AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಜಾಲ ಸಕ್ರಿಯ: ಜಿಲ್ಲಾ ವೈದ್ಯಾಧಿಕಾರಿ

ಮಂಡ್ಯ ತಾಲ್ಲೂಕಿನ ಕಾರಸವಾಡಿ ಗ್ರಾಮದ ಮನೆಯೊಂದರಲ್ಲಿ ಭ್ರೂಣ ಹತ್ಯೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ನಂತರ ಅಧಿಕಾರಿಗಳು ದಾಳಿ ನಡೆಸಿದರು.

ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಜಾಲ ಸಕ್ರಿಯ: ಜಿಲ್ಲಾ ವೈದ್ಯಾಧಿಕಾರಿ
ಮಂಡ್ಯದ ಆಸ್ಪತ್ರೆಯೊಂದರಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.
TV9 Web
| Edited By: |

Updated on: Oct 12, 2021 | 4:00 PM

Share

ಮಂಡ್ಯ: ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ಜಾಲ ಸಕ್ರಿಯವಾಗಿದೆ. ಸರ್ಕಾರ ಹೆಣ್ಣು ಭ್ರೂಣಹತ್ಯೆ ನಿಷೇಧಿಸಿದ್ದರೂ ಭ್ರೂಣಹತ್ಯೆಗಳು ಅವ್ಯಾಹತವಾಗಿ ನಡೆಯುತ್ತಲೇ ಇವೆ ಎಂದು ಜಿಲ್ಲಾ ವೈದ್ಯಾಧಿಕಾರಿ ಧನಂಜಯ ಹೇಳಿದ್ದಾರೆ. ತಾಲ್ಲೂಕಿನ ಕಾರಸವಾಡಿ ಗ್ರಾಮದ ಮನೆಯೊಂದರಲ್ಲಿ ಭ್ರೂಣ ಹತ್ಯೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ನಂತರ ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ ರಕ್ತಸ್ರಾವದಿಂದ ಬಳಲುತ್ತಿದ್ದ

ಮಳವಳ್ಳಿ ತಾಲ್ಲೂಕಿನ ಮೂರುವರೆ ತಿಂಗಳ ಗರ್ಭಿಣಿಗೆ ಗರ್ಭಪಾತದ ಮಾಡಿಸಿ, ಹೆಣ್ಣು ಭ್ರೂಣ ಹತ್ಯೆ ಮಾಡಲಾಗಿದೆ. ಅಧಿಕಾರಿಗಳು ಈ ಸ್ಥಳದಲ್ಲಿ ದಾಳಿ ನಡೆಸಿದಾಗ ಮಹಿಳೆ ರಕ್ತಸ್ರಾವದಿಂದ ಒದ್ದಾಡುತ್ತಿದ್ದರು. ಅವರನ್ನು ಕೂಡಲೇ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಯಿತು. ಮಹಿಳೆಗೆ ಈಗಾಗಲೇ ಇಬ್ಬರು ಹೆಣ್ಣುಮಕ್ಕಳಿದ್ದು, ಮೂರನೇ ಮಗು ಅವರ ಹೊಟ್ಟೆಯಲ್ಲಿತ್ತು.

ಗರ್ಭದಲ್ಲಿರುವ ಮೂರನೇ ಮಗುವೂ ಹೆಣ್ಣು ತಿಳಿದ ನಂತರ ಭ್ರೂಣ ತೆಗೆಸಲಾಗಿದೆ. ಮೂರುವರೆ ತಿಂಗಳ ಹೆಣ್ಣುಭ್ರೂಣದ ಹತ್ಯೆ ನಡೆಸಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಜಿಲ್ಲೆಯಲ್ಲಿ ಲಿಂಗಪತ್ತೆ ನಡೆಸಲಾಗುತ್ತಿಲ್ಲ. ಹೊರ ಜಿಲ್ಲೆಯಲ್ಲಿ ಲಿಂಗ ಪತ್ತೆ ಹಚ್ಚಿ ಇಲ್ಲಿಗೆ ಕರೆತಂದು ಕೃತ್ಯ ನಡೆಸಲಾಗಿದೆ. ನರ್ಸ್ ಒಬ್ಬರು ತಾವಿರುವ ಮನೆಯಲ್ಲಿಯೇ ಕೃತ್ಯ ನಡೆಸಿದ್ದು, ಅಧಿಕಾರಿಗಳು ದಾಳಿ ನಡೆಸುವ ಸಂದರ್ಭ ಅವರು ನಾಪತ್ತೆಯಾಗಿದ್ದಾರೆ.

ನರ್ಸ್​ ಕೆಲಸ ಮಾಡುತ್ತಿದ್ದ ಮಂಡ್ಯದ ಖಾಸಗಿ ಕ್ಲಿನಿಕ್​ಗೆ ಭೇಟಿ ನೀಡಿ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಆರೋಪಿ ನರ್ಸ್​ ಮೂರು ತಿಂಗಳ ಹಿಂದೆಯೇ ಅಲ್ಲಿಂದ ಕೆಲಸ ಬಿಟ್ಟಿರುವ ಮಾಹಿತಿ ಈ ಸಂದರ್ಭ ಬೆಳೆಕಿಗೆ ಬಂದಿದೆ. ಕ್ಲಿನಿಕ್ ಪರಿಶೀಲನೆ ವೇಳೆ ಅಲ್ಲಿ ದಂಪತಿಯೊಬ್ಬರು ಇದ್ದರು. ಅವರೂ ಭ್ರೂಣಹತ್ಯೆಗಾಗಿಯೇ ಬಂದಿರಬಹುದೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ:ಮತ್ತೆ ಕಾಡುತ್ತಿದೆ ಹೆಣ್ಣು ಭ್ರೂಣ ಹತ್ಯೆ ಪ್ರಕರಣ; ಕಾನೂನುಬಾಹಿರ ಚಟುವಟಿಕೆಗಳ ತಡೆಗೆ ವಿಜಯಪುರ ಜಿಲ್ಲಾಡಳಿತದಿಂದ ಸಿದ್ಧತೆ

ಇದನ್ನೂ ಓದಿ: 24 ವಾರಗಳ ಅವಧಿಗೂ ಮೀರಿದ್ದ ಭ್ರೂಣ ತೆಗೆಯಲು ಅನುಮತಿ ನೀಡಿದ ದೆಹಲಿ ಹೈಕೋರ್ಟ್​; ಮಹಿಳೆಗೆ ಅಪಾಯವಿದ್ದರೂ ಒಪ್ಪಿಗೆ ನೀಡಿದ ಪತಿ

Follow Us
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ