AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಪಾಲಿಶ್ ಅಕ್ಕಿ ಬಳಿಕ ನಕಲಿ ಗೊಬ್ಬರ ದಂಧೆ ಬೆಳಕಿಗೆ; ಸಾವಯವ ಗೊಬ್ಬರ ಹೆಸರಲ್ಲಿ ರೈತರಿಗೆ ದೋಖಾ

ಕೃಷಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳ ಜಂಟಿ ದಾಳಿ ವೇಳೆ 500ಕ್ಕೂ ಹೆಚ್ಚು ಚೀಲ ಗೊಬ್ಬರ, 1 ಲಾರಿ ಜಪ್ತಿ ಮಾಡಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೊಲ್ಲರದೊಡ್ಡಿ ಬಳಿಯ ನಕಲಿ ಗೊಬ್ಬರ ತಯಾರಿಕಾ ಘಟಕದಲ್ಲಿ ಘಟನೆ ನಡೆದಿದೆ. ನಕಲಿ ಗೊಬ್ಬರ ತಯಾರಿಸುತ್ತಿದ್ದ ಆರೋಪಿಗಳು ಪರಾರಿ ಆಗಿದ್ದಾರೆ.

ಮಂಡ್ಯ: ಪಾಲಿಶ್ ಅಕ್ಕಿ ಬಳಿಕ ನಕಲಿ ಗೊಬ್ಬರ ದಂಧೆ ಬೆಳಕಿಗೆ; ಸಾವಯವ ಗೊಬ್ಬರ ಹೆಸರಲ್ಲಿ ರೈತರಿಗೆ ದೋಖಾ
ನಕಲಿ ಗೊಬ್ಬರ ದಂಧೆ ಬೆಳಕಿಗೆ
TV9 Web
| Edited By: |

Updated on: Mar 11, 2022 | 11:04 AM

Share

ಮಂಡ್ಯ: ಇಲ್ಲಿ ಸಾವಯವ ಗೊಬ್ಬರ ಹೆಸರಲ್ಲಿ ರೈತರಿಗೆ ವಂಚನೆ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಾಹಿತಿ ಹಿನ್ನೆಲೆ ನಕಲಿ ಗೊಬ್ಬರ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಲಾಗಿದೆ. ಕೃಷಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳ ಜಂಟಿ ದಾಳಿ ವೇಳೆ 500ಕ್ಕೂ ಹೆಚ್ಚು ಚೀಲ ಗೊಬ್ಬರ, 1 ಲಾರಿ ಜಪ್ತಿ ಮಾಡಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೊಲ್ಲರದೊಡ್ಡಿ ಬಳಿಯ ನಕಲಿ ಗೊಬ್ಬರ ತಯಾರಿಕಾ ಘಟಕದಲ್ಲಿ ಘಟನೆ ನಡೆದಿದೆ. ನಕಲಿ ಗೊಬ್ಬರ ತಯಾರಿಸುತ್ತಿದ್ದ ಆರೋಪಿಗಳು ಪರಾರಿ ಆಗಿದ್ದಾರೆ.

ಮಂಡ್ಯದಲ್ಲಿ ಪಾಲಿಶ್ ಅಕ್ಕಿ ಬಳಿಕ ನಕಲಿ ಗೊಬ್ಬರ ದಂಧೆ ಬೆಳಕಿಗೆ ಬಂದಿದೆ. ಸಾವಯವ ಗೊಬ್ಬರ ಹೆಸರಲ್ಲಿ ರೈತರಿಗೆ ದೋಖಾ ಆಗುತ್ತಿದೆ. ಈ ಹಿನ್ನೆಲೆ, ಖಚಿತ ಮಾಹಿತಿ ಪಡೆದು ಕೃಷಿ ಇಲಾಜೆ ಜಂಟಿ ನಿರ್ದೇಶಕ ಚಂದ್ರಶೇಖರ್ ದಾಳಿ ನಡೆಸಿದ್ದಾರೆ. ಯಾವುದೇ ಅನುಮತಿ ಪಡೆಯದೆ ನಕಲಿ ಗೊಬ್ಬರ ತಯಾರಿಕಾ ಘಟಕ ಸ್ಥಾಪನೆ ಮಾಡಲಾಗಿದೆ. ಕಾರ್ಖಾನೆಗಳಲ್ಲಿ ಸಿಗುವ ಪ್ರೆಸ್ ಮಡ್, ಮಲಾಸಸ್, ಮಣ್ಣು, ಬೂದಿ ಬಳಸಿ ನಕಲಿ ಗೊಬ್ಬರ ತಯಾರು ಮಾಡಲಾಗುತ್ತಿದೆ. ವಿವಿಧ ಬ್ರಾಂಡ್‌‌ಗಳ ಹೆಸರಿನಲ್ಲಿ ನೂರಾರು ಚೀಲಗಳು ಹೊರ ಜಿಲ್ಲೆಗೆ ರವಾನೆ ಮಾಡಲಾಗುತ್ತಿದೆ ಎಂದು ಮಾಹಿತಿ ಲಭಿಸಿದೆ.

ದಾಳಿ ವೇಳೆ 500ಕ್ಕೂ ಹೆಚ್ಚು ಚೀಲ ಗೊಬ್ಬರ, 1 ಲಾರಿ ವಶಕ್ಕೆ ಪಡೆಯಲಾಗಿದೆ. ಅಧಿಕಾರಿಗಳು ದಾಳಿ ಮಾಡ್ತಿದ್ದಂತೆ ನಕಲಿ ಗೊಬ್ಬರ ತಯಾರಕರು ಪರಾರಿ ಆಗಿದ್ದಾರೆ. ನಕಲಿ ಗೊಬ್ಬರ ಬಳಕೆಯಿಂದ ರೈತನಿಗೆ ಯಾವುದೇ ಪ್ರಯೋಜನ ಇಲ್ಲ. ಆದ್ರೆ ಬೆಳೆ ಹಾನಿಯಾಗುವ ಸಾಧ್ಯತೆಗಳಿರುತ್ತವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರಯೋಗಾಲಯಕ್ಕೆ ನಕಲಿ ಗೊಬ್ಬರ ಸ್ಯಾಂಪಲ್ ರವಾನೆ ಮಾಡಲಾಗಿದೆ. ಏನೆಲ್ಲಾ ರಾಸಾಯನಿಕ ಬಳಸಿ ನಕಲಿ ಗೊಬ್ಬರ ತಯಾರಿಸಿದ್ದಾರೆಂದು ತಿಳಿಯಲು ಲ್ಯಾಬ್‌ಗೆ ರವಾನೆ ಮಾಡಲಾಗಿದೆ.

ರಾಮನಗರ: ಅಕ್ರಮವಾಗಿ ಪಡಿತರ ಸಾಗಿಸುತ್ತಿದ್ದ ಕ್ಯಾಂಟರ್, 115 ಚೀಲ ಅಕ್ಕಿ ವಶ

ಯಾರಬ್ ನಗರದ ಬಳಿ ಅಕ್ರಮವಾಗಿ ಪಡಿತರ ಸಾಗಿಸುತ್ತಿದ್ದ ಕ್ಯಾಂಟರ್, 115 ಚೀಲ ಅಕ್ಕಿ ವಶಕ್ಕೆ ಪಡೆಯಲಾಗಿದೆ. ದಾಳಿ ವೇಳೆ ಕ್ಯಾಂಟರ್ ಬಿಟ್ಟು ಚಾಲಕ ಸೈಯದ್ ಸುಹೇಲ್ ಪರಾರಿ ಆಗಿದ್ದಾನೆ ಎಂದು ತಿಳಿದುಬಂದಿದೆ. ರಾಮನಗರ ಟೌನ್​​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Crime News: ಬೈಕ್ ಕಳ್ಳರ ಬಂಧನ, ಪತ್ರಕರ್ತನ ವಿರುದ್ಧ ಎಫ್​ಐಆರ್ ದಾಖಲು, ನಕಲಿ ಸಿಮೆಂಟ್ ಘಟಕದ ಮೇಲೆ ಪೊಲೀಸರ ದಾಳಿ

ಇದನ್ನೂ ಓದಿ: ಗಲಾಟೆಯಲ್ಲಿ ಸುಮಲತಾ ಕಾರು ಚಾಲಕನಿಗೆ ಗಾಯ: ಪೊಲೀಸ್ ಠಾಣೆಗೆ ದೂರು ನೀಡಿದ ಮಂಡ್ಯ ಸಂಸದೆ!

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್