AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಜನ್ಯ ಕೇಸ್​: ನಾನೇ ಸಾಕ್ಷಿ ಎಂದಿದ್ದ ಮಹಿಳೆ ಬಗ್ಗೆಯೇ ಸ್ಫೋಟಕ ಆರೋಪ!

ಧರ್ಮಸ್ಥಳ ಸೌಜನ್ಯ ಕೇಸ್​ ಗೆ ನಾನೇ ಪ್ರತ್ಯಕ್ಷ ಸಾಕ್ಷಿ. ನನ್ನ ಕಣ್ಣ ಮುಂದೆಯೇ ಘಟನೆ ನಡೆದಿದೆ ಎಂದಿದ್ದ ಮಂಡ್ಯ ಮೂಲದ ಮಹಿಳೆ ಬಗ್ಗೆಯೇ ಸ್ಫೋಟಕ ಆರೋಪ ಕೇಳಿಬಂದಿದೆ. TV9 ಜೊತೆ ಮಾತನಾಡಿರುವ ಮಹಿಳೆಯ ಸಹೋದರ, ಹತ್ತು ಹಲವು ವಿಚಾರಗಳನ್ನ ಬಿಚ್ಚಿಟ್ಟಿದ್ದಾರೆ. ತನ್ನ ಸಹೋದರಿ ಹೇಳಿದ್ದೆಲ್ಲ ಎಷ್ಟು ಸತ್ಯ ಎಂಬ ಬಗ್ಗೆ EXCLUSIVE ಮಾಹಿತಿ ನೀಡಿದ್ದಾರೆ.

ಸೌಜನ್ಯ ಕೇಸ್​: ನಾನೇ ಸಾಕ್ಷಿ ಎಂದಿದ್ದ ಮಹಿಳೆ ಬಗ್ಗೆಯೇ ಸ್ಫೋಟಕ ಆರೋಪ!
ಮಂಡ್ಯ ಮಹಿಳೆ ಬಗ್ಗೆ ಸಹೋದರನಿಂದಲೇ ಸ್ಫೋಟಕ ಹೇಳಿಕೆImage Credit source: Google
ದಿಲೀಪ್​, ಚೌಡಹಳ್ಳಿ
| Edited By: |

Updated on:Sep 24, 2025 | 1:32 PM

Share

ಮಂಡ್ಯ, ಸೆಪ್ಟೆಂಬರ್​ 24: ಸೌಜನ್ಯ ಪ್ರಕರಣಕ್ಕೆ (Soujanya Case) ಮತ್ತೊಂದು ಹೊಸ ಟ್ವಿಸ್ಟ್​ ಸಿಕ್ಕಿದೆ. ಸೌಜನ್ಯ ಅತ್ಯಾಚಾರ ಕಣ್ಣಾರೆ ಕಂಡಿದ್ದೆ ಎಂದು ದೂರು ಕೊಟ್ಟಿದ್ದ ಮಂಡ್ಯ (Mandya) ಮೂಲದ ಮಹಿಳೆ ಬಗ್ಗೆ ಆಕೆಯ ಸಹೋದರನೇ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. TV9 ಜೊತೆ ಮಾತನಾಡಿರುವ ಮಹಿಳೆಯ ಸಹೋದರ ಶಿವಕೆಂಪಯ್ಯ, ಆಕೆ ಹೇಳಿದ್ದೆಲ್ಲ ಬರೀ ಸುಳ್ಳು. ಅವಳ ಹಿಂದೆ ಯಾರೋ ನಿಂತು ಈ ರೀತಿ ಹೇಳಿಸುತ್ತಿದ್ದು, ಸೌಜನ್ಯಗೆ ನ್ಯಾಯ ಕೊಡಿಸುವ ಯಾವ ಉದ್ದೇಶವೂ ಆಕೆಗೆ ಇಲ್ಲ ಎಂದಿದ್ದಾರೆ.

ನನ್ನ ಸಹೋದರಿ 16 ವರ್ಷ ಇದ್ದಾಗಲೇ ಕೇರಳದ ಕ್ರಿಶ್ಚಿಯನ್ ಯುವಕನ ಜೊತೆ ಓಡಿ ಹೋಗಿದ್ದು, ಹಲವು ವರ್ಷ ಅಲ್ಲಿಯೇ ಇದ್ದಳು. ಬಳಿಕ 2 ಮಕ್ಕಳ ಜೊತೆ ಮಂಡ್ಯಕ್ಕೆ ಬಂದು ಗಂಡನಿಗೇ ಚಾಕು ಇರಿದಿದ್ದಳು. ಈ ಬಗ್ಗೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿದೆ. ನಂತರ ಮಹಿಳಾ ಸಂಘಟನೆಗೆ ಸೇರಿಕೊಂಡಿರುವ ಈಕೆಗೆ ಕ್ರಿಮಿನಲ್​ ಹಿನ್ನೆಲೆಯಿದೆ. ಅವಳು ಹೇಳೋದೆಲ್ಲ ಬರೀ ಸುಳ್ಳಾಗಿದ್ದು, ಸೌಜನ್ಯ ಕೇಸ್​ ವಿಚಾರವಾಗಿಯೂ ಆಕೆ ಹೇಳ್ತಿರೋದು ಅದನ್ನೇ ಎಂದಿದ್ದಾರೆ.

ಮಂಡ್ಯ ಮಹಿಳೆ ಸಹೋದರ ಹೇಳಿದ್ದೇನು ನೋಡಿ.

ಸಹೋದರಿಯ ನಡತೆಯೇ ಸರಿ ಇಲ್ಲ ಎಂದಿರುವ ಶಿವಕೆಂಪಯ್ಯ, ನನ್ನ ವಿರುದ್ಧವೂ ಆಕೆ ದೂರು ಕೊಟ್ಟಿದ್ದಳು. ಅದೇ ರೀತಿ ಬಹಳ ಜನರ ವಿರುದ್ಧ ಅವಳು ಕಂಪ್ಲೇಂಟ್​ ಕೊಟ್ಟಿದ್ದಾಳೆ. ಆಕೆ 1980ರಲ್ಲೇ ಮನೆ ಬಿಟ್ಟು ಗಾರೆ ಕೆಲಸ ಮಾಡುತ್ತಿದ್ದವನ ಜೊತೆ ಹೋದಳು. ಆ ಸಂಧರ್ಭದಲ್ಲಿ ಅಂತರ್ಜಾತಿ ವಿವಾಹ ಒಪ್ಪಿಕೊಳ್ಳುವ ಸ್ಥಿತಿಯಲ್ಲಿ ನಾವು ಇರಲಿಲ್ಲ. ಇನ್ನು ಸೌಜನ್ಯ ಕೇಸ್​ ವಿಚಾರವಾಗಿ ಒಡನಾಡಿ ಸಂಸ್ಥೆಯವರು ನಮ್ಮನ್ನ ಸಂಪರ್ಕ ಮಾಡಿದ್ರು. ಕೆಲ ಮಾಹಿತಿಯನ್ನೂ ಪಡೆದಿಕೊಂಡಿದ್ದಾರೆ ಎಂದು ಶಿವಕೆಂಪಯ್ಯ TV9ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ರಾಯಚೂರಿಗೆ ತಿಮರೋಡಿ ಗಡಿಪಾರಿಗೆ ವಿರೋಧ: ಮಹೇಶ್​ ಶೆಟ್ಟಿ ಮೇಲಿರೋ ಕೇಸ್​ಗಳು ಎಷ್ಟು?

ಮಂಡ್ಯ ಮಹಿಳೆ ಏನು ಹೇಳಿದ್ದಳು?

ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯದ ಸಮೀಪ ಒಬ್ಬ ಹುಡುಗಿಯ ಅಪಹರಣ ಮಾಡಿದ್ದನ್ನು ನಾನು ಕಣ್ಣಾರೆ ಕಂಡಿದ್ದೇನೆ. ಧರ್ಮಸ್ಥಳ ದೇಗುಲದಲ್ಲಿ ಪೂಜೆ ಸಲ್ಲಿಸಿ, ಪ್ರಕೃತಿ ಚಿಕಿತ್ಸಾಲಯಕ್ಕೆ ಹೊರಟಿದ್ದ ವೇಳೆ ಈ ಘಟನೆ ನನ್ನ ಎದುರಲ್ಲಿಯೇ ನಡೆದಿದೆ. ಘಟನೆ ನೋಡಿದ ಬಳಿಕ ಅಧಿಕಾರಿಗಳಿಗೆ ಈ ಬಗ್ಗೆ ಹೇಳಬೇಕು ಎಂದು ಭಾವಿಸಿದ್ದೆ. ಆದರೆ ಆ ಸಂದರ್ಭ ಅದು ಸಾಧ್ಯವಾಗಲಿಲ್ಲ ಎಂದು ಮಹಿಳೆ ಹೇಳಿದ್ದಳು. ಅಲ್ಲದೆ ತಾನು ಹೇಳುತ್ತಿರುವ ಆ ಸ್ಥಳಕ್ಕೆ ಯಾರೆಲ್ಲ ಬಂದಿದ್ದರು, ಅವರ ವರ್ತನೆ ಹೇಗಿತ್ತು ಎಂಬ ಬಗ್ಗೆಯೂ ಮಹಿಳೆ ತಿಳಿಸಿದ್ದಳು.

ರಾಜ್ಯದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:30 pm, Wed, 24 September 25

Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​