ಮಂಡ್ಯ: ಚಿತ್ರಕಲೆ, ಕ್ರೀಡೆ ಹೇಳಿಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಹಳೆ ವಿದ್ಯಾರ್ಥಿ ಲೈಂಗಿಕ ದೌರ್ಜನ್ಯ

ಒಂದೇ ಶಾಲೆಯ ಹತ್ತಾರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ಶಾಲೆಯ ಹಳೆಯ ವಿದ್ಯಾರ್ಥಿ ಮೇಲೆ ಪ್ರಕರಣ ದಾಖಲಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಜೊತೆಗೆ ಐಪಿಸಿ ಸೆಕ್ಸನ್ 354 A, 354 D, 509 ರಿತ್ಯ ಕೇಸ್ ದಾಖಲಾಗಿದೆ.

ಮಂಡ್ಯ: ಚಿತ್ರಕಲೆ, ಕ್ರೀಡೆ ಹೇಳಿಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಹಳೆ ವಿದ್ಯಾರ್ಥಿ ಲೈಂಗಿಕ ದೌರ್ಜನ್ಯ
ಮೇಲುಕೋಟೆ ಪೊಲೀಸ್ ಠಾಣೆ
Follow us
| Updated By: ಆಯೇಷಾ ಬಾನು

Updated on: Jul 09, 2024 | 10:51 AM

ಮಂಡ್ಯ, ಜುಲೈ.09: ಸಕ್ಕರೆ ನಾಡು ಮಂಡ್ಯದಲ್ಲಿ (Mandya) ಹೀನಾಯ ಘಟನೆಯೊಂದು ನಡೆದಿದೆ. ಒಂದೇ ಶಾಲೆಯ ಹತ್ತಾರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ಶಾಲೆಯ ಹಳೆಯ ವಿದ್ಯಾರ್ಥಿ ಮೇಲೆ ಪ್ರಕರಣ ದಾಖಲಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಯೋಗಿ ಎಂಬ ಹಳೇ ವಿದ್ಯಾರ್ಥಿ ತನ್ನ ಶಾಲೆಯ ಮಕ್ಕಳಿಗೆ ಚಿತ್ರಕಲೆ, ಕ್ರೀಡೆ ಹೇಳಿಕೊಡುವ ನೆಪದಲ್ಲಿ ಮಕ್ಕಳನ್ನು ಬಳಸಿಕೊಂಡು ಹೀನ ಕೃತ್ಯ ಎಸಗಿದ್ದಾನೆ. ಅಣ್ಣನಂತೆ ನಂಬಿಸಿ ಅಪ್ರಾಪ್ತ ವಿದ್ಯಾರ್ಥಿನಿಯರ ನಗ್ನ ಫೋಟೋ ತೆಗೆದು ಬ್ಲಾಕ್ ಮೇಲ್ (Blackmail) ಮಾಡಿದ್ದಾನೆ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ.

ಮೇಲುಕೋಟೆ ಠಾಣಾ ವ್ಯಾಪ್ತಿಯ ಸರ್ಕಾರಿ ಪ್ರೌಢ ಶಾಲೆಯೊಂದರ ಹಲವು ಅಪ್ರಾಪ್ತ ಬಾಲಕಿಯರಿಗೆ ಆರೋಪಿ ಯೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಸದ್ಯ ನೊಂದ ನಾಲ್ವರು ಬಾಲಕಿಯರು ಘಟನೆ ಸಂಬಂಧ ದೂರು ನೀಡಿದ್ದು ದೂರಿನನ್ವಯ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆ ಪೊಲೀಸರು ಎಫ್​ಐಆರ್ ದಾಖಲಿಸಿ ಯೋಗಿಯನ್ನು ಬಂಧಿಸಿ ಜೈಲಿಗೆ ತಳ್ಳಿದ್ದಾರೆ.

ಇದನ್ನೂ ಓದಿ: ಮಿನಿಸ್ಟರ್ ಕಡೆಯಿಂದ ಪ್ರೆಶರ್ ಬಂತು: ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರ ಪ್ರಕರಣದ ಆಡಿಯೋ ವೈರಲ್

ಕ್ರೀಡೆಯಲ್ಲಿ ಆಸಕ್ತಿ ಇದ್ದ ಬಾಲಕಿಯರನ್ನೇ ಆರೋಪಿ ಯೋಗಿ ಟಾರ್ಗೆಟ್ ಮಾಡುತ್ತಿದ್ದ. ವಿದ್ಯಾರ್ಥಿನಿಯರಿಗೆ ಡ್ರಾಪ್ ಕೊಡುವ ನೆಪದಲ್ಲಿ, ಕ್ರೀಡೆ ಹೇಳಿಕೊಡುವ ನೆಪದಲ್ಲಿ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವಾಗ ನಗ್ನ ಫೋಟೋ ತೆಗೆದು ಅವುಗಳನ್ನ ಹೆತ್ತವರಿಗೆ ಕಳುಹಿಸುವುದಾಗಿ ಬೆದರಿಸಿ ದೌರ್ಜನ್ಯ ಎಸಗುತ್ತಿದ್ದ. ಕಿರಾತಕನ ದೌರ್ಜನ್ಯದಿಂದ ಬೇಸತ್ತ ಮಕ್ಕಳು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಿಗೆ ಪತ್ರ ಬರೆದಿದ್ದು ವಿದ್ಯಾರ್ಥಿನಿಯರ ಪತ್ರ ನೋಡಿ ಶಾಲೆಗೆ ತೆರಳಿ ವಿಚಾರಿಸಿದಾಗ ಘೋರ ಕೃತ್ಯ ಬೆಳಕಿಗೆ ಬಂದಿದೆ. ಒಂದೇ ಶಾಲೆಯ ಹಲವು ವಿದ್ಯಾರ್ಥಿನಿಯರಿಗೆ ಬ್ಲಾಕ್ ‌ಮೇಲ್ ಮಾಡಿ ಲೈಂಗಿಕ ಕಿರುಕುಳ ನೀಡಿರುವುದು ಪತ್ತೆಯಾಗಿದೆ. ಪೋಕ್ಸೋ ಜೊತೆಗೆ ಐಪಿಸಿ ಸೆಕ್ಸನ್ 354 A, 354 D, 509 ರಿತ್ಯ ಕೇಸ್ ದಾಖಲಿಸಿ ಆರೋಪಿಯನ್ನು ಜೈಲಿಗೆ ಕಳುಹಿಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ