AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಲು ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಮಾರಣಾಂತಿಕ ಹಲ್ಲೆ: ಸಿಸಿಟಿವಿಲಿ ಸೆರೆ ಆಯ್ತು ಭಗ್ನ ಪ್ರೇಮಿಯ ಡೆಡ್ಲಿ ಅಟ್ಯಾಕ್

ನಿನ್ನೆ ಬೆಳಗ್ಗೆಯಿಂದ ಕಾಲೇಜು ಬಳಿಯೇ ಹೊಂಚು ಹಾಕಿದ್ದ ಸಂಪತ್, ನಂಬರ್ ಪ್ಲೇಟ್ ಇಲ್ಲದ ಸ್ಕೂಟರ್​​ನಲ್ಲಿ ಬಂದಿದ್ದ. ಸಂಜೆ ಕಾಲೇಜಿನಿಂದ ನವ್ಯ ಹೊರಗೆ ಬರುತ್ತಿದ್ದಂತೆ ಏಕಾಏಕಿ ಹಲ್ಲೆ ಮಾಡಿದ್ದಾನೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಮಾರಣಾಂತಿಕ ಹಲ್ಲೆ: ಸಿಸಿಟಿವಿಲಿ ಸೆರೆ ಆಯ್ತು ಭಗ್ನ ಪ್ರೇಮಿಯ ಡೆಡ್ಲಿ ಅಟ್ಯಾಕ್
ಪಾಗಲ್ ಪ್ರೇಮಿಗೆ ಸಾರ್ವಜನಿಕರಿಂದ ಧರ್ಮದೇಟು
TV9 Web
| Updated By: Rakesh Nayak Manchi|

Updated on: Jun 10, 2022 | 9:42 AM

Share

ಮಂಡ್ಯ: ಪ್ರೀತಿ ನಿರಾಕರಿಸಿದ್ದಕ್ಕೆ ಪ್ರೀತಿಸಿದ ಹುಡುಗಿಯ ಮೇಲೆ ಪಾಗಲ್ ಪ್ರೇಮಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ. ಗುರುವಾರ ಬೆಳಗ್ಗೆ ಕಾಲೇಜು ಬಿಡುವರೆಗೂ ಹೊಂಚು ಹಾಕಿ ಕುತ್ತಿದ್ದು, ಹೊರಬರುತ್ತಿದ್ದಂತೆ ಹಲ್ಲೆ ಮಾಡಿದ್ದಾನೆ. ವೈ.ಯರಹಳ್ಳಿ ಗ್ರಾಮದ ನವ್ಯಾ(20) ಹಲ್ಲೆಗೊಳಗಾದ ವಿದ್ಯಾರ್ಥಿನಿ. ಹಲ್ಲೆ ನಡೆಸಿದ ಪಾಗಲ್ ಪ್ರೇಮಿಗೆ ಸಾರ್ವಜನಿಕರಿಂದ ಧರ್ಮದೇಟು ನೀಡಿದ್ದಾರೆ. ಪ್ಯಾರಾ ಮೆಡಿಕಲ್ ಓದುತ್ತಿದ್ದ ನವ್ಯ ಮೇಲೆ ಸಂಪತ್ ಕುಮಾರ್​ ಹಲ್ಲೆ ನಡೆಸಿದ್ದಾನೆ. ಒಂದೇ ಗ್ರಾಮದ ನವ್ಯಾ, ಸಂಪತ್ ಕುಮಾರ್ 2 ವರ್ಷದಿಂದ ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿಯ ವಿಚಾರ ತಿಳಿದಾಗ   ಪ್ರೀತಿ ಪ್ರೇಮ ಬಿಟ್ಟು ಓದಿನ ಕಡೆ ಗಮನ ನೀಡುವಂತೆ ನವ್ಯ ತಂದೆ ಪರಮೇಶ್ ಬೈದು ಬುದ್ಧಿ ಮಾತು ಹೇಳಿದ್ದರು. ಬಳಿಕ ಸಂಪತ್ ಕುಮಾರ್ ಜತೆ ನವ್ಯ ಅಂತರ ಕಾಯ್ದುಕೊಂಡಿದ್ದಳು. ಪದೇ ಪದೇ ಪ್ರೀತಿಸುವಂತೆ ಸಂಪತ್​ ಪೀಡಿಸುತ್ತಿದ್ದ. ಮೊನ್ನೆ ಸ್ನೇಹಿತರ ಜೊತೆ ಬರ್ತಡೇ ಆಚರಿಸಿಕೊಂಡಿದ್ದ ವಿದ್ಯಾರ್ಥಿನಿ ನವ್ಯ, ತನ್ನ ಜತೆ ಬಾರದೆ ಸ್ನೇಹಿತರ ಜತೆ ಬರ್ತಡೇ ಮಾಡಿಕೊಂಡಿದ್ದಕ್ಕೆ ನವ್ಯಾ ಮನೆಗೆ ಹೋಗಿ ಗಲಾಟೆ ಮಾಡಿದ್ದಾನೆ.

ಇದನ್ನೂ ಓದಿ: NBK Birthday: ನಂದಮೂರಿ ಬಾಲಕೃಷ್ಣ ಜನ್ಮದಿನಕ್ಕೆ ಟೀಸರ್​ ಮೂಲಕ ವಿಶ್​ ಮಾಡಿದ ‘ಎನ್​ಬಿಕೆ 107’ ಬಳಗ

ಇಬ್ಬರು ಜತೆಯಲ್ಲಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡುವ ಬೆದರಿಕೆ ಹಾಕಿದ್ದು, ಆಗಲೂ  ನವ್ಯ ತಂದೆ ಬೈದು ಬುದ್ಧಿ ಮಾತು ಹೇಳಿ ಕಳುಹಿಸಿದ್ದರು. ಕಾಲೇಜು ಬಳಿಯೇ ಹೊಂಚು ಹಾಕಿದ್ದ ಸಂಪತ್, ಹಲ್ಲೆ ನಡೆಸುವುದಕ್ಕಾಗಿಯೇ ನಂಬರ್ ಪ್ಲೇಟ್ ಇಲ್ಲದ ಸ್ಕೂಟರ್​ನಲ್ಲಿ ರಿಪೀಸ್ ಬಟ್ಟಿ ತಂದಿದ್ದ. ಸಂಜೆ ಕಾಲೇಜಿನಿಂದ ಹೊರಗೆ ಬರುತ್ತಿದ್ದಂತೆ ಏಕಾಏಕಿ ನವ್ಯ ಮೇಲೆ ಹಲ್ಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ನವ್ಯಾಳನ್ನ ಸ್ನೇಹಿತೆ ಆಸ್ಪತ್ರೆಗೆ ಕರೆದೋಯ್ದಿರು. ಇತ್ತ ಹಲ್ಲೆ ನಡೆಸಿದ ಸಂಪತ್ ಸಾರ್ವಜನಿಕರಿಂದ ಹಿಗ್ಗಾಮುಗ್ಗ ಥಳಿಸಲಾಗಿದೆ. ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಲಾಗಿದೆ. ಮಂಡ್ಯದ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಸಮುದ್ರದಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನಾಪತ್ತೆ

ಕಾರವಾರ: ಸುಮುದ್ರಕ್ಕೆ ಇಳಿದ ಇಬ್ಬರು ಯವಕರು ನಾಪತ್ತೆಯಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ನಡೆದಿದೆ. ಅಬ್ರಾರ್ ಶೇಕ್ (21), ಸುಶಾಂತ ಎಂ ಎಸ್ (23) ನಾಪತ್ತೆಯಾಗಿರುವ ಯುವಕರು. ಕೋಲಾರದಿಂದ ಮುರುಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದು, ಸಮುದ್ರದಲ್ಲಿ ಈಜುವಾಗ ದೊಡ್ಡ ಅಲೆಗೆ ಸಿಲುಕಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಯುವಕರಿಗಾಗಿ ಶೋಧಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ