AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಚಿತ್ರಕಲೆ, ಕ್ರೀಡೆ ಹೇಳಿಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಹಳೆ ವಿದ್ಯಾರ್ಥಿ ಲೈಂಗಿಕ ದೌರ್ಜನ್ಯ

ಒಂದೇ ಶಾಲೆಯ ಹತ್ತಾರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ಶಾಲೆಯ ಹಳೆಯ ವಿದ್ಯಾರ್ಥಿ ಮೇಲೆ ಪ್ರಕರಣ ದಾಖಲಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಜೊತೆಗೆ ಐಪಿಸಿ ಸೆಕ್ಸನ್ 354 A, 354 D, 509 ರಿತ್ಯ ಕೇಸ್ ದಾಖಲಾಗಿದೆ.

ಮಂಡ್ಯ: ಚಿತ್ರಕಲೆ, ಕ್ರೀಡೆ ಹೇಳಿಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಹಳೆ ವಿದ್ಯಾರ್ಥಿ ಲೈಂಗಿಕ ದೌರ್ಜನ್ಯ
ಮೇಲುಕೋಟೆ ಪೊಲೀಸ್ ಠಾಣೆ
ಪ್ರಶಾಂತ್​ ಬಿ.
| Edited By: |

Updated on: Jul 09, 2024 | 10:51 AM

Share

ಮಂಡ್ಯ, ಜುಲೈ.09: ಸಕ್ಕರೆ ನಾಡು ಮಂಡ್ಯದಲ್ಲಿ (Mandya) ಹೀನಾಯ ಘಟನೆಯೊಂದು ನಡೆದಿದೆ. ಒಂದೇ ಶಾಲೆಯ ಹತ್ತಾರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ಶಾಲೆಯ ಹಳೆಯ ವಿದ್ಯಾರ್ಥಿ ಮೇಲೆ ಪ್ರಕರಣ ದಾಖಲಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಯೋಗಿ ಎಂಬ ಹಳೇ ವಿದ್ಯಾರ್ಥಿ ತನ್ನ ಶಾಲೆಯ ಮಕ್ಕಳಿಗೆ ಚಿತ್ರಕಲೆ, ಕ್ರೀಡೆ ಹೇಳಿಕೊಡುವ ನೆಪದಲ್ಲಿ ಮಕ್ಕಳನ್ನು ಬಳಸಿಕೊಂಡು ಹೀನ ಕೃತ್ಯ ಎಸಗಿದ್ದಾನೆ. ಅಣ್ಣನಂತೆ ನಂಬಿಸಿ ಅಪ್ರಾಪ್ತ ವಿದ್ಯಾರ್ಥಿನಿಯರ ನಗ್ನ ಫೋಟೋ ತೆಗೆದು ಬ್ಲಾಕ್ ಮೇಲ್ (Blackmail) ಮಾಡಿದ್ದಾನೆ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ.

ಮೇಲುಕೋಟೆ ಠಾಣಾ ವ್ಯಾಪ್ತಿಯ ಸರ್ಕಾರಿ ಪ್ರೌಢ ಶಾಲೆಯೊಂದರ ಹಲವು ಅಪ್ರಾಪ್ತ ಬಾಲಕಿಯರಿಗೆ ಆರೋಪಿ ಯೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಸದ್ಯ ನೊಂದ ನಾಲ್ವರು ಬಾಲಕಿಯರು ಘಟನೆ ಸಂಬಂಧ ದೂರು ನೀಡಿದ್ದು ದೂರಿನನ್ವಯ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆ ಪೊಲೀಸರು ಎಫ್​ಐಆರ್ ದಾಖಲಿಸಿ ಯೋಗಿಯನ್ನು ಬಂಧಿಸಿ ಜೈಲಿಗೆ ತಳ್ಳಿದ್ದಾರೆ.

ಇದನ್ನೂ ಓದಿ: ಮಿನಿಸ್ಟರ್ ಕಡೆಯಿಂದ ಪ್ರೆಶರ್ ಬಂತು: ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರ ಪ್ರಕರಣದ ಆಡಿಯೋ ವೈರಲ್

ಕ್ರೀಡೆಯಲ್ಲಿ ಆಸಕ್ತಿ ಇದ್ದ ಬಾಲಕಿಯರನ್ನೇ ಆರೋಪಿ ಯೋಗಿ ಟಾರ್ಗೆಟ್ ಮಾಡುತ್ತಿದ್ದ. ವಿದ್ಯಾರ್ಥಿನಿಯರಿಗೆ ಡ್ರಾಪ್ ಕೊಡುವ ನೆಪದಲ್ಲಿ, ಕ್ರೀಡೆ ಹೇಳಿಕೊಡುವ ನೆಪದಲ್ಲಿ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವಾಗ ನಗ್ನ ಫೋಟೋ ತೆಗೆದು ಅವುಗಳನ್ನ ಹೆತ್ತವರಿಗೆ ಕಳುಹಿಸುವುದಾಗಿ ಬೆದರಿಸಿ ದೌರ್ಜನ್ಯ ಎಸಗುತ್ತಿದ್ದ. ಕಿರಾತಕನ ದೌರ್ಜನ್ಯದಿಂದ ಬೇಸತ್ತ ಮಕ್ಕಳು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಿಗೆ ಪತ್ರ ಬರೆದಿದ್ದು ವಿದ್ಯಾರ್ಥಿನಿಯರ ಪತ್ರ ನೋಡಿ ಶಾಲೆಗೆ ತೆರಳಿ ವಿಚಾರಿಸಿದಾಗ ಘೋರ ಕೃತ್ಯ ಬೆಳಕಿಗೆ ಬಂದಿದೆ. ಒಂದೇ ಶಾಲೆಯ ಹಲವು ವಿದ್ಯಾರ್ಥಿನಿಯರಿಗೆ ಬ್ಲಾಕ್ ‌ಮೇಲ್ ಮಾಡಿ ಲೈಂಗಿಕ ಕಿರುಕುಳ ನೀಡಿರುವುದು ಪತ್ತೆಯಾಗಿದೆ. ಪೋಕ್ಸೋ ಜೊತೆಗೆ ಐಪಿಸಿ ಸೆಕ್ಸನ್ 354 A, 354 D, 509 ರಿತ್ಯ ಕೇಸ್ ದಾಖಲಿಸಿ ಆರೋಪಿಯನ್ನು ಜೈಲಿಗೆ ಕಳುಹಿಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ