AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೆ ಮಹಿಳೆಯರ ಬಗ್ಗೆ ಬೇಕಾದರೆ ಚರ್ಚೆ ಮಾಡೋಣ, ಆದರೆ ಇಂತಹ ವಿಶೇಷವಾದ ಮಹಿಳೆಗೆ ನಮಸ್ಕಾರ: ಸಂಸದೆ ಸುಮಲತಾಗೆ ಕೈಮುಗಿದ ಮಾಜಿ ಸಿಎಂ ಕುಮಾರಸ್ವಾಮಿ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ಮಾತನಾಡಿದ ಅವರು, ನಾನಿಲ್ಲದಿದ್ದರೆ ಆಗ ಏನಾಗುತ್ತಿತ್ತು ಎಂದು ಎಲ್ಲವೂ ಗೊತ್ತಿದೆ. ಬೇರೆ ಮಹಿಳೆಯರ ಬಗ್ಗೆ ಬೇಕಾದರೆ ಚರ್ಚೆ ಮಾಡೋಣ. ಇಂತಹ ವಿಶೇಷವಾದ ಮಹಿಳೆಗೆ ನಮಸ್ಕಾರ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕೈಮುಗಿದಿದ್ದಾರೆ.

ಬೇರೆ ಮಹಿಳೆಯರ ಬಗ್ಗೆ ಬೇಕಾದರೆ ಚರ್ಚೆ ಮಾಡೋಣ, ಆದರೆ ಇಂತಹ ವಿಶೇಷವಾದ ಮಹಿಳೆಗೆ ನಮಸ್ಕಾರ: ಸಂಸದೆ ಸುಮಲತಾಗೆ ಕೈಮುಗಿದ ಮಾಜಿ ಸಿಎಂ ಕುಮಾರಸ್ವಾಮಿ
ಹೆಚ್ ಡಿ ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್
Follow us
TV9 Web
| Updated By: guruganesh bhat

Updated on: Jul 08, 2021 | 6:05 PM

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಅವರ ಅಂಬರೀಶ್ ವಿಚಾರ ಚರ್ಚಿಸಿದರೆ ಮಣ್ಣಾಗುತ್ತಾರೆಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕೈ ಮುಗಿದಿದ್ದಾರೆ. ಜತೆಗೆ ಮಣ್ಣಾಗುವುದು ನಾನಲ್ಲ. ಅವರು ಎಂದು ತಿರುಗೇಟನ್ನೂ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ಮಾತನಾಡಿದ ಅವರು, ನಾನಿಲ್ಲದಿದ್ದರೆ ಆಗ ಏನಾಗುತ್ತಿತ್ತು ಎಂದು ಎಲ್ಲವೂ ಗೊತ್ತಿದೆ. ಬೇರೆ ಮಹಿಳೆಯರ ಬಗ್ಗೆ ಬೇಕಾದರೆ ಚರ್ಚೆ ಮಾಡೋಣ. ಇಂತಹ ವಿಶೇಷವಾದ ಮಹಿಳೆಗೆ ನಮಸ್ಕಾರ ಎಂದು ಕೈಮುಗಿದಿದ್ದಾರೆ. ಹಿರಿಯ ನಟ ವಿಷ್ಣುವರ್ಧನ್ ಅವರ ಸ್ಮಾರಕ ಏನಾಯಿತು ಎಲ್ಲರಿಗೂ ಗೊತ್ತಿದೆ. ಬಿಜೆಪಿ ಸರ್ಕಾರದವರು ಈವರೆಗೆ ಏನಾದರೂ ಮಾಡಿದ್ದಾರಾ? ಎಂದು ಅವರು ಪ್ರಶ್ನಿಸಿದ್ದಾರೆ.

ಅಕ್ರಮ ಗಣಿಗಾರಿಕೆ ವಿಚಾರವಾಗಿ ಗಣಿ ಸಚಿವ ಮುರುಗೇಶ್ ನಿರಾಣಿ ಅಕ್ರಮ ಗಣಿಗಾರಿಕೆ ನಿಷೇಧಿಸಿದ್ದೇವೆಂದು ಸ್ಪಷ್ಟನೆ ನೀಡಿದ್ದಾರೆ. ನಾನು ಸಿಎಂ ಆಗಿದ್ದಾಗಿ ಅಕ್ರಮ ಗಣಿಗಾರಿಕೆ ಬಂದ್ ಮಾಡಿಸಿದ್ದೆ. ನನ್ನನ್ನು ಫಿನಿಶ್​ ಮಾಡ್ತೇವೆಂದು ತಿಳಿದುಕೊಂಡಿದ್ದರೆ ಅದು ಆಗಲ್ಲ. ಇನ್ನು 100 ವರ್ಷ ಆದರೂ ಕೆಆರ್​ಎಸ್​ ಡ್ಯಾಂಗೆ ಏನೂ ಆಗಲ್ಲ. ನನ್ನ ಅವಧಿಯಲ್ಲಿ ಕೆಆರ್​ಎಸ್ 20 ಕಿ.ಮೀ ಸುತ್ತಮುತ್ತ ಗಣಿಗಾರಿಕೆ ನಿಷೇಧಿಸಿದ್ದೆ. ಮನ್ಮುಲ್​, ಮೈಶುಗರ್​ ವಿಚಾರದಲ್ಲಿ ಮಂಡ್ಯ ಜಿಲ್ಲೆಯ ಜನತೆಗೆ ಅನ್ಯಾಯ ಆಗಲು ಬಿಡಲ್ಲ ಎಂದು ಜೆಡಿಎಸ್ ವರಿಷ್ಠರೂ ಆಗಿರುವ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

(Former CM Kumaraswamy says Let’s talk about other women but dont about such a special woman in KRS Dam issue)

ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು