AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಮಹಿಳೆಯರ ವಿರುದ್ಧ ಅಕ್ಷೇಪಾರ್ಹ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್​ಐಆರ್

ಶ್ರೀರಂಗಪಟ್ಟಣ ಸಂಕೀರ್ತನಾ ಯಾತ್ರೆಯಲ್ಲಿ ಆರ್​​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್​ ಅವರು ಮುಸ್ಲಿಮ್ ಮಹಿಳೆಯರ ವಿರುದ್ಧ ಅಕ್ಷೇಪಾರ್ಹ ಹೇಳಿಕೆ ನೀಡಿದ್ದು, ಇದೀಗ ಇದು ತೀವ್ರ ಸ್ವರೂಪ ಪಡೆದುಕೊಂಡಿದೆ. ರಾಜ್ಯದ ವಿವಿಧೆಡೆ ಮುಸ್ಲಿಂ ಸಮುದಾಯ ಪ್ರತಿಭಟನೆಗಳಿದಿದ್ದಾರೆ. ಇನ್ನು ಈ ಸಂಬಂಧ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಮುಸ್ಲಿಂ ಮಹಿಳೆಯರ ವಿರುದ್ಧ ಅಕ್ಷೇಪಾರ್ಹ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್​ಐಆರ್
ಪ್ರಶಾಂತ್​ ಬಿ.
| Edited By: |

Updated on: Dec 26, 2023 | 7:14 PM

Share

ಮೈಸೂರು, (ಡಿಸೆಂಬರ್ 26): ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ  ಪ್ರಭಾಕರ್ ಭಟ್ ((Kalladka Prabhakar Bhat) ) ವಿರುದ್ಧ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಝೀರ್ ಚಿಕ್ಕನೇರಳೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ  ಶ್ರೀರಂಗಪಟ್ಟಣ ಪೊಲೀಸ್‌ ಠಾಣೆಯ ಪೊಲೀಸರು IPC ಸೆಕ್ಷನ್ 354, 294, 509, 506, 153A, 295 295A, 298ರ ಅಡಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಡಿಸೆಂಬರ್ 24ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಹನುಮ ಜಯಂತಿ ಆಂಗವಾಗಿ ಆಯೋಜಿಸಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್, “ಮುಸ್ಲಿಂ ಮಹಿಳೆಯರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ” ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದರ ವಿರುದ್ದ ನಜ್ಮಾ ದೂರು ನೀಡಿದ್ದು, ಪ್ರಭಾಕರ್ ಭಟ್‌ ವಿರುದ್ಧ ರೌಡಿ ಶೀಟ್ ತೆರೆಯುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮೋದಿಯಿಂದಾಗಿ ಮುಸ್ಲಿಂ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡ ಸಿಕ್ಕಿದ್ದು: ಪ್ರಭಾಕರ್‌ ಭಟ್

ಮಹಿಳೆಯರನ್ನ ಚುಡಾಯಿಸಿ, ಲೈಂಗಿಕವಾಗಿ ಅವಮಾನಿಸಿ, ಲೈಂಗಿಕ ದೌರ್ಜನ್ಯಕ್ಕೆ ಪ್ರಚೋದಿಸಿ, ಸಾರ್ವಜನಿಕವಾಗಿ ಬೆದರಿಕೆಯೊಡ್ಡಿ, ಧರ್ಮವನ್ನ ಅವಮಾನಿಸಿ, ಧರ್ಮಗಳ ಮಧ್ಯೆ ಎತ್ತಿಕಟ್ಟಿ ಗಲಭೆ ನಡೆಸಿ, ಸಾವು ನೋವುಗಳನ್ನ ಪ್ರಚೋದಿಸಿದ ವೃತ್ತಿಪರ ಕ್ರಿಮಿನಲ್ ಆರೋಪಿ ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿ ರೌಡಿಶೀಟರ್ ತೆರೆದು ಕಾನೂನು ಕ್ರಮ ತೆಗೆದುಕೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

ಪ್ರಭಾಕರ್ ಭಟ್ ಹೇಳಿದ್ದೇನು?

ಮುಸ್ಲಿಂ ಸಮುದಾಯದಲ್ಲಿ ಮಹಿಳೆಯರಿಗೆ ತ್ರಿವಳಿ ತಲಾಕ್ (Triple Talaq) ಹೇಳುವ ಅವಕಾಶ ಇತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ( Narendra Modi) ಅವರ ಸರ್ಕಾರದಿಂದಾಗಿ ತ್ರಿವಳಿ ತಲಾಕ್ ರದ್ದಾಗಿದೆ. ಬಹು ಪತ್ನಿತ್ವ ಪಿಡುಗು ಮತ್ತು ತ್ರಿವಳಿ ತಲಾಕ್‌ ಕಾಟದಿಂದಾಗಿ ಈ ಹಿಂದೆ ಮುಸಲ್ಮಾನ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ತ್ರಿವಳಿ ತಲಾಕ್‌ ರದ್ದುಪಡಿಸುವ ಮೂಲಕ ಅವರಿಗೆ ಪರ್ಮನೆಂಟ್ ಗಂಡ ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಎಂದು ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ