AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ಸ್ನೇಹಿತನ ಕೊಲೆ ಮಾಡಿ ಮಾದಪ್ಪನ ದರ್ಶನ ಮುಗಿಸಿ ಮೈಸೂರಿನಲ್ಲಿ ಅಡಗಿ ತುಳಿತಿದ್ದ ಕಿರಾತಕರು ಅರೆಸ್ಟ್

ಮಾರ್ಚ್ 3 ರ ರಾತ್ರಿ ಕಾರೇಕುರ ಗ್ರಾಮದ ಸಾಗರ್ (29)ಎಂಬಾತನನ್ನು ಅವನ ಸ್ನೇಹಿತರೇ ಕೊಲೆ ಮಾಡಿದ್ದರು. ರಾಘವೇಂದ್ರ, ಅಭಿಲಾಷ್, ಜಯಕುಮಾರ್, ಸ್ವಾಮಿ, ಕಿರಣ್ ಎಂಬ ಐವರು ಕಿರಾತಕರು ಸಾಗರ್ನ ಕೊಲೆ ಮಾಡಿದ್ದರು.

ಮಂಡ್ಯದಲ್ಲಿ ಸ್ನೇಹಿತನ ಕೊಲೆ ಮಾಡಿ ಮಾದಪ್ಪನ ದರ್ಶನ ಮುಗಿಸಿ ಮೈಸೂರಿನಲ್ಲಿ ಅಡಗಿ ತುಳಿತಿದ್ದ ಕಿರಾತಕರು ಅರೆಸ್ಟ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 13, 2022 | 3:55 PM

Share

ಮಂಡ್ಯ: ಸ್ನೇಹಿತನನ್ನೆ ಕೊಲೆ ಮಾಡಿ ಮಾದಪ್ಪನ ಮೊರೆ ಹೋದ ಕಿರಾತಕರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಳೆದ 10 ದಿನಗಳ ಹಿಂದೆ ಅಂದ್ರೆ ಮಾರ್ಚ್ 3 ರ ರಾತ್ರಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕಾರೇಕುರ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳು ಅರೆಸ್ಟ್ ಆಗಿದ್ದಾರೆ.

ಮಾರ್ಚ್ 3 ರ ರಾತ್ರಿ ಕಾರೇಕುರ ಗ್ರಾಮದ ಸಾಗರ್ (29)ಎಂಬಾತನನ್ನು ಅವನ ಸ್ನೇಹಿತರೇ ಕೊಲೆ ಮಾಡಿದ್ದರು. ರಾಘವೇಂದ್ರ, ಅಭಿಲಾಷ್, ಜಯಕುಮಾರ್, ಸ್ವಾಮಿ, ಕಿರಣ್ ಎಂಬ ಐವರು ಕಿರಾತಕರು ಸಾಗರ್ನ ಕೊಲೆ ಮಾಡಿದ್ದರು. ಮೃತ ಸಾಗರ್ ತನ್ನ ಸ್ನೇಹಿತರ ಮುಂದೆ ಹವಾ ಮೈನ್ಟೈನ್ ಮಾಡ್ತಿದ್ದ. ಅಷ್ಟೇ ಅಲ್ಲದೇ ಸ್ನೇಹಿತರ ಸಹೋದರಿಯರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ. ಇದರಿಂದ ಬೇಸತ್ತು ಐವರು ಸ್ನೇಹಿತರು ಸಾಗರ್ ಕೊಲೆಗೆ ಸ್ಕೆಚ್ ಹಾಕಿದ್ದರು. ಅದರಂತೆ ಮಾರ್ಚ್ 03 ರಂದು ಸಂಚು ರೂಪಿಸಿ ಕಾರೇಕುರದ ಗ್ರಾಮದ ಹೊರವಲಯದ ಗದ್ದೆಯಲ್ಲಿ ಕೊಲೆ ಮಾಡಿದ್ದಾರೆ.

ಬೈಕ್ನಲ್ಲಿ ಮನೆಗೆ ವಾಪಸ್ಸು ತೆರಳುತ್ತಿದ್ದ ಸಾಗರ್ನನ್ನು ರಸ್ತೆಯಲ್ಲಿ ಅಡ್ಡೆಗಟ್ಟಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಬಳಿಕ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟಕ್ಕೆ ಎಸ್ಕೇಪ್ ಆಗಿದ್ದಾರೆ. ಮಲೆ ಮಾದಪ್ಪನ ದರ್ಶನ ಪಡೆದು ನಾಗಮಲೈಗೆ ತೆರಳಿದ್ದಾರೆ. ನಾಗಮಲೈನಲ್ಲಿ ಕೃತ್ಯದ ದಿನ ಧರಿಸಿದ್ದ ಬಟ್ಟೆ ಬಚ್ಚಿಟ್ಟು ಮೈಸೂರಿಗೆ ಹೋಗಿದ್ದಾರೆ. ಮೈಸೂರಿನಲ್ಲಿ ಮೂವರು ಆರೋಪಿಗಳನ್ನ ಪೊಲೀಸರು ಅರೆಸ್ಟ್ ಮಾಡಿದ್ದು ಮಂಡ್ಯ ಮಂಟಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಲ್ಲಿ ನಾಲ್ವರು ಪಿ.ಹೊಸಹಳ್ಳಿ ಗ್ರಾಮದವರು. ಓರ್ವ ಮೈಸೂರಿನ ಇಲವಾಲ ನಿವಾಸಿ.

ಇದನ್ನೂ ಓದಿ: ಇನ್ನೂ ಸ್ವೀಪರ್ ಆಗಿಯೇ ಕೆಲಸ ಮಾಡುತ್ತಿದ್ದಾರೆ ಪಂಜಾಬ್ ಮುಖ್ಯಮಂತ್ರಿಯನ್ನು ಸೋಲಿಸಿದ ಆಪ್ ಶಾಸಕನ ಅಮ್ಮ

Bollywood: ಸಾಮಾಜಿಕ ಜಾಲತಾಣಗಳಿಗೆ ವಿದಾಯ ಹೇಳಿದ ಬಾಲಿವುಡ್ ಸೆಲೆಬ್ರಿಟಿಗಳು ಯಾರು ಗೊತ್ತಾ..!

Published On - 3:55 pm, Sun, 13 March 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?