AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ದಲಿತರು ಸಿಎಂ ಆಗೋದನ್ನು ತಪ್ಪಿಸಿದ್ದು ನಾನಲ್ಲ: ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ

ದಲಿತರು ಸಿಎಂ ಆಗುವುದನ್ನು ತಪ್ಪಿಸಿದವರೇ ಈಗ ಮತ್ತೆ ಸಿಎಂ ಆಗಬೇಕು ಎಂದು ಹೇಳಿಕೊಳ್ಳುತ್ತಿದ್ದಾರೆ. 130 ಸೀಟಿನಲ್ಲಿ ಮುಖ್ಯಮಂತ್ರಿಯಾಗಿ 78ಕ್ಕೆ ಬಂದರಲ್ಲ, ಅವರು ದಲಿತ ಸಿಎಂ ಆಗೋದನ್ನು ತಪ್ಪಿಸಿದ್ದು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ಬಾಣ ಬಿಟ್ಟಿದ್ದಾರೆ.

ರಾಜ್ಯದಲ್ಲಿ ದಲಿತರು ಸಿಎಂ ಆಗೋದನ್ನು ತಪ್ಪಿಸಿದ್ದು ನಾನಲ್ಲ: ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ
ಎಚ್​.ಡಿ.ಕುಮಾರಸ್ವಾಮಿ
TV9 Web
| Edited By: |

Updated on:Jun 29, 2021 | 6:58 PM

Share

ಮಂಡ್ಯ: ರಾಜ್ಯದಲ್ಲಿ ದಲಿತರು ಮುಖ್ಯಮಂತ್ರಿ ಆಗುವುದನ್ನು ನಾನು ತಪ್ಪಿಸಿರಲಿಲ್ಲ. ಸ್ವಾತಂತ್ರ್ಯ ಬಂದ ಬಳಿಕ 60 ವರ್ಷ ದಲಿತರನ್ನು ಸಿಎಂ ಮಾಡಬೇಕು ಎಂದು ಈವರೆಗೆ ಕಾಂಗ್ರೆಸ್​ನವರಿಗೆ ಗೊತ್ತಿರಲಿಲ್ವ? ದಲಿತರು ಸಿಎಂ ಆಗುವುದನ್ನು ತಪ್ಪಿಸಿದವರೇ ಈಗ ಮತ್ತೆ ಸಿಎಂ ಆಗಬೇಕು ಎಂದು ಹೇಳಿಕೊಳ್ಳುತ್ತಿದ್ದಾರೆ. 130 ಸೀಟಿನಲ್ಲಿ ಮುಖ್ಯಮಂತ್ರಿಯಾಗಿ 78ಕ್ಕೆ ಬಂದರಲ್ಲ, ಅವರು ದಲಿತ ಸಿಎಂ ಆಗೋದನ್ನು ತಪ್ಪಿಸಿದ್ದು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ಬಾಣ ಬಿಟ್ಟಿದ್ದಾರೆ.

ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ, ಸದ್ಯ ವಿಪಕ್ಷ ನಾಯಕರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ಎಲ್ಲೂ ಉಲ್ಲೇಖಿಸದೇ ಬಾಣ ಹೂಡಿದ್ದಾರೆ. ದಲಿತರನ್ನ ಸಿಎಂ ಮಾಡಬೇಕೆಂದು ಕಾಂಗ್ರೆಸ್‌ಗೆ ಗೊತ್ತಿರಲಿಲ್ವಾ? 60 ವರ್ಷಗಳ ಕಾಲ ರಾಜ್ಯ ಆಳುವ ವೇಳೆ ಗೊತ್ತಾಗಿರಲಿಲ್ವಾ? ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

ಈ ಜೀವ ಇರುವವರೆಗೂ ಮಂಡ್ಯಕ್ಕೆ ಬರ್ತೀನಿ.. ಮನ್ಮುಲ್​ನ ಹಾಲಿಗೆ ನೀರು ಬೆರೆಸಿದ​ ಹಗರಣ ಮುಚ್ಚಿಹಾಕಲು ಸಿಎಂ ಯಡಿಯೂರಪ್ಪ ಅವರ ಜತೆ ಚರ್ಚೆ ಮಾತನಾಡಿದ್ದಾರೆನ್ನುವ ವಿಚಾರವಾಗಿಯೂ ಪ್ರತಿಕ್ರಿಯೆ ನೀಡಿದ ಅವರು, ನಾನು ಮತ್ತು ದೇವೇಗೌಡರು ಸಿಎಂ ಜತೆ ಚರ್ಚಿಸಿದ್ದೇವೆ. ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿದ ನೀವು ತನಿಖೆ ಯಾವುದಾದ್ರು ಮಾಡಿಕೊಳ್ಳಿ ಆದ್ರೆ ಆಡಳಿತ ಮಂಡಳಿ ಸೂಪರ್ ಸೀಡ್ ಮಾಡೋದು ಬೇಡ ಎಂದು ಮಾತನಾಡಿದ್ದೇವೆ. ನನ್ನನ್ನು ಬಡ್ಡಿ ಮಗ ಎಂದು ಕರೆದಿದ್ದಾರಲ್ಲ. ಆತ ನಾನು ಮತ್ತು ದೇವೇಗೌಡರು ಕೊಟ್ಟಿರುವ ಅಸಲನ್ನೇ ಹಿಂತಿರುಗಿಸಿಲ್ಲ. ಇವರಿಗೆ ಮಾನ ಮರ್ಯಾದೆ ಇದ್ರೆ ಹಗರಣದ ಬಗೆಗೆ ತನಿಖೆ ನಡೆಸೋ ಬಗೆಗೆ ಮಾತನಾಡಲಿ. ಇವರ ಅಪ್ಪಣೆ ತಗೊಂಡು ನಾನು ಮಂಡ್ಯಗೆ ಬರಬೇಕಿಲ್ಲ. ನನ್ನ ಜನ ಬಡವರಿದ್ದಾರೆ. ನನಗೆ ಗೌರವ ಕೊಟ್ಟಿರುವ ಲಕ್ಷಾಂತರ ಜನ ಇಲ್ಲಿದ್ದಾರೆ. ಈ ಜೀವ ಇರುವವರೆಗೂ ಮಂಡ್ಯ ಜಿಲ್ಲೆಗೆ ಬರ್ತಿನಿ‌.ಮಾತನಾಡುವಾಗ ಎಚ್ಚರಿಕೆ ವಹಿಸಿ ಮಾತನಾಡಲಿ ಎಂದು ಹರಿಹಾಯ್ದಿದ್ದಾರೆ.

ಇದನ್ನೂ ಓದಿ: 

ಮಂಡ್ಯದಲ್ಲಿ ಹಾಲಿಗೆ ನೀರು ಬೆರೆಸಿ ವಂಚನೆ 100 ಕೋಟಿಯ ದೊಡ್ಡ ಹಗರಣ: ಮಾಜಿ ಸಚಿವ ಚಲುವರಾಯಸ್ವಾಮಿ

ಮಂಡ್ಯದಲ್ಲಿನ ಹಾಲಿಗೆ ನೀರು ಬೆರೆಸಿ ವಂಚನೆ ಪ್ರಕರಣ ಸಿಐಡಿ ತನಿಖೆಗೆ : ಸಿಎಂ ಯಡಿಯೂರಪ್ಪ ಘೋಷಣೆ

(Former CM HD Kumaraswamy says I am not the only one who has avoided the CM of Dalits in the state)

Published On - 6:06 pm, Tue, 29 June 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ