Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ದಲಿತರು ಸಿಎಂ ಆಗೋದನ್ನು ತಪ್ಪಿಸಿದ್ದು ನಾನಲ್ಲ: ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ

ದಲಿತರು ಸಿಎಂ ಆಗುವುದನ್ನು ತಪ್ಪಿಸಿದವರೇ ಈಗ ಮತ್ತೆ ಸಿಎಂ ಆಗಬೇಕು ಎಂದು ಹೇಳಿಕೊಳ್ಳುತ್ತಿದ್ದಾರೆ. 130 ಸೀಟಿನಲ್ಲಿ ಮುಖ್ಯಮಂತ್ರಿಯಾಗಿ 78ಕ್ಕೆ ಬಂದರಲ್ಲ, ಅವರು ದಲಿತ ಸಿಎಂ ಆಗೋದನ್ನು ತಪ್ಪಿಸಿದ್ದು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ಬಾಣ ಬಿಟ್ಟಿದ್ದಾರೆ.

ರಾಜ್ಯದಲ್ಲಿ ದಲಿತರು ಸಿಎಂ ಆಗೋದನ್ನು ತಪ್ಪಿಸಿದ್ದು ನಾನಲ್ಲ: ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ
ಎಚ್​.ಡಿ.ಕುಮಾರಸ್ವಾಮಿ
Follow us
TV9 Web
| Updated By: guruganesh bhat

Updated on:Jun 29, 2021 | 6:58 PM

ಮಂಡ್ಯ: ರಾಜ್ಯದಲ್ಲಿ ದಲಿತರು ಮುಖ್ಯಮಂತ್ರಿ ಆಗುವುದನ್ನು ನಾನು ತಪ್ಪಿಸಿರಲಿಲ್ಲ. ಸ್ವಾತಂತ್ರ್ಯ ಬಂದ ಬಳಿಕ 60 ವರ್ಷ ದಲಿತರನ್ನು ಸಿಎಂ ಮಾಡಬೇಕು ಎಂದು ಈವರೆಗೆ ಕಾಂಗ್ರೆಸ್​ನವರಿಗೆ ಗೊತ್ತಿರಲಿಲ್ವ? ದಲಿತರು ಸಿಎಂ ಆಗುವುದನ್ನು ತಪ್ಪಿಸಿದವರೇ ಈಗ ಮತ್ತೆ ಸಿಎಂ ಆಗಬೇಕು ಎಂದು ಹೇಳಿಕೊಳ್ಳುತ್ತಿದ್ದಾರೆ. 130 ಸೀಟಿನಲ್ಲಿ ಮುಖ್ಯಮಂತ್ರಿಯಾಗಿ 78ಕ್ಕೆ ಬಂದರಲ್ಲ, ಅವರು ದಲಿತ ಸಿಎಂ ಆಗೋದನ್ನು ತಪ್ಪಿಸಿದ್ದು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ಬಾಣ ಬಿಟ್ಟಿದ್ದಾರೆ.

ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ, ಸದ್ಯ ವಿಪಕ್ಷ ನಾಯಕರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ಎಲ್ಲೂ ಉಲ್ಲೇಖಿಸದೇ ಬಾಣ ಹೂಡಿದ್ದಾರೆ. ದಲಿತರನ್ನ ಸಿಎಂ ಮಾಡಬೇಕೆಂದು ಕಾಂಗ್ರೆಸ್‌ಗೆ ಗೊತ್ತಿರಲಿಲ್ವಾ? 60 ವರ್ಷಗಳ ಕಾಲ ರಾಜ್ಯ ಆಳುವ ವೇಳೆ ಗೊತ್ತಾಗಿರಲಿಲ್ವಾ? ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

ಈ ಜೀವ ಇರುವವರೆಗೂ ಮಂಡ್ಯಕ್ಕೆ ಬರ್ತೀನಿ.. ಮನ್ಮುಲ್​ನ ಹಾಲಿಗೆ ನೀರು ಬೆರೆಸಿದ​ ಹಗರಣ ಮುಚ್ಚಿಹಾಕಲು ಸಿಎಂ ಯಡಿಯೂರಪ್ಪ ಅವರ ಜತೆ ಚರ್ಚೆ ಮಾತನಾಡಿದ್ದಾರೆನ್ನುವ ವಿಚಾರವಾಗಿಯೂ ಪ್ರತಿಕ್ರಿಯೆ ನೀಡಿದ ಅವರು, ನಾನು ಮತ್ತು ದೇವೇಗೌಡರು ಸಿಎಂ ಜತೆ ಚರ್ಚಿಸಿದ್ದೇವೆ. ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿದ ನೀವು ತನಿಖೆ ಯಾವುದಾದ್ರು ಮಾಡಿಕೊಳ್ಳಿ ಆದ್ರೆ ಆಡಳಿತ ಮಂಡಳಿ ಸೂಪರ್ ಸೀಡ್ ಮಾಡೋದು ಬೇಡ ಎಂದು ಮಾತನಾಡಿದ್ದೇವೆ. ನನ್ನನ್ನು ಬಡ್ಡಿ ಮಗ ಎಂದು ಕರೆದಿದ್ದಾರಲ್ಲ. ಆತ ನಾನು ಮತ್ತು ದೇವೇಗೌಡರು ಕೊಟ್ಟಿರುವ ಅಸಲನ್ನೇ ಹಿಂತಿರುಗಿಸಿಲ್ಲ. ಇವರಿಗೆ ಮಾನ ಮರ್ಯಾದೆ ಇದ್ರೆ ಹಗರಣದ ಬಗೆಗೆ ತನಿಖೆ ನಡೆಸೋ ಬಗೆಗೆ ಮಾತನಾಡಲಿ. ಇವರ ಅಪ್ಪಣೆ ತಗೊಂಡು ನಾನು ಮಂಡ್ಯಗೆ ಬರಬೇಕಿಲ್ಲ. ನನ್ನ ಜನ ಬಡವರಿದ್ದಾರೆ. ನನಗೆ ಗೌರವ ಕೊಟ್ಟಿರುವ ಲಕ್ಷಾಂತರ ಜನ ಇಲ್ಲಿದ್ದಾರೆ. ಈ ಜೀವ ಇರುವವರೆಗೂ ಮಂಡ್ಯ ಜಿಲ್ಲೆಗೆ ಬರ್ತಿನಿ‌.ಮಾತನಾಡುವಾಗ ಎಚ್ಚರಿಕೆ ವಹಿಸಿ ಮಾತನಾಡಲಿ ಎಂದು ಹರಿಹಾಯ್ದಿದ್ದಾರೆ.

ಇದನ್ನೂ ಓದಿ: 

ಮಂಡ್ಯದಲ್ಲಿ ಹಾಲಿಗೆ ನೀರು ಬೆರೆಸಿ ವಂಚನೆ 100 ಕೋಟಿಯ ದೊಡ್ಡ ಹಗರಣ: ಮಾಜಿ ಸಚಿವ ಚಲುವರಾಯಸ್ವಾಮಿ

ಮಂಡ್ಯದಲ್ಲಿನ ಹಾಲಿಗೆ ನೀರು ಬೆರೆಸಿ ವಂಚನೆ ಪ್ರಕರಣ ಸಿಐಡಿ ತನಿಖೆಗೆ : ಸಿಎಂ ಯಡಿಯೂರಪ್ಪ ಘೋಷಣೆ

(Former CM HD Kumaraswamy says I am not the only one who has avoided the CM of Dalits in the state)

Published On - 6:06 pm, Tue, 29 June 21

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​