AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಜಾಲ ಸಕ್ರಿಯ: ಜಿಲ್ಲಾ ವೈದ್ಯಾಧಿಕಾರಿ

ಮಂಡ್ಯ ತಾಲ್ಲೂಕಿನ ಕಾರಸವಾಡಿ ಗ್ರಾಮದ ಮನೆಯೊಂದರಲ್ಲಿ ಭ್ರೂಣ ಹತ್ಯೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ನಂತರ ಅಧಿಕಾರಿಗಳು ದಾಳಿ ನಡೆಸಿದರು.

ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಜಾಲ ಸಕ್ರಿಯ: ಜಿಲ್ಲಾ ವೈದ್ಯಾಧಿಕಾರಿ
ಮಂಡ್ಯದ ಆಸ್ಪತ್ರೆಯೊಂದರಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.
TV9 Web
| Edited By: |

Updated on: Oct 12, 2021 | 4:00 PM

Share

ಮಂಡ್ಯ: ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ಜಾಲ ಸಕ್ರಿಯವಾಗಿದೆ. ಸರ್ಕಾರ ಹೆಣ್ಣು ಭ್ರೂಣಹತ್ಯೆ ನಿಷೇಧಿಸಿದ್ದರೂ ಭ್ರೂಣಹತ್ಯೆಗಳು ಅವ್ಯಾಹತವಾಗಿ ನಡೆಯುತ್ತಲೇ ಇವೆ ಎಂದು ಜಿಲ್ಲಾ ವೈದ್ಯಾಧಿಕಾರಿ ಧನಂಜಯ ಹೇಳಿದ್ದಾರೆ. ತಾಲ್ಲೂಕಿನ ಕಾರಸವಾಡಿ ಗ್ರಾಮದ ಮನೆಯೊಂದರಲ್ಲಿ ಭ್ರೂಣ ಹತ್ಯೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ನಂತರ ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ ರಕ್ತಸ್ರಾವದಿಂದ ಬಳಲುತ್ತಿದ್ದ

ಮಳವಳ್ಳಿ ತಾಲ್ಲೂಕಿನ ಮೂರುವರೆ ತಿಂಗಳ ಗರ್ಭಿಣಿಗೆ ಗರ್ಭಪಾತದ ಮಾಡಿಸಿ, ಹೆಣ್ಣು ಭ್ರೂಣ ಹತ್ಯೆ ಮಾಡಲಾಗಿದೆ. ಅಧಿಕಾರಿಗಳು ಈ ಸ್ಥಳದಲ್ಲಿ ದಾಳಿ ನಡೆಸಿದಾಗ ಮಹಿಳೆ ರಕ್ತಸ್ರಾವದಿಂದ ಒದ್ದಾಡುತ್ತಿದ್ದರು. ಅವರನ್ನು ಕೂಡಲೇ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಯಿತು. ಮಹಿಳೆಗೆ ಈಗಾಗಲೇ ಇಬ್ಬರು ಹೆಣ್ಣುಮಕ್ಕಳಿದ್ದು, ಮೂರನೇ ಮಗು ಅವರ ಹೊಟ್ಟೆಯಲ್ಲಿತ್ತು.

ಗರ್ಭದಲ್ಲಿರುವ ಮೂರನೇ ಮಗುವೂ ಹೆಣ್ಣು ತಿಳಿದ ನಂತರ ಭ್ರೂಣ ತೆಗೆಸಲಾಗಿದೆ. ಮೂರುವರೆ ತಿಂಗಳ ಹೆಣ್ಣುಭ್ರೂಣದ ಹತ್ಯೆ ನಡೆಸಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಜಿಲ್ಲೆಯಲ್ಲಿ ಲಿಂಗಪತ್ತೆ ನಡೆಸಲಾಗುತ್ತಿಲ್ಲ. ಹೊರ ಜಿಲ್ಲೆಯಲ್ಲಿ ಲಿಂಗ ಪತ್ತೆ ಹಚ್ಚಿ ಇಲ್ಲಿಗೆ ಕರೆತಂದು ಕೃತ್ಯ ನಡೆಸಲಾಗಿದೆ. ನರ್ಸ್ ಒಬ್ಬರು ತಾವಿರುವ ಮನೆಯಲ್ಲಿಯೇ ಕೃತ್ಯ ನಡೆಸಿದ್ದು, ಅಧಿಕಾರಿಗಳು ದಾಳಿ ನಡೆಸುವ ಸಂದರ್ಭ ಅವರು ನಾಪತ್ತೆಯಾಗಿದ್ದಾರೆ.

ನರ್ಸ್​ ಕೆಲಸ ಮಾಡುತ್ತಿದ್ದ ಮಂಡ್ಯದ ಖಾಸಗಿ ಕ್ಲಿನಿಕ್​ಗೆ ಭೇಟಿ ನೀಡಿ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಆರೋಪಿ ನರ್ಸ್​ ಮೂರು ತಿಂಗಳ ಹಿಂದೆಯೇ ಅಲ್ಲಿಂದ ಕೆಲಸ ಬಿಟ್ಟಿರುವ ಮಾಹಿತಿ ಈ ಸಂದರ್ಭ ಬೆಳೆಕಿಗೆ ಬಂದಿದೆ. ಕ್ಲಿನಿಕ್ ಪರಿಶೀಲನೆ ವೇಳೆ ಅಲ್ಲಿ ದಂಪತಿಯೊಬ್ಬರು ಇದ್ದರು. ಅವರೂ ಭ್ರೂಣಹತ್ಯೆಗಾಗಿಯೇ ಬಂದಿರಬಹುದೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ:ಮತ್ತೆ ಕಾಡುತ್ತಿದೆ ಹೆಣ್ಣು ಭ್ರೂಣ ಹತ್ಯೆ ಪ್ರಕರಣ; ಕಾನೂನುಬಾಹಿರ ಚಟುವಟಿಕೆಗಳ ತಡೆಗೆ ವಿಜಯಪುರ ಜಿಲ್ಲಾಡಳಿತದಿಂದ ಸಿದ್ಧತೆ

ಇದನ್ನೂ ಓದಿ: 24 ವಾರಗಳ ಅವಧಿಗೂ ಮೀರಿದ್ದ ಭ್ರೂಣ ತೆಗೆಯಲು ಅನುಮತಿ ನೀಡಿದ ದೆಹಲಿ ಹೈಕೋರ್ಟ್​; ಮಹಿಳೆಗೆ ಅಪಾಯವಿದ್ದರೂ ಒಪ್ಪಿಗೆ ನೀಡಿದ ಪತಿ

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ