AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಆರ್​ಎಸ್​ ಡ್ಯಾಂ ಬಳಿ ರೈತರ ಅಹೋರಾತ್ರಿ ಧರಣಿ ತಾತ್ಕಾಲಿಕ ವಾಪಸ್; ನಾಳೆ ಸಿಎಂ ಭೇಟಿ ಮಾಡಲು ಮುಖಂಡರ ನಿರ್ಧಾರ

ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಇದಾಗಿದ್ದು, ನಾಳೆ (ಸೆ.06) ಸಿಎಂ ಸಿದ್ದರಾಮಯ್ಯ ಅವರನ್ನು ದರ್ಶನ್ ಪುಟ್ಟಣ್ಣಯ್ಯ ಸೇರಿ ಹಲವು ಪ್ರಮುಖ ಮುಖಂಡರು ಭೇಟಿ ಮಾಡಲು ನಿರ್ಧರಿಸಿದ್ದು, ಈ ವೇಳೆ ವಾಸ್ತವ ಪರಿಸ್ಥಿತಿಯನ್ನು ಸಿಎಂಗೆ ಮನವರಿಕೆ ಮಾಡಿಕೊಡಲು ನಿರ್ಧಾರ ಮಾಡಿಕೊಳ್ಳಲಾಗಿದೆ.

ಕೆಆರ್​ಎಸ್​ ಡ್ಯಾಂ ಬಳಿ ರೈತರ ಅಹೋರಾತ್ರಿ ಧರಣಿ ತಾತ್ಕಾಲಿಕ ವಾಪಸ್; ನಾಳೆ ಸಿಎಂ ಭೇಟಿ ಮಾಡಲು ಮುಖಂಡರ ನಿರ್ಧಾರ
ಕಾವೇರಿ ನೀರಿಗಾಗಿ ನಡೆಸುತ್ತಿದ್ದ ಪ್ರತಿಭಟನೆ ವಾಪಾಸ್​
ಪ್ರಶಾಂತ್​ ಬಿ.
| Updated By: ಕಿರಣ್ ಹನುಮಂತ್​ ಮಾದಾರ್|

Updated on: Sep 06, 2023 | 9:48 PM

Share

ಮಂಡ್ಯ, ಸೆ.06: ತಮಿಳುನಾಡಿಗೆ ನೀರು ನಿಲ್ಲಿಸುವಂತೆ ಆಗ್ರಹಿಸಿ ಕಳೆದ 8 ದಿನಗಳಿಂದ ಕೆಆರ್​ಎಸ್​ (KRS) ಡ್ಯಾಂ ಬಳಿ ನಡೆಯುತ್ತಿದ್ದ ಹೋರಾಟವನ್ನು ಇದೀಗ ರೈತ ಸಂಘಟನೆಗಳ ಪ್ರಮುಖ ಮುಖಂಡರ ಸಭೆ ಬಳಿಕ ತಾತ್ಕಾಲಿಕ ವಾಪಸ್ ಪಡೆದಿದ್ದಾರೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ (Darshan Puttannaiah) ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಇದಾಗಿದ್ದು, ನಾಳೆ (ಸೆ.06) ಸಿಎಂ ಸಿದ್ದರಾಮಯ್ಯ ಅವರನ್ನು ದರ್ಶನ್ ಪುಟ್ಟಣ್ಣಯ್ಯ ಸೇರಿ ಹಲವು ಪ್ರಮುಖ ಮುಖಂಡರು ಭೇಟಿ ಮಾಡಲು ನಿರ್ಧಾರ ಮಾಡಿದ್ದಾರೆ. ಇನ್ನು ಈ ವೇಳೆ ವಾಸ್ತವ ಪರಿಸ್ಥಿತಿಯನ್ನು ಸಿಎಂಗೆ ಮನವರಿಕೆ ಮಾಡಿಕೊಡಲು ನಿರ್ಧಾರ ಮಾಡಿಕೊಳ್ಳಲಾಗಿದೆ.

ಸೆ.11ರಂದು ಬೆಂಗಳೂರು-ಮೈಸೂರು ಹೈವೇ ಬಂದ್‌ಗೆ ತೀರ್ಮಾನ

ಇನ್ನು ಈಗಾಗಲೇ ತಾತ್ಕಾಲಿಕ ಧರಣಿಯನ್ನು ವಾಪಾಸ್​ ಪಡೆದಿರುವ ರೈತ ಮುಖಂಡರು, ಮುಂದೆ ಕೆಆರ್‌ಎಸ್‌ ಬದಲು ಶ್ರೀರಂಗಪಟ್ಟಣದಲ್ಲಿ ಧರಣಿ ನಡೆಸಲು ನಿರ್ಧಾರ ಮಾಡಿಕೊಂಡಿದ್ದಾರೆ. ಇದರ ಜೊತೆ ಕೇಂದ್ರಸರ್ಕಾರದ ಗಮನ ಸೆಳೆಯಲು ಸೆ.11ರಂದು ಬೆಂಗಳೂರು-ಮೈಸೂರು ಹೈವೇ ಬಂದ್‌ಗೆ ತೀರ್ಮಾನ ಮಾಡಿದ್ದಾರೆ. ಇನ್ನು ಸೆ.04ರಂದು ಪ್ರತಿಭಟನೆ ವೇಳೆ ಮಾತನಾಡಿದ್ದ ಕರ್ನಾಟಕ ಸರ್ವೋದಯ ಪಕ್ಷದ ಶಾಸಕ ದರ್ಶನ್ ಪುಟ್ಟಣ್ಣಯ್ಯ, ‘ಹೋರಾಟ ಆರನೇ ದಿನಕ್ಕೆ ಕಾಲಿಟ್ಟಿದೆ. ಅಹೋರಾತ್ರಿ ಚಳುವಳಿ ಮಾಡುತ್ತಿದ್ದು, ಇದೀಗ ನಾವು ಕೂಡ ಕಾನೂನು ಹೋರಾಟ ಮಾಡುತ್ತೇವೆ ಎಂದಿದ್ದರು.

ಇದನ್ನೂ ಓದಿ:ತಮಿಳುನಾಡಿಗೆ ಹರಿಸುತ್ತಿರುವ ನೀರಿನ ಪ್ರಮಾಣ ಹೆಚ್ಚಿಸಿದ ಕರ್ನಾಟಕ ಸರ್ಕಾರ, ಕುಸಿದ ಕೆಆರ್​ಎಸ್​ ನೀರಿನ ಮಟ್ಟ

‘ಸರ್ಕಾರದಿಂದ ಯಾವ ರೀತಿ ಕೇಸ್ ಫೈಲ್ ಮಾಡಿದ್ದಾರೆ ಅದರ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇವೆ. ಅದರ ಮೇಲೆ ನಾವು ಸಹ ಪೆಟಿಶನ್ ಹಾಕುತ್ತೇವೆ. ಬುಧವಾರದ ಒಳಗೆ ಕೋರ್ಟ್​ಗೆ ಅರ್ಜಿ ಸಲ್ಲಿಸುತ್ತೇವೆ ಎಂದಿದ್ದ ಅವರು ‘ ಮಾಜಿ ಅಡ್ವೋಕೇಟ್ ಜನರಲ್ ರವಿ ವರ್ಮರನ್ನ ಭೇಟಿ ಮಾಡುತ್ತೇವೆ. ಸರ್ಕಾರ ಯಾವ ರೀತಿ ಅರ್ಜಿ ಹಾಕಿದೇ ಎನ್ನುವುದರ ಮೇಲೆ ನಾವು ರಿಟ್ ಅರ್ಜಿ ಸಲ್ಲಿಸುತ್ತೇವೆ. ಮೊದಲು ಸರ್ಕಾರದಿಂದ ಮಾಹಿತಿ ಪಡೆಯುತ್ತೇವೆ. ಬಳಿಕ ಸರ್ಕಾರದ ಅರ್ಜಿ ಒಳಗೆ ಸೇರಿಸಲು ಸಾಧ್ಯವಾ ಎನ್ನುವುದನ್ನು ಚರ್ಚಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು