AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಕೈ ಮುಖಂಡನ ವಿರುದ್ಧ ಎಫ್​ಐಆರ್

ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮೋಹನ್ ಲಿಂಗೇಶ್ವರ್ ಅವರು ಕಾಂಗ್ರೆಸ್ ಮುಖಂಡರಾಗಿದ್ದರೂ ತಮ್ಮದೇ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದರು. ತನ್ನ ಕರೆಂಟ್ ಬಿಲ್ ನೋಡಿ ಕೋಪಗೊಂಡಿದ್ದ ಮೋಹನ್ ಸರ್ಕಾರದ ಗೃಹ ಜ್ಯೋತಿ ಯೋಜನೆ ವಿರುದ್ದ ಸಿಡಿದೆದ್ದು ಆಕ್ರೋಶ ವ್ಯಕ್ತಪಡಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಮೋಹನ್ ತರಾಟೆಯ ವಿಡಿಯೋ ವೈರಲ್ ಆಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಮೇಲುಕೋಟೆ ಪೋಲೀಸರು ಮೋಹನ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಕೈ ಮುಖಂಡನ ವಿರುದ್ಧ ಎಫ್​ಐಆರ್
ಮೋಹನ್ ಲಿಂಗೇಶ್ವರ್
ಪ್ರಶಾಂತ್​ ಬಿ.
| Edited By: |

Updated on:Nov 02, 2023 | 2:04 PM

Share

ಮಂಡ್ಯ, ನ.02: ಸರ್ಕಾರದ ವಿರುದ್ದ ಟೀಕೆ ಮಾಡಿದ್ದ ಕೈ ಕಾರ್ಯಕರ್ತನ ವಿರುದ್ದ ಮೇಲುಕೋಟೆ ಪೋಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ. ಪಾಂಡವಪುರ ತಾಲೂಕಿನ ಸುಂಕಾತೊಣ್ಣೂರು ಗ್ರಾಮದ ಮೋಹನ್ ಲಿಂಗೇಶ್ವರ್ ವಿರುದ್ದ FIR ದಾಖಲಾಗಿದೆ. ತಮ್ಮ ಪಕ್ಷದ ನಾಯಕರು ಸುಳ್ಳು ಭರವಸೆ ಕೊಟ್ಟು ಜನರಿಗೆ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಸರ್ಕಾರದ (Karnataka Government) ವಿರುದ್ಧ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕೈ ಮುಖಂಡ ಮೋಹನ್ ಆಕ್ರೋಶ ಹೊರ ಹಾಕಿದ್ದರು. ಸೆಲ್ಫಿ ವಿಡಿಯೋ ಮಾಡಿ ಸಿಎಂ‌ ಸಿದ್ಧರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಹಿನ್ನಲೆ ಮೋಹನ್ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮೋಹನ್ ಲಿಂಗೇಶ್ವರ್ ಅವರು ಕಾಂಗ್ರೆಸ್ ಮುಖಂಡರಾಗಿದ್ದರೂ ತಮ್ಮದೇ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕಳೆದ ತಿಂಗಳು ಗೃಹಜ್ಯೋತಿ ಯೋಜನೆ ಅಡಿ 800 ರೂ ಬಿಲ್ ಬಂದಿದ್ದಕ್ಕೆ ಸೆಲ್ಪಿ ವಿಡಿಯೋ ಮಾಡಿ ಅವಶ್ಯ ಶಬ್ದಗಳಿಂದ ಸಿಎಂ ಹಾಗೂ ಡಿಸಿಎಂ ವಿರುದ್ದ ನಿಂದಿಸಿದ್ದರು. ತನ್ನ ಕರೆಂಟ್ ಬಿಲ್ ನೋಡಿ ಕೋಪಗೊಂಡಿದ್ದ ಮೋಹನ್ ಸರ್ಕಾರದ ಗೃಹ ಜ್ಯೋತಿ ಯೋಜನೆ ವಿರುದ್ದ ಸಿಡಿದೆದ್ದು ಆಕ್ರೋಶ ವ್ಯಕ್ತಪಡಿಸಿದ್ದರು.  ಪಕ್ಷದ ನಾಯಕರಾದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರ ಬಗ್ಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಮೋಹನ್ ತರಾಟೆಯ ವಿಡಿಯೋ ವೈರಲ್ ಆಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಮೇಲುಕೋಟೆ ಪೋಲೀಸರು ಮೋಹನ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ. ಮೋಹನ್ ವಿರುದ್ದ ಐಪಿಸಿ 504, 507ರ ಅಡಿ ದೂರು ದಾಖಲಾಗಿದೆ.

ಇದನ್ನೂ ಓದಿ: ಸಾಮಾಜಿಕ ಮೌಢ್ಯಕ್ಕೆ ಸೊಪ್ಪು ಹಾಕದ ಸಿಎಂ ಸಿದ್ದರಾಮಯ್ಯ ಈ ಬಾರಿಯಾದರೂ ಹಂಪಿ ವಿರೂಪಾಕ್ಷನಿಗೆ ಪೂಜೆ ಸಲ್ಲಿಸುತ್ತಾರಾ? ಸದ್ಯದ ಯಕ್ಷ ಪ್ರಶ್ನೆ!

ಕಾವೇರಿಗಾಗಿ ಮುಂದುವರೆದ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನ ವಿರೋಧಿಸಿ ಇಂದು ಸಹಾ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಕಳೆದ 59 ದಿನಗಳಿಂದ ನಿರಂತರವಾಗಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಯುತ್ತಿದೆ. ಇಂದಿನ ಪ್ರತಿಭಟನೆಗೆ ವಿದ್ಯಾರ್ಥಿಗಳು ಕೂಡ ಸಾಥ್ ನೀಡಿದ್ರು. ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ರು.

ಮಂಡ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:50 pm, Thu, 2 November 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ