AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Free Electricity: ಎಲೆಕ್ಟ್ರಿಕ್ ಬೈಕ್ ಕೊಳ್ಳಲು ಮುಗಿಬಿದ್ದ ಗ್ರಾಹಕರು; ಡೆಲವರಿ ನೀಡುವ ಬರದಲ್ಲಿ ಓಲಾ ಕಂಪನಿ ಎಡವಟ್ಟು ಬಹಿರಂಗ

ಉಚಿತ 200 ಯ್ಯೂನಿಟ್ ವಿದ್ಯುತ್ ಘೋಷಣೆ ಹಿನ್ನೆಲೆ ಎಲೆಕ್ಟ್ರಿಕ್ ಬೈಕ್ ಕೊಂಡುಕೊಳ್ಳಲು ಜನರು ಮುಗಿಬಿದ್ದಿದ್ದಾರೆ. ಗ್ರಾಹಕರೇ ಹೀಗೆ ಎಲೆಕ್ಟ್ರಿಕ್​ ಬೈಕ್​ ಕೊಳ್ಳವಾಗ ಎಚ್ಚರವಹಿಸಿ. ಏಕೆಂದರೇ ಹುಮ್ಮಸ್ಸಿನಲ್ಲಿ ಬೈಕ್​ಕೊಂಡ ಮೇಲೆ ಅದರಲ್ಲಿ ತಾಂತ್ರಿಕ ದೋಷ ಉಂಟಾಗಬಹುದು.

Free Electricity: ಎಲೆಕ್ಟ್ರಿಕ್ ಬೈಕ್ ಕೊಳ್ಳಲು ಮುಗಿಬಿದ್ದ ಗ್ರಾಹಕರು; ಡೆಲವರಿ ನೀಡುವ ಬರದಲ್ಲಿ ಓಲಾ ಕಂಪನಿ ಎಡವಟ್ಟು ಬಹಿರಂಗ
ಓಲಾ
ವಿವೇಕ ಬಿರಾದಾರ
|

Updated on:Jun 18, 2023 | 2:54 PM

Share

ಮಂಡ್ಯ: ಉಚಿತ 200 ಯುನಿಟ್ ವಿದ್ಯುತ್ (Free Electricity) ಘೋಷಣೆ ಹಿನ್ನೆಲೆ ಎಲೆಕ್ಟ್ರಿಕ್ ಬೈಕ್ (Electric Bike) ಕೊಂಡುಕೊಳ್ಳಲು ಜನರು ಮುಗಿಬಿದ್ದಿದ್ದಾರೆ. ಗ್ರಾಹಕರೇ ಹೀಗೆ ಎಲೆಕ್ಟ್ರಿಕ್​ ಬೈಕ್​ ಕೊಳ್ಳವಾಗ ಎಚ್ಚರವಹಿಸಿ. ಏಕೆಂದರೇ ಹುಮ್ಮಸ್ಸಿನಲ್ಲಿ ಬೈಕ್​ಕೊಂಡ ಮೇಲೆ ಅದರಲ್ಲಿ ತಾಂತ್ರಿಕ ದೋಷ ಉಂಟಾಗಬಹುದು. ಹೌದು ಮಂಡ್ಯ ನಗರದ ಕಲ್ಲಹಳ್ಳಿಯಲ್ಲಿರುವ ಓಲಾ ಶೋರೂಂ ಗ್ರಾಹಕರಿಗೆ ಡೆಲವರಿ ನೀಡುವ ಎಲೆಕ್ಟ್ರಿಕ್​​ ಬೈಕ್​​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಳ್ಳುತ್ತಿದೆ. ಓಲಾ ಬೈಕ್​​ಗಳು ಇದ್ದಕ್ಕಿದ್ದಂತೆ ಹ್ಯಾಂಡಲ್ ಲಾಕ್ ಆಗುತ್ತಿವೆ.

ಓಮ್ಮೆ ಹ್ಯಾಂಡಲ್ ಲಾಕ್ ಆದರೆ ಟೆಕ್ನಿಶಿಯನ್ ಬಂದೇ ಲಾಕ್ ಓಪನ್ ಮಾಡಬೇಕಾದ ಅನಿವಾರ್ಯತೆ ಉಂಟಾಗಿದೆ. ಹೀಗಾಗಿ ಎಲೆಕ್ಟ್ರಿಕ್ ಬೈಕ್ ಕೊಂಡ ಮಾಲೀಕರು ತಾಂತ್ರಿಕ ಸಮಸ್ಯೆಯಿಂದ ಪರದಾಡುತ್ತಿದ್ದಾರೆ. ಈ ಬಗ್ಗೆ ಶೋರೂಂಗೆ ಹೋಗಿ ಕೇಳಿದರು ಪರಿಹಾರ ಸಿಗುತ್ತಿಲ್ಲ. ಈ ಹಿನ್ನೆಲೆ ಸರ್ವಿಸ್ ಸೆಂಟರ್​​ನಲ್ಲಿ ಶೋರೊಂ ಮಾಲೀಕರ ವಿರುದ್ಧ ಗ್ರಾಹಕರು ಆಕ್ರೋಶಗೊಂಡಿದ್ದಾರೆ.

ಇದನ್ನೂ ಓದಿ: Gruha Jyoti Scheme: ಉಚಿತ ವಿದ್ಯುತ್‌ ಪಡೆಯಲು ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವುದೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಳಗಾವಿಯಲ್ಲಿ ಎಲೆಕ್ಟ್ರಿಕ್ ವಸ್ತುಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಈ ಬೈಕ್​ಗಳು ಮಾರಾಟ ಆಗುತ್ತಿವೆ. ಈವರೆಗೂ ದಿನಕ್ಕೆ ಎರಡರಿಂದ ಮೂರು ಮಾರಾಟ ಆಗುತ್ತಿದ್ದ ಬೈಕ್​ಗಳು ಇದೀಗ ದಿನಕ್ಕೆ ಎಂಟರಿಂದ ಹತ್ತು ಮಾರಾಟ ಆಗುತ್ತಿದ್ದವು. ದಿನಕ್ಕೆ ಮೂವತ್ತರಷ್ಟು ಜನ ಬಂದು ಬೈಕ್​ಗಳ ಕುರಿತು ವಿಚಾರಿಸುತ್ತಿದ್ದು ಅದರಲ್ಲಿ ಸಾಕಷ್ಟು ಜನ ಬೈಕ್ ಕೊಂಡುಕೊಳ್ಳುತ್ತಿದ್ದಾರೆ ಅಂತಾ ಡೀಲರ್ ಕರ್ಲೇಕರ್ ಎಂಬುವವರು ಮಾಹಿತಿ ನೀಡಿದ್ದರು.

ಇನ್ನೂ ಕಳೆದ ಹದಿನೈದು ದಿನಗಳಿಂದ ಈಚೆಗೆ ಹೆಚ್ಚಿನ ಪ್ರಮಾಣದಲ್ಲಿ ಇಲೆಕ್ಟ್ರಿಕಲ್ ಬೈಕ್​ಗಳು ಮಾರಾಟವಾಗಿದ್ದವು. ಒಂದು ಬಾರಿ ಚಾರ್ಜ್ ಮಾಡಿದರೇ ಎರಡು ಯುನಿಟ್ ನಷ್ಟು ವಿದ್ಯುತ್ ಖರ್ಚಾಗುತ್ತಿದ್ದು ಹೀಗಾಗಿ ಸಾಕಷ್ಟು ಜನ ಬೈಕ್ ಕೊಂಡುಕೊಳ್ಳುತ್ತಿದ್ದರು. ಇನ್ನೂ ಕೆಲ ದಿನಗಳಿಗೆ ಆಗುವಷ್ಟು ಸ್ಟಾಕ್ ಇದ್ದು ಇದೇ ರೀತಿ ಬೇಡಿಕೆ ಮುಂದುವರೆದರೇ ಸ್ಟಾಕ್ ಖಾಲಿಯಾಗಲಿದೆ ಎಂದು ಡೀಲರ್‌ಗಳು ಸಂತಸ ವ್ಯಕ್ತಪಡಿಸಿದ್ದರು.

ಹಾಸನದಲ್ಲೂ ಹೆಚ್ಚಿದ ಎಲೆಕ್ಟ್ರಿಕ್ ಬೈಕ್ ಬೇಡಿಕೆ

ಹಾಸನ: 200 ಯುನಿಟ್ ವರೆಗೆ ಉಚಿತ ವಿದ್ಯುತ್ ಕೊಡುಗೆಯಿಂದ ಎಲೆಕ್ಟ್ರಾನಿಕ್ ಬೈಕ್ ಖರೀದಿ ಕಡೆಗೆ ಜನರ ಒಲವು ಹೆಚ್ಚಿದೆ. ದುಬಾರಿ ಪೆಟ್ರೋಲ್ ಬೆಲೆಗೆ ಪರ್ಯಾಯವಾಗಿ ವಿದ್ಯುತ್ ಚಾಲಿತ ವಾಹನ ಖರೀದಿಗೆ ಹಾಸನದಲ್ಲಿ ಡಿಮ್ಯಾಂಡ್ ಹೆಚ್ಚಿತ್ತು. ಎರಡು ಯುನಿಟ್ ಬಳಸಿದ್ರೆ 80.ಕಿಲೋಮೀಟರ್ ಪ್ರಯಾಣ ಮಾಡಬಹುದು. ಕೇವಲ 6 ರೂಗೆ 80. ಕಿಲೋಮೀಟರ್ ಸಂಚಾರ, ಅದೂ ಕೂಡ ಕರೆಂಟ್ ಉಚಿತವಾಗಿ ಸಿಗುವುದರಿಂದ ಹೆಚ್ಚಿನ ಲಾಭ ಹಿನ್ನೆಲೆಯಲ್ಲಿ ಜನರಲ್ಲಿ ಆಸಕ್ತಿ ಹೆಚ್ಚಿತ್ತು. ಎಲೆಕ್ಟ್ರಾನಿಕ್ ಬೈಕ್ ಗಳ ಖರೀದಿಗೆ ಜನ ಮುಗಿಬಿದ್ದಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Sun, 18 June 23

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ