AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಣ್ಯಾಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಆರೋಪ: ಶಾಸಕ ಸುರೇಶಗೌಡ ಸೇರಿದಂತೆ 10 ಜನರ ವಿರುದ್ಧ FIR ದಾಖಲು

ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಿನ್ನೆಲೆ ಶಾಸಕ ಸುರೇಶಗೌಡ ಸೇರಿದಂತೆ 10 ಜನರ ವಿರುದ್ಧ ಜಿಲ್ಲೆಯ ನಾಗಮಂಗಲ ಗ್ರಾಮಾಂತರ ಠಾಣೆಯಲ್ಲಿ ಎಫ್​ಐಆರ್​ ದಾಖಲು ಮಾಡಲಾಗಿದೆ.

ಅರಣ್ಯಾಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಆರೋಪ: ಶಾಸಕ ಸುರೇಶಗೌಡ ಸೇರಿದಂತೆ 10 ಜನರ ವಿರುದ್ಧ FIR ದಾಖಲು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 06, 2022 | 11:03 AM

Share

ಮಂಡ್ಯ: ಅರಣ್ಯಾಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಿನ್ನೆಲೆ ನಾಗಮಂಗಲ ಶಾಸಕ ಸುರೇಶ್​​ಗೌಡ ವಿರುದ್ಧ ಎಫ್​ಐಆರ್​ ದಾಖಲು ಮಾಡಲಾಗಿದೆ. ಸುರೇಶ್​​ಗೌಡ (MLA Suresh Gowda) ವಿರುದ್ಧ ನಾಗಮಂಗಲ ಆರ್​​ಎಫ್​ಓ (RFO) ಸತೀಶ್ ದೂರು ನೀಡಿದ್ದು, ಶಾಸಕ ಸುರೇಶಗೌಡ ಸೇರಿದಂತೆ 10 ಜನರ ವಿರುದ್ಧ ಜಿಲ್ಲೆಯ ನಾಗಮಂಗಲ ಗ್ರಾಮಾಂತರ ಠಾಣೆಯಲ್ಲಿ ಎಫ್​ಐಆರ್​ ದಾಖಲು ಮಾಡಲಾಗಿದೆ. ಪಶು ನಿರೋಧಕ ಕಂದಕ ತೆಗೆಸಲು ಅರಣ್ಯಾಧಿಕಾರಿಗಳು ಮುಂದಾಗಿದ್ದು, ನಾಗಮಂಗಲದ ಹಾಲತಿ ಗ್ರಾಮದಲ್ಲಿ ಅರಣ್ಯ ಸಿಬ್ಬಂದಿ ಕೆಲಸ ಮಾಡುತ್ತಿದ್ದರು. ಈ ವೇಳೆ ಹಾಲತಿ ಗ್ರಾಮಸ್ಥರಿಂದ ಅರಣ್ಯ ಸಿಬ್ಬಂದಿ ಕೆಲಸಕ್ಕೆ ಅಡ್ಡಿ ಪಡಿಸಲಾಗಿದೆ. ಅರಣ್ಯ ಒತ್ತುವರಿದಾರರಿಗೆ ಶಾಸಕರು ಕುಮ್ಮಕ್ಕು ನೀಡಿದ್ದಾರೆಂದು ದೂರು ನೀಡಲಾಗಿದೆ. ಮೊನ್ನೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿತ್ತು.

ಅರಣ್ಯ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ:

ಅರಣ್ಯ ಸಿಬ್ಬಂದಿಗಳನ್ನು ಅವಾಚ್ಯ ಶಬ್ದಗಳಿಂದ ಶಾಸಕ ನಿಂದಿಸಿರುವಂತಹ ಘಟನೆ ನಾಗಮಂಗಲ ತಾಲೂಕಿನ ಹಾಲತಿ ಗ್ರಾಮದಲ್ಲಿ ನಿನ್ನೆ ನಡೆದಿದೆ. ನಾಗಮಂಗಲ ಶಾಸಕ ಸುರೇಶ್ ಗೌಡ  ಅಧಿಕಾರಿಗಳ ವಿರುದ್ಧ ಅಸಭ್ಯ ಪದ ಬಳಕೆ ಮಾಡಲಾಗಿದೆ ಎನ್ನಲಾಗುತ್ತಿದೆ. ಜಮೀನು ವಿಚಾರವಾಗಿ ಅರಣ್ಯ ಇಲಾಖೆ ಹಾಗೂ ರೈತರ ನಡುವೆ ಘರ್ಷಣೆ ಉಂಟಾಗಿದೆ. ಸರ್ವೆ ನಂ 135ರಲ್ಲಿ ಅರಣ್ಯ ಇಲಾಖೆ ನೆಡು ತೋಪು ಬೆಳೆಸಿದೆ. ಅದೇ ಜಮೀನಿಗಾಗಿ ರೈತರು ಬಗರ್ ಹುಕುಂ ಸಾಗುವಳಿ ಅರ್ಜಿ ಸಲ್ಲಿಸಿದ್ದರು.

ಜಮೀನು ವಶಪಡಿಸಿಕೊಳ್ಳಲು ಬಂದ ಅಧಿಕಾರಿಗಳ ವಿರುದ್ಧ ರೈತರ ಅಸಮಾಧಾನಗೊಂಡಿದ್ದು, ಗಾಳಿಯಲ್ಲಿ ಗುಂಡು ಹಾರಿಸಿ ರೈತರನ್ನು ಅಧಿಕಾರಿಗಳು ಬೆದರಿಸಿದ್ದಾರೆ. ಅಧಿಕಾರಿಗಳ ವರ್ತನೆಗೆ ಶಾಸಕ ಸುರೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದ್ದು, ಅವಾಚ್ಯ ಶಬ್ದಗಳಿಂದ ಬೈದು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?