AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಪಾಲಿಶ್ ಅಕ್ಕಿ ಬಳಿಕ ನಕಲಿ ಗೊಬ್ಬರ ದಂಧೆ ಬೆಳಕಿಗೆ; ಸಾವಯವ ಗೊಬ್ಬರ ಹೆಸರಲ್ಲಿ ರೈತರಿಗೆ ದೋಖಾ

ಕೃಷಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳ ಜಂಟಿ ದಾಳಿ ವೇಳೆ 500ಕ್ಕೂ ಹೆಚ್ಚು ಚೀಲ ಗೊಬ್ಬರ, 1 ಲಾರಿ ಜಪ್ತಿ ಮಾಡಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೊಲ್ಲರದೊಡ್ಡಿ ಬಳಿಯ ನಕಲಿ ಗೊಬ್ಬರ ತಯಾರಿಕಾ ಘಟಕದಲ್ಲಿ ಘಟನೆ ನಡೆದಿದೆ. ನಕಲಿ ಗೊಬ್ಬರ ತಯಾರಿಸುತ್ತಿದ್ದ ಆರೋಪಿಗಳು ಪರಾರಿ ಆಗಿದ್ದಾರೆ.

ಮಂಡ್ಯ: ಪಾಲಿಶ್ ಅಕ್ಕಿ ಬಳಿಕ ನಕಲಿ ಗೊಬ್ಬರ ದಂಧೆ ಬೆಳಕಿಗೆ; ಸಾವಯವ ಗೊಬ್ಬರ ಹೆಸರಲ್ಲಿ ರೈತರಿಗೆ ದೋಖಾ
ನಕಲಿ ಗೊಬ್ಬರ ದಂಧೆ ಬೆಳಕಿಗೆ
TV9 Web
| Edited By: |

Updated on: Mar 11, 2022 | 11:04 AM

Share

ಮಂಡ್ಯ: ಇಲ್ಲಿ ಸಾವಯವ ಗೊಬ್ಬರ ಹೆಸರಲ್ಲಿ ರೈತರಿಗೆ ವಂಚನೆ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಾಹಿತಿ ಹಿನ್ನೆಲೆ ನಕಲಿ ಗೊಬ್ಬರ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಲಾಗಿದೆ. ಕೃಷಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳ ಜಂಟಿ ದಾಳಿ ವೇಳೆ 500ಕ್ಕೂ ಹೆಚ್ಚು ಚೀಲ ಗೊಬ್ಬರ, 1 ಲಾರಿ ಜಪ್ತಿ ಮಾಡಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೊಲ್ಲರದೊಡ್ಡಿ ಬಳಿಯ ನಕಲಿ ಗೊಬ್ಬರ ತಯಾರಿಕಾ ಘಟಕದಲ್ಲಿ ಘಟನೆ ನಡೆದಿದೆ. ನಕಲಿ ಗೊಬ್ಬರ ತಯಾರಿಸುತ್ತಿದ್ದ ಆರೋಪಿಗಳು ಪರಾರಿ ಆಗಿದ್ದಾರೆ.

ಮಂಡ್ಯದಲ್ಲಿ ಪಾಲಿಶ್ ಅಕ್ಕಿ ಬಳಿಕ ನಕಲಿ ಗೊಬ್ಬರ ದಂಧೆ ಬೆಳಕಿಗೆ ಬಂದಿದೆ. ಸಾವಯವ ಗೊಬ್ಬರ ಹೆಸರಲ್ಲಿ ರೈತರಿಗೆ ದೋಖಾ ಆಗುತ್ತಿದೆ. ಈ ಹಿನ್ನೆಲೆ, ಖಚಿತ ಮಾಹಿತಿ ಪಡೆದು ಕೃಷಿ ಇಲಾಜೆ ಜಂಟಿ ನಿರ್ದೇಶಕ ಚಂದ್ರಶೇಖರ್ ದಾಳಿ ನಡೆಸಿದ್ದಾರೆ. ಯಾವುದೇ ಅನುಮತಿ ಪಡೆಯದೆ ನಕಲಿ ಗೊಬ್ಬರ ತಯಾರಿಕಾ ಘಟಕ ಸ್ಥಾಪನೆ ಮಾಡಲಾಗಿದೆ. ಕಾರ್ಖಾನೆಗಳಲ್ಲಿ ಸಿಗುವ ಪ್ರೆಸ್ ಮಡ್, ಮಲಾಸಸ್, ಮಣ್ಣು, ಬೂದಿ ಬಳಸಿ ನಕಲಿ ಗೊಬ್ಬರ ತಯಾರು ಮಾಡಲಾಗುತ್ತಿದೆ. ವಿವಿಧ ಬ್ರಾಂಡ್‌‌ಗಳ ಹೆಸರಿನಲ್ಲಿ ನೂರಾರು ಚೀಲಗಳು ಹೊರ ಜಿಲ್ಲೆಗೆ ರವಾನೆ ಮಾಡಲಾಗುತ್ತಿದೆ ಎಂದು ಮಾಹಿತಿ ಲಭಿಸಿದೆ.

ದಾಳಿ ವೇಳೆ 500ಕ್ಕೂ ಹೆಚ್ಚು ಚೀಲ ಗೊಬ್ಬರ, 1 ಲಾರಿ ವಶಕ್ಕೆ ಪಡೆಯಲಾಗಿದೆ. ಅಧಿಕಾರಿಗಳು ದಾಳಿ ಮಾಡ್ತಿದ್ದಂತೆ ನಕಲಿ ಗೊಬ್ಬರ ತಯಾರಕರು ಪರಾರಿ ಆಗಿದ್ದಾರೆ. ನಕಲಿ ಗೊಬ್ಬರ ಬಳಕೆಯಿಂದ ರೈತನಿಗೆ ಯಾವುದೇ ಪ್ರಯೋಜನ ಇಲ್ಲ. ಆದ್ರೆ ಬೆಳೆ ಹಾನಿಯಾಗುವ ಸಾಧ್ಯತೆಗಳಿರುತ್ತವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರಯೋಗಾಲಯಕ್ಕೆ ನಕಲಿ ಗೊಬ್ಬರ ಸ್ಯಾಂಪಲ್ ರವಾನೆ ಮಾಡಲಾಗಿದೆ. ಏನೆಲ್ಲಾ ರಾಸಾಯನಿಕ ಬಳಸಿ ನಕಲಿ ಗೊಬ್ಬರ ತಯಾರಿಸಿದ್ದಾರೆಂದು ತಿಳಿಯಲು ಲ್ಯಾಬ್‌ಗೆ ರವಾನೆ ಮಾಡಲಾಗಿದೆ.

ರಾಮನಗರ: ಅಕ್ರಮವಾಗಿ ಪಡಿತರ ಸಾಗಿಸುತ್ತಿದ್ದ ಕ್ಯಾಂಟರ್, 115 ಚೀಲ ಅಕ್ಕಿ ವಶ

ಯಾರಬ್ ನಗರದ ಬಳಿ ಅಕ್ರಮವಾಗಿ ಪಡಿತರ ಸಾಗಿಸುತ್ತಿದ್ದ ಕ್ಯಾಂಟರ್, 115 ಚೀಲ ಅಕ್ಕಿ ವಶಕ್ಕೆ ಪಡೆಯಲಾಗಿದೆ. ದಾಳಿ ವೇಳೆ ಕ್ಯಾಂಟರ್ ಬಿಟ್ಟು ಚಾಲಕ ಸೈಯದ್ ಸುಹೇಲ್ ಪರಾರಿ ಆಗಿದ್ದಾನೆ ಎಂದು ತಿಳಿದುಬಂದಿದೆ. ರಾಮನಗರ ಟೌನ್​​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Crime News: ಬೈಕ್ ಕಳ್ಳರ ಬಂಧನ, ಪತ್ರಕರ್ತನ ವಿರುದ್ಧ ಎಫ್​ಐಆರ್ ದಾಖಲು, ನಕಲಿ ಸಿಮೆಂಟ್ ಘಟಕದ ಮೇಲೆ ಪೊಲೀಸರ ದಾಳಿ

ಇದನ್ನೂ ಓದಿ: ಗಲಾಟೆಯಲ್ಲಿ ಸುಮಲತಾ ಕಾರು ಚಾಲಕನಿಗೆ ಗಾಯ: ಪೊಲೀಸ್ ಠಾಣೆಗೆ ದೂರು ನೀಡಿದ ಮಂಡ್ಯ ಸಂಸದೆ!

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ