ಬೇರೆ ಮಹಿಳೆಯರ ಬಗ್ಗೆ ಬೇಕಾದರೆ ಚರ್ಚೆ ಮಾಡೋಣ, ಆದರೆ ಇಂತಹ ವಿಶೇಷವಾದ ಮಹಿಳೆಗೆ ನಮಸ್ಕಾರ: ಸಂಸದೆ ಸುಮಲತಾಗೆ ಕೈಮುಗಿದ ಮಾಜಿ ಸಿಎಂ ಕುಮಾರಸ್ವಾಮಿ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ಮಾತನಾಡಿದ ಅವರು, ನಾನಿಲ್ಲದಿದ್ದರೆ ಆಗ ಏನಾಗುತ್ತಿತ್ತು ಎಂದು ಎಲ್ಲವೂ ಗೊತ್ತಿದೆ. ಬೇರೆ ಮಹಿಳೆಯರ ಬಗ್ಗೆ ಬೇಕಾದರೆ ಚರ್ಚೆ ಮಾಡೋಣ. ಇಂತಹ ವಿಶೇಷವಾದ ಮಹಿಳೆಗೆ ನಮಸ್ಕಾರ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕೈಮುಗಿದಿದ್ದಾರೆ.

ಬೇರೆ ಮಹಿಳೆಯರ ಬಗ್ಗೆ ಬೇಕಾದರೆ ಚರ್ಚೆ ಮಾಡೋಣ, ಆದರೆ ಇಂತಹ ವಿಶೇಷವಾದ ಮಹಿಳೆಗೆ ನಮಸ್ಕಾರ: ಸಂಸದೆ ಸುಮಲತಾಗೆ ಕೈಮುಗಿದ ಮಾಜಿ ಸಿಎಂ ಕುಮಾರಸ್ವಾಮಿ
ಹೆಚ್ ಡಿ ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್
Follow us
| Updated By: guruganesh bhat

Updated on: Jul 08, 2021 | 6:05 PM

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಅವರ ಅಂಬರೀಶ್ ವಿಚಾರ ಚರ್ಚಿಸಿದರೆ ಮಣ್ಣಾಗುತ್ತಾರೆಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕೈ ಮುಗಿದಿದ್ದಾರೆ. ಜತೆಗೆ ಮಣ್ಣಾಗುವುದು ನಾನಲ್ಲ. ಅವರು ಎಂದು ತಿರುಗೇಟನ್ನೂ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ಮಾತನಾಡಿದ ಅವರು, ನಾನಿಲ್ಲದಿದ್ದರೆ ಆಗ ಏನಾಗುತ್ತಿತ್ತು ಎಂದು ಎಲ್ಲವೂ ಗೊತ್ತಿದೆ. ಬೇರೆ ಮಹಿಳೆಯರ ಬಗ್ಗೆ ಬೇಕಾದರೆ ಚರ್ಚೆ ಮಾಡೋಣ. ಇಂತಹ ವಿಶೇಷವಾದ ಮಹಿಳೆಗೆ ನಮಸ್ಕಾರ ಎಂದು ಕೈಮುಗಿದಿದ್ದಾರೆ. ಹಿರಿಯ ನಟ ವಿಷ್ಣುವರ್ಧನ್ ಅವರ ಸ್ಮಾರಕ ಏನಾಯಿತು ಎಲ್ಲರಿಗೂ ಗೊತ್ತಿದೆ. ಬಿಜೆಪಿ ಸರ್ಕಾರದವರು ಈವರೆಗೆ ಏನಾದರೂ ಮಾಡಿದ್ದಾರಾ? ಎಂದು ಅವರು ಪ್ರಶ್ನಿಸಿದ್ದಾರೆ.

ಅಕ್ರಮ ಗಣಿಗಾರಿಕೆ ವಿಚಾರವಾಗಿ ಗಣಿ ಸಚಿವ ಮುರುಗೇಶ್ ನಿರಾಣಿ ಅಕ್ರಮ ಗಣಿಗಾರಿಕೆ ನಿಷೇಧಿಸಿದ್ದೇವೆಂದು ಸ್ಪಷ್ಟನೆ ನೀಡಿದ್ದಾರೆ. ನಾನು ಸಿಎಂ ಆಗಿದ್ದಾಗಿ ಅಕ್ರಮ ಗಣಿಗಾರಿಕೆ ಬಂದ್ ಮಾಡಿಸಿದ್ದೆ. ನನ್ನನ್ನು ಫಿನಿಶ್​ ಮಾಡ್ತೇವೆಂದು ತಿಳಿದುಕೊಂಡಿದ್ದರೆ ಅದು ಆಗಲ್ಲ. ಇನ್ನು 100 ವರ್ಷ ಆದರೂ ಕೆಆರ್​ಎಸ್​ ಡ್ಯಾಂಗೆ ಏನೂ ಆಗಲ್ಲ. ನನ್ನ ಅವಧಿಯಲ್ಲಿ ಕೆಆರ್​ಎಸ್ 20 ಕಿ.ಮೀ ಸುತ್ತಮುತ್ತ ಗಣಿಗಾರಿಕೆ ನಿಷೇಧಿಸಿದ್ದೆ. ಮನ್ಮುಲ್​, ಮೈಶುಗರ್​ ವಿಚಾರದಲ್ಲಿ ಮಂಡ್ಯ ಜಿಲ್ಲೆಯ ಜನತೆಗೆ ಅನ್ಯಾಯ ಆಗಲು ಬಿಡಲ್ಲ ಎಂದು ಜೆಡಿಎಸ್ ವರಿಷ್ಠರೂ ಆಗಿರುವ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

(Former CM Kumaraswamy says Let’s talk about other women but dont about such a special woman in KRS Dam issue)