AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ಹಠಾತ್ ನಿಧನದಿಂದ ರಾಜ್​ಕುಮಾರ್ ಹೆಸರಿನ ಹೋಟೆಲ್ ನಡೆಸುತ್ತಿದ್ದ ಅಭಿಮಾನಿ ಸಾವು!

ಅಭಿಮಾನಿ ರಾಜೇಶ್ ಪುನೀತ್ ನಿಧನದ ಬಳಿಕ ಸರಿಯಾಗಿ ಊಟ ಸೇವಿಸದೇ ಅಸ್ವಸ್ಥರಾಗಿದ್ದರು. ನಿನ್ನೆ (ಅ.30) ಅಂತಿಮ ದರ್ಶನಕ್ಕೆ ಹೋಗುವುದಾಗಿ ರಾಜೇಶ್ ಮನೆ ಬಿಟ್ಟಿದ್ದರು.

ಪುನೀತ್ ಹಠಾತ್ ನಿಧನದಿಂದ ರಾಜ್​ಕುಮಾರ್ ಹೆಸರಿನ ಹೋಟೆಲ್ ನಡೆಸುತ್ತಿದ್ದ ಅಭಿಮಾನಿ ಸಾವು!
ರಾಜ್ಕುಮಾರ್ ಹೆಸರಿನ ಹೋಟೆಲ್ ನಡೆಸುತ್ತಿದ್ದ ಅಭಿಮಾನಿ ಸಾವನ್ನಪ್ಪಿದ್ದಾರೆ
TV9 Web
| Edited By: |

Updated on:Oct 31, 2021 | 11:11 AM

Share

ಮಂಡ್ಯ: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಗಲಿಕೆ ಕೋಟ್ಯಾಂತರ ಅಭಿಮಾನಿಗಳಿಗೆ ನೋವು ತರಿಸಿದೆ. ಕನ್ನಡ ಚಿತ್ರರಂಗಕ್ಕೆ ಅಪ್ಪು ಮರಣ ತುಂಬಲಾರದ ನಷ್ಟ. ಇನ್ನು ಪುನೀತ್ ಹಠಾತ್ ನಿಧನದಿಂದ ಕೆಲ ಅಭಿಮಾನಿಗಳು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಂಡ್ಯದಲ್ಲಿ ಇದೀಗ ಮತ್ತೊಬ್ಬ ಅಭಿಮಾನಿ ಪುನೀತ್ ನಿಧನದ ಆಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದ ಕೆಎಂ ರಾಜೇಶ್ (50) ಎಂಬುವವರು ಸಾವನ್ನಪ್ಪಿದ್ದಾರೆ.

ಅಭಿಮಾನಿ ರಾಜೇಶ್ ಪುನೀತ್ ನಿಧನದ ಬಳಿಕ ಸರಿಯಾಗಿ ಊಟ ಸೇವಿಸದೇ ಅಸ್ವಸ್ಥರಾಗಿದ್ದರು. ನಿನ್ನೆ (ಅ.30) ಅಂತಿಮ ದರ್ಶನಕ್ಕೆ ಹೋಗುವುದಾಗಿ ರಾಜೇಶ್ ಮನೆ ಬಿಟ್ಟಿದ್ದರು. ಮಂಡ್ಯದ ಸಿಲ್ವರ್ ಜ್ಯೂಬಿಲಿ ಪಾರ್ಕ್ ಬಳಿ ಸುಸ್ತಾಗಿ ಬೀದ್ದಿದ್ದರು. ಸಂಜೆ ಪರಿಚಯಸ್ಥರು ನೋಡಿ ಮನೆಗೆ ಕರೆದುಕೊಂಡು ಹೋಗಿದ್ದರು. ಬಳಿಕ ಕುಟುಂಬಸ್ಥರು ವೈದ್ಯರಿಂದ ಚಿಕಿತ್ಸೆಯನ್ನೂ ಕೊಡಿಸಿದ್ದರು. ಆದರೆ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ರಾಜೇಶ್ ಮೃತಪಟ್ಟಿದ್ದಾರೆ.

ರಾಜೇಶ್ ಡಾ.ರಾಜ್ ಕುಟುಂಬದ ಅಪ್ಪಟ ಅಭಿಮಾನಿಯಾಗಿದ್ದರು. ಡಾ.ರಾಜ್ಕುಮಾರ್ ಎಂದು ಹೆಸರಿಟ್ಟು ಹೋಟೆಲ್ ನಡೆಸುತ್ತಿದ್ದರು. ಆದರೆ ಪುನೀತ್ ಸಾವಿನ ಸುದ್ಧಿ ಕೇಳಿ ಅಸ್ವಸ್ಥರಾಗಿದ್ದ ಅಭಿಮಾನಿ ಮೃತಪಟ್ಟಿದ್ದಾರೆ. ಆ ಮೂಲಕ ಮಂಡ್ಯದಲ್ಲಿ ಅಭಿಮಾನಿಗಳ ಸಾವಿನ ಸಂಖ್ಯೆ ಎರಡಕ್ಕೇರಿದೆ. ನಿನ್ನೆ ಮದ್ದೂರು ತಾಲೂಕಿನ ಯಲಾದಹಳ್ಳಿ ಗ್ರಾಮದ ವೈಎಸ್ ಸುರೇಶ್ ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದರು.

ಇದನ್ನೂಓದಿ

Puneeth Rajkumar: ಅಭಿಮಾನಿಗಳು ದುಡುಕಬೇಡಿ, ನಿಮ್ಮ ಕುಟುಂಬ ನೋಡಿಕೊಳ್ಳಿ: ಶಿವರಾಜ್ ಕುಮಾರ್ ಕಿವಿಮಾತು

Puneeth Rajkumar death: ಪುನೀತ್ ರಾಜಕುಮಾರ್ ನಿಧನದ ಸುದ್ದಿ ಕೇಳಿ ಮತ್ತೊಬ್ಬ ಅಭಿಮಾನಿ ಹೃದಯಾಘಾತಕ್ಕೆ ಬಲಿ

Published On - 11:11 am, Sun, 31 October 21

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ