AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಜಿಂಕೆ ಬೇಟೆಯಾಡಿ ಹೆಗಲ ಮೇಲೆ ಹೊತ್ತು ಬರುತ್ತಿದ್ದವರಿಗೆ ಅರಣ್ಯಾಧಿಕಾರಿಗಳಿಂದ ಗುಂಡೇಟು; ಒಬ್ಬ ಸೆರೆ, ಮೂವರು ಪರಾರಿ

ಬೇಟೆಗೆಂದು ಅರಣ್ಯಕ್ಕೆ ತೆರಳಿದ್ದ ಈ ತಂಡದವರು ಬಂದೂಕು ಉಪಯೋಗಿಸಿ ಜಿಂಕೆಯೊಂದನ್ನು ಕೊಂದಿದ್ದಾರೆ ಎಂದು ತಿಳಿದುಬಂದಿದೆ. ಬಸವನಬೆಟ್ಟ ಅರಣ್ಯ ಪ್ರದೇಶದಲ್ಲಿ ಶಿಕಾರಿಗೆಂದು ಇವರು ತೆರಳಿದ್ದು, ಅದೇ ಸಂದರ್ಭದಲ್ಲಿ ವನಪಾಲಕರು ಗಸ್ತಿಗೆ ತೆರಳಿದ ಪರಿಣಾಮ ವಿಷಯ ಬೆಳಕಿಗೆ ಬಂದಿದೆ.

ಮಂಡ್ಯ: ಜಿಂಕೆ ಬೇಟೆಯಾಡಿ ಹೆಗಲ ಮೇಲೆ ಹೊತ್ತು ಬರುತ್ತಿದ್ದವರಿಗೆ ಅರಣ್ಯಾಧಿಕಾರಿಗಳಿಂದ ಗುಂಡೇಟು; ಒಬ್ಬ ಸೆರೆ, ಮೂವರು ಪರಾರಿ
ಸ್ಥಳ ಪರಿಶೀಲನೆ ಮಾಡುತ್ತಿರುವ ಅಧಿಕಾರಿಗಳು
TV9 Web
| Updated By: Skanda|

Updated on: Sep 03, 2021 | 12:52 PM

Share

ಮಂಡ್ಯ: ವನ್ಯಪ್ರಾಣಿಗಳ ಬೇಟೆಯಲ್ಲಿ ನಿರತರಾಗಿದ್ದ ನಾಲ್ಕು ಮಂದಿ ಕಳ್ಳರ ತಂಡವೊಂದು ಗಸ್ತಿನಲ್ಲಿದ್ದ ಅರಣ್ಯಾಧಿಕಾರಿಗಳಿಗೆ ಎದುರಾಗಿ ಗುಂಡೇಟು ತಿಂದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಬಸವನಬೆಟ್ಟದ ಬಳಿ ನಡೆದಿದೆ. ನಾಲ್ವರು ಕಳ್ಳರು ಜಿಂಕೆಯೊಂದನ್ನು ಕೊಂದು ಹೆಗಲ ಮೇಲೆ ಹೊತ್ತುಕೊಂಡು ಬರುತ್ತಿದ್ದರು ಎನ್ನಲಾಗಿದ್ದು, ಈ ವೇಳೆ ಗಸ್ತಿನಲ್ಲಿದ್ದ ವನಪಾಲಕರಿಗೆ ಅಚಾನಕ್​ ಆಗಿ ಎದುರಾಗಿದ್ದಾರೆ. ತಕ್ಷಣವೇ ಎಲ್ಲರೂ ತಪ್ಪಿಸಿಕೊಳ್ಳಲು ಯತ್ನಿಸಿದರಾದರೂ ಎಚ್ಚೆತ್ತ ವನಪಾಲಕರು ಶೂಟೌಟ್​ ಮಾಡಿದ ಪರಿಣಾಮ ವೆಂಕಟೇಶ್ ಎಂಬಾತ ಗುಂಡೇಟು ತಿಂದು ಸಿಕ್ಕಿಹಾಕಿಕೊಂಡಿದ್ದಾನೆ. ಇನ್ನುಳಿದ ಮೂವರು ಮಾತ್ರ ಪರಾರಿಯಾಗಿದ್ದಾರೆ.

ಬೇಟೆಗೆಂದು ಅರಣ್ಯಕ್ಕೆ ತೆರಳಿದ್ದ ಈ ತಂಡದವರು ಬಂದೂಕು ಉಪಯೋಗಿಸಿ ಜಿಂಕೆಯೊಂದನ್ನು ಕೊಂದಿದ್ದಾರೆ ಎಂದು ತಿಳಿದುಬಂದಿದೆ. ಬಸವನಬೆಟ್ಟ ಅರಣ್ಯ ಪ್ರದೇಶದಲ್ಲಿ ಶಿಕಾರಿಗೆಂದು ಇವರು ತೆರಳಿದ್ದು, ಅದೇ ಸಂದರ್ಭದಲ್ಲಿ ವನಪಾಲಕರು ಗಸ್ತಿಗೆ ತೆರಳಿದ ಪರಿಣಾಮ ವಿಷಯ ಬೆಳಕಿಗೆ ಬಂದಿದೆ. ಹಲಗೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಗುಂಡೇಟು ತಿಂದ ವೆಂಕಟೇಶ್ ಎಂಬಾತನಿಗೆ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಂತೆಯೇ ತಪ್ಪಿಸಿಕೊಂಡ ಮೂವರ ಬಗ್ಗೆ ಮಾಹಿತಿ ಕಲೆ ಹಾಕಲಾಗಿದ್ದು, ತನಿಖೆ ಮುಂದುವರೆದಿದೆ.

DEER HUNTER

ಗುಂಡೇಟು ತಿಂದ ಕಳ್ಳ

ಬಲೆಗೆ ಬಿದ್ದ ಮರಗಳ್ಳ ಶಿವಮೊಗ್ಗ: ಶಿವಮೊಗ್ಗ ಶಂಕರ ವಲಯ ವ್ಯಾಪ್ತಿಯಲ್ಲಿ ಗಂಧದ ಮರಗಳ ಕಳ್ಳತನ ಜೋರಾಗಿ ನಡೆಯುತ್ತಿದೆ. ಹೀಗಿರುವಾಗಲೇ ಶಿವಮೊಗ್ಗ ಹೊರವಲಯದಲ್ಲಿರುವ ಸೋಮಿನಕೊಪ್ಪದ ಹೇಮಣ್ಣ ಎನ್ನುವ ವ್ಯಕ್ತಿಯು ಅನೇಕ ವರ್ಷಗಳಿಂದ ಅಕ್ರಮವಾಗಿ ಶ್ರೀಗಂಧ ಮರದ ದಂಧೆಯಲ್ಲಿ ತೊಡಗಿರುವ ವಿಚಾರ ಬೆಳಕಿಗೆ ಬಂದಿದೆ. ಶ್ರೀಗಂಧ ಮರ ಕಡಿದು, ಬಳಿಕ ಅದನ್ನು ತುಂಡುಗಳನ್ನು ಮಾಡಿ ಈತ ಮಾರಾಟ ಮಾಡುತ್ತಿದ್ದ.

ಇಂದು ಕೂಡಾ ಬೈಕ್ ಮೇಲೆ ಸುಮಾರು 60 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ಸಾಗಾಟ ಮಾಡುತ್ತಿದ್ದನು. ಶಂಕರ ವಲಯ ಆರ್​ಎಫ್​ಓ ಗಿರೀಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸುವಾಗ ಈತ ಸಿಕ್ಕಿಬಿದ್ದಿದ್ದಾನೆ. ಶಿವಮೊಗ್ಗ ತಾಲೂಕಿನ ಬಿಕೋನಹಳ್ಳಿ ಬಳಿ ಅಧಿಕಾರಿಗಳು ಹೇಮಣ್ಣನ ಬೈಕ್ ಪರಿಶೀಲನೆ ಮಾಡಿದ್ದು, ಬೈಕ್ ಮತ್ತು ಏಳು ಲಕ್ಷ ರೂಪಾಯಿ ಮೌಲ್ಯದ ಶ್ರೀಗಂಧ ಮರದ ತುಂಡುಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಈ ನಡುವೆ ಅರಣ್ಯ ಅಧಿಕಾರಿಗಳು ಮತ್ತು ಫಾರೆಸ್ಟರ್ ಹಾಗೂ ವಾಚರ್​ಗಳು ಕಠಿಣ ಕ್ರಮ ತೆಗೆದುಕೊಳ್ಳಲು ವಿಫಲವಾಗಿದ್ದಾರೆ. ಹೀಗಾಗಿ ಮಲೆನಾಡಿನಲ್ಲಿ ಅರಣ್ಯ ಸಂಪತ್ತು ಲೂಟಿಯಾಗುತ್ತಿದೆ. ಬಲೆಬಾಳುವ ಸಾಗುವಾನಿ, ಬೀಟೆ, ಶ್ರೀಗಂಧ ಮರಗಳನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ. ಸದ್ಯ ಒಬ್ಬ ಆರೋಪಿಯನ್ನು ಅಧಿಕಾರಿಗಳು ಬಂಧಿಸಿದ್ದು, ಅರಣ್ಯ ಸಂಪತ್ತನ್ನು ಕಾಪಾಡಲು ಇನ್ನೂ ಹೆಚ್ಚಿನ ಕ್ರಮದ ಅಗತ್ಯತೆ ಇದೆ ಎನ್ನುವುದು ಇಲ್ಲಿನ ಸ್ಥಳೀಯರ ಅಭಿಪ್ರಾಯ.

ವಿಚಾರಣೆ ವೇಳೆ ಆರೋಪಿ ಹೇಮಣ್ಣನ ಹಿಂದೆ ದೊಡ್ಡ ಕಳ್ಳತನದ ಗುಂಪು ಇರುವುದು ತಿಳಿದಿದೆ. ಬೆಲೆಬಾಳುವ ಶ್ರೀಗಂಧ ಮರಗಳ ತುಂಡಿನಿಂದ ಕರಕುಶಲ ವಸ್ತುಗಳನ್ನು ತಯಾರು ಮಾಡಿ ಅಕ್ರಮವಾಗಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಸದ್ಯ ಈತನ ಹಿಂದೆ ಇರುವ ಗಂಧದ ಮರದ ವ್ಯಾಪಾರಸ್ಥರು ಸೇರಿದಂತೆ, ಇತರೆ ಅಕ್ರಮ ದಂಧೆಕೋರರನ್ನು ಅರಣ್ಯಾಧಿಕಾರಿಗಳು ಮತ್ತು ಸ್ಥಳೀಯ ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು ಪೊಲೀಸರ ಬೃಹತ್​ ಬೇಟೆ; 1 ಕ್ವಿಂಟಲ್​ಗೂ ಹೆಚ್ಚು ತೂಕದ ಒಣ ಗಾಂಜಾ ತರಕಾರಿ ಗಾಡಿಯಲ್ಲಿ ಪತ್ತೆ, ಮೂವರು ವಶಕ್ಕೆ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!