AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಂಡವಪುರ: ಬೇಬಿಬೆಟ್ಟ ಸಮೀಪದ ಗೋಮಾಳದಲ್ಲಿ ಸ್ಫೋಟಕಗಳು ಪತ್ತೆ

ಗಿಡಗಳ ಮಧ್ಯೆ ಬಿದ್ದಿರುವ ಜಿಲೆಟಿನ್ ಕಡ್ಡಿಗಳನ್ನು ಕಂಡ ತಕ್ಷಣ ರೈತರು ಅಧಿಕಾರಿಗಳ ಗಮನಕ್ಕೆ ತಂದರು.

ಪಾಂಡವಪುರ: ಬೇಬಿಬೆಟ್ಟ ಸಮೀಪದ ಗೋಮಾಳದಲ್ಲಿ ಸ್ಫೋಟಕಗಳು ಪತ್ತೆ
ಪಾಂಡವಪುರ ತಾಲ್ಲೂಕು ಬೇಬಿಬೆಟ್ಟ ಸಮೀಪ ಗ್ರಾಮಸ್ಥರ ಕಣ್ಣಿಗೆ ಬಿದ್ದ ಸ್ಫೋಟಕಗಳು
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Aug 09, 2021 | 3:30 PM

Share

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಬೇಬಿಬೆಟ್ಟದಲ್ಲಿ ಜಾನುವಾರು ಮೇಯಿಸುತ್ತಿದ್ದ ರೈತರ ಕಣ್ಣಿಗೆ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ. ಗಿಡಗಳ ಮಧ್ಯೆ ಬಿದ್ದಿರುವ ಜಿಲೆಟಿನ್ ಕಡ್ಡಿಗಳನ್ನು ಕಂಡ ತಕ್ಷಣ ರೈತರು ಅಧಿಕಾರಿಗಳ ಗಮನಕ್ಕೆ ತಂದರು. ಬೇಬಿಬೆಟ್ಟ ವ್ಯಾಪ್ತಿಯ ಬನ್ನಂಗಾಡಿ ಗ್ರಾಮದ ಸರ್ವೆ ನಂಬರ್ 24ರ ಗೋಮಾಳ ಪ್ರದೇಶದಲ್ಲಿ ಸ್ಫೋಟಕ ಪತ್ತೆಯಾಗಿದೆ.

ಈ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದಲೂ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದಿಂದ ಸ್ಫೋಟಕ ಶೋಧ ಕಾರ್ಯಾಚರಣೆ ನಡೆಯುತ್ತಿತ್ತು. ಶೋಧ ಕಾರ್ಯಾಚರಣೆ ವೇಳೆ ಪತ್ತೆಯಾಗದ ಸ್ಪೋಟಕಗಳು ನಂತರದ ದಿನಗಳಲ್ಲಿ ರೈತರ ಕಣ್ಣಿಗೆ ಬಿದ್ದಿರುವುದು ಹಲವರ ಹುಬ್ಬೇರುವಂತೆ ಮಾಡಿದೆ. ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಸಿಬ್ಬಂದಿ ಸರಿಯಾಗಿ ಶೋಧ ನಡೆಸಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.

ಬೇಬಿಬೆಟ್ಟದಲ್ಲಿ ನಡೆಯುತ್ತಿರುವ ಕಲ್ಲುಗಣಿಗಾರಿಕೆಯಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ (ಕೆಆರ್​ಎಸ್​) ಧಕ್ಕೆಯಾಗಿದೆ ಎಂದು ಸಂಸದೆ ಸುಮಲತಾ ಕಳೆದ ಜುಲೈ ತಿಂಗಳಲ್ಲಿ ಆರೋಪಿಸಿದ್ದರು. ಈ ಸಂಬಂಧ ಪಾಂಡವಪುರ ತಾಲ್ಲೂಕಿನ ವಿವಿಧೆಡೆ ಸ್ಥಳಪರಿಶೀಲನೆ ನಡೆಸಿದ್ದ ಅವರು ಅಧಿಕಾರಿಗಳ ಸಭೆ ನಡೆಸಿ ಎಚ್ಚರಿಕೆ ನೀಡಿದ್ದರು. ನಂತರ ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿ, ಕೆಆರ್​ಎಸ್ ರಕ್ಷಿಸುವಂತೆ ಮನವಿ ಮಾಡಿದ್ದರು.

ಕಳೆದ ತಿಂಗಳು ಬೇಬಿಬೆಟ್ಟ ಗಣಿಗಾರಿಕೆ ಪ್ರದೇಶದಲ್ಲಿ ಸಂಸದೆ ಸುಮಲತಾ ಪರಿಶೀಲನೆ ನಡೆಸಲೆಂದು ಸ್ಥಳಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಗಣಿಗಾರಿಕೆಯ ಪರ, ವಿರೋಧದ ಕೂಗು ಕೇಳಿಬಂದಿತ್ತು. ಗಣಿಗಾರಿಕೆಯಿಂದ ಸಮಸ್ಯೆ ಆಗ್ತಿದೆ ದಯವಿಟ್ಟು ನಿಲ್ಲಿಸಿ ಎಂದು ಗಣಿಗಾರಿಕೆ ನಿಲ್ಲಿಸಲು ಬೇಬಿ ಗ್ರಾಮಸ್ಥರ ಮನವಿ ಒಂದೆಡೆಯಾದರೆ, ಅದೇ ಸ್ಥಳದಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವಂತೆ ಒತ್ತಾಯವೂ ಕೇಳಿಬಂದಿತ್ತು. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಗ್ರಾಮದಲ್ಲಿ ಬೇಬಿ ಸರ್ಕಲ್ ಗಣಿಗಾರಿಕೆ ಬಗ್ಗೆ ಪರ, ವಿರೋಧ ಘೋಷಣೆಗಳು ಮೊಳಗಿದ್ದವು.

(Explosives found near Babybetta of Pandavapura Taluk)

ಇದನ್ನೂ ಓದಿ: Mandya: ಕೆಆರ್​ಎಸ್ ಸಮೀಪ ಗಣಿ ಪ್ರದೇಶದಲ್ಲಿ ಸ್ಫೋಟಕ ಪತ್ತೆ; ಮುಂದುವರಿದ ಶೋಧಕಾರ್ಯ

ಇದನ್ನೂ ಓದಿ: ಬೇಬಿಬೆಟ್ಟದಲ್ಲಿ ಸಂಸದೆ ಸುಮಲತಾ ಪರಿಶೀಲನೆ: ಗಣಿಗಾರಿಕೆ ಪರ, ವಿರೋಧ ಘೋಷಣೆ ಕೂಗಿದ ಜನರು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ