ಅರಣ್ಯ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ:
ಅರಣ್ಯ ಸಿಬ್ಬಂದಿಗಳನ್ನು ಅವಾಚ್ಯ ಶಬ್ದಗಳಿಂದ ಶಾಸಕ ನಿಂದಿಸಿರುವಂತಹ ಘಟನೆ ನಾಗಮಂಗಲ ತಾಲೂಕಿನ ಹಾಲತಿ ಗ್ರಾಮದಲ್ಲಿ ನಿನ್ನೆ ನಡೆದಿದೆ. ನಾಗಮಂಗಲ ಶಾಸಕ ಸುರೇಶ್ ಗೌಡ ಅಧಿಕಾರಿಗಳ ವಿರುದ್ಧ ಅಸಭ್ಯ ಪದ ಬಳಕೆ ಮಾಡಲಾಗಿದೆ ಎನ್ನಲಾಗುತ್ತಿದೆ. ಜಮೀನು ವಿಚಾರವಾಗಿ ಅರಣ್ಯ ಇಲಾಖೆ ಹಾಗೂ ರೈತರ ನಡುವೆ ಘರ್ಷಣೆ ಉಂಟಾಗಿದೆ. ಸರ್ವೆ ನಂ 135ರಲ್ಲಿ ಅರಣ್ಯ ಇಲಾಖೆ ನೆಡು ತೋಪು ಬೆಳೆಸಿದೆ. ಅದೇ ಜಮೀನಿಗಾಗಿ ರೈತರು ಬಗರ್ ಹುಕುಂ ಸಾಗುವಳಿ ಅರ್ಜಿ ಸಲ್ಲಿಸಿದ್ದರು.
ಜಮೀನು ವಶಪಡಿಸಿಕೊಳ್ಳಲು ಬಂದ ಅಧಿಕಾರಿಗಳ ವಿರುದ್ಧ ರೈತರ ಅಸಮಾಧಾನಗೊಂಡಿದ್ದು, ಗಾಳಿಯಲ್ಲಿ ಗುಂಡು ಹಾರಿಸಿ ರೈತರನ್ನು ಅಧಿಕಾರಿಗಳು ಬೆದರಿಸಿದ್ದಾರೆ. ಅಧಿಕಾರಿಗಳ ವರ್ತನೆಗೆ ಶಾಸಕ ಸುರೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದ್ದು, ಅವಾಚ್ಯ ಶಬ್ದಗಳಿಂದ ಬೈದು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.