ್ಲಿ ಅಂತರ್ಜಾತಿ ವಿವಾಹ ಒಪ್ಪಿಕೊಳ್ಳುವ ಸ್ಥಿತಿಯಲ್ಲಿ ನಾವು ಇರಲಿಲ್ಲ. ಇನ್ನು ಸೌಜನ್ಯ ಕೇಸ್​ ವಿಚಾರವಾಗಿ ಒಡನಾಡಿ ಸಂಸ್ಥೆಯವರು ನಮ್ಮನ್ನ ಸಂಪರ್ಕ ಮಾಡಿದ್ರು. ಕೆಲ ಮಾಹಿತಿಯನ್ನೂ ಪಡೆದಿಕೊಂಡಿದ್ದಾರೆ ಎಂದು ಶಿವಕೆಂಪಯ್ಯ TV9ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ರಾಯಚೂರಿಗೆ ತಿಮರೋಡಿ ಗಡಿಪಾರಿಗೆ ವಿರೋಧ: ಮಹೇಶ್​ ಶೆಟ್ಟಿ ಮೇಲಿರೋ ಕೇಸ್​ಗಳು ಎಷ್ಟು?

ಮಂಡ್ಯ ಮಹಿಳೆ ಏನು ಹೇಳಿದ್ದಳು?

ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯದ ಸಮೀಪ ಒಬ್ಬ ಹುಡುಗಿಯ ಅಪಹರಣ ಮಾಡಿದ್ದನ್ನು ನಾನು ಕಣ್ಣಾರೆ ಕಂಡಿದ್ದೇನೆ. ಧರ್ಮಸ್ಥಳ ದೇಗುಲದಲ್ಲಿ ಪೂಜೆ ಸಲ್ಲಿಸಿ, ಪ್ರಕೃತಿ ಚಿಕಿತ್ಸಾಲಯಕ್ಕೆ ಹೊರಟಿದ್ದ ವೇಳೆ ಈ ಘಟನೆ ನನ್ನ ಎದುರಲ್ಲಿಯೇ ನಡೆದಿದೆ. ಘಟನೆ ನೋಡಿದ ಬಳಿಕ ಅಧಿಕಾರಿಗಳಿಗೆ ಈ ಬಗ್ಗೆ ಹೇಳಬೇಕು ಎಂದು ಭಾವಿಸಿದ್ದೆ. ಆದರೆ ಆ ಸಂದರ್ಭ ಅದು ಸಾಧ್ಯವಾಗಲಿಲ್ಲ ಎಂದು ಮಹಿಳೆ ಹೇಳಿದ್ದಳು. ಅಲ್ಲದೆ ತಾನು ಹೇಳುತ್ತಿರುವ ಆ ಸ್ಥಳಕ್ಕೆ ಯಾರೆಲ್ಲ ಬಂದಿದ್ದರು, ಅವರ ವರ್ತನೆ ಹೇಗಿತ್ತು ಎಂಬ ಬಗ್ಗೆಯೂ ಮಹಿಳೆ ತಿಳಿಸಿದ್ದಳು.

ರಾಜ್ಯದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:30 pm, Wed, 24 September 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ