AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

58 ವರ್ಷದಿಂದ ಇದ್ದ ದೇಗುಲದ ಗುಡ್ಡಪ್ಪ ನೇಮಕ ವಿವಾದಕ್ಕೆ ತೆರೆ; ದೇವಾಲಯದ ಕೊಳಕ್ಕೆ ತಳ್ಳಿ ಅರ್ಚಕರ ಆಯ್ಕೆ ಮಾಡಿದ ಬಸಪ್ಪ

ಮಂಡ್ಯ ಜಿಲ್ಲೆ ದೊಡ್ಡಬಾಣಸವಾಡಿ ಗ್ರಾಮದಲ್ಲಿ ಮೂರು ದೇವಾಲಯಗಳಿಗೆ ಮೂವರು ಪೂಜಾರಿಗಳ ನೇಮಕ ಕಳೆದ 58 ವರ್ಷದಿಂದ ನಡೆದಿರಲಿಲ್ಲ. ಸದ್ಯ ಬಸಪ್ಪ 3 ದೇಗುಲಕ್ಕೆ ಮೂವರು ಪೂಜಾರಿಗಳನ್ನು ನೇಮಿಸುವ ಮೂಲಕ ಅಚ್ಚರಿ ಮೂಡಿಸಿದೆ.

58 ವರ್ಷದಿಂದ ಇದ್ದ ದೇಗುಲದ ಗುಡ್ಡಪ್ಪ ನೇಮಕ ವಿವಾದಕ್ಕೆ ತೆರೆ; ದೇವಾಲಯದ ಕೊಳಕ್ಕೆ ತಳ್ಳಿ ಅರ್ಚಕರ ಆಯ್ಕೆ ಮಾಡಿದ ಬಸಪ್ಪ
ದೇವಾಲಯದ ಕೊಳಕ್ಕೆ ತಳ್ಳಿ ಅರ್ಚಕರ ಆಯ್ಕೆ ಮಾಡಿದ ಬಸಪ್ಪ
TV9 Web
| Edited By: |

Updated on: Feb 20, 2022 | 9:42 AM

Share

ಮಂಡ್ಯ: ಬಸಪ್ಪನ ಮತ್ತೊಂದು ಪವಾಡಕ್ಕೆ ಸಕ್ಕರೆನಾಡು ಮಂಡ್ಯ ಸಾಕ್ಷಿಯಾಗಿದೆ. 58 ವರ್ಷದಿಂದ ಇದ್ದ ದೇಗುಲದ ಗುಡ್ಡಪ್ಪ ನೇಮಕ ವಿವಾದಕ್ಕೆ ತೆರೆ ಬಿದ್ದಿದೆ. ದೇವಾಲಯದ ಮುಂಭಾಗದ ಕೊಳಕ್ಕೆ ತಳ್ಳಿ ಮೂರು ದೇವಾಲಯಗಳಿಗೆ ಮೂವರು ಪೂಜಾರಿಗಳ ನೇಮಕ ಮಾಡುವ ಮೂಲಕ ಬಸಪ್ಪನ ಪವಾಡಕ್ಕೆ ಮಂಡ್ಯ ಜನ ಅಚ್ಚರಿ ಪಟ್ಟಿದ್ದಾರೆ.

ಮಂಡ್ಯ ಜಿಲ್ಲೆ ದೊಡ್ಡಬಾಣಸವಾಡಿ ಗ್ರಾಮದಲ್ಲಿ ಮೂರು ದೇವಾಲಯಗಳಿಗೆ ಮೂವರು ಪೂಜಾರಿಗಳ ನೇಮಕ ಕಳೆದ 58 ವರ್ಷದಿಂದ ನಡೆದಿರಲಿಲ್ಲ. ಸದ್ಯ ಬಸಪ್ಪ 3 ದೇಗುಲಕ್ಕೆ ಮೂವರು ಪೂಜಾರಿಗಳನ್ನು ನೇಮಿಸುವ ಮೂಲಕ ಅಚ್ಚರಿ ಮೂಡಿಸಿದೆ. ಜನರ ಗುಂಪಿನಲ್ಲಿ ಕುಳಿತಿದ್ದ ಮೂವರನ್ನು ಗುರುತಿಸಿದ ಬಸಪ್ಪ, ಅವರನ್ನು ದೇವಾಲಯದ ಮುಂಭಾಗದ ಕೊಳಕ್ಕೆ ತಳ್ಳಿ ಅರ್ಚಕರ ಆಯ್ಕೆ ಮಾಡಿದೆ. ಚೌಡೇಶ್ವರಿ ದೇಗುಲಕ್ಕೆ ಪ್ರತಾಪ್, ಪಟ್ಟಲದಮ್ಮ ದೇಗುಲಕ್ಕೆ ಮಂಜು, ಮಾರ್ಗೋನಹಳ್ಳಿ ದೇಗುಲಕ್ಕೆ ಅರ್ಚಕರಾಗಿ ಶಿವಣ್ಣ ಆಯ್ಕೆ ಆಗಿದ್ದಾರೆ. 58 ವರ್ಷದಿಂದ ನಿಂತಿದ್ದ ಹಬ್ಬಕ್ಕೆ ಬಸಪ್ಪ ಮುನ್ನುಡಿ ಬರೆದಿದ್ದಾರೆ.

58 ವರ್ಷದ ಹಿಂದೆ ದೇವಾಲಯದ ಅರ್ಚಕರು ಮೃತಪಟ್ಟಿದ್ದರು. ಬಳಿಕ ಮತ್ತಿಬ್ಬರು ಪೂಜಾರಿಗಳನ್ನು ಗ್ರಾಮಸ್ಥರು ನೇಮಿಸಿದ್ರು. ಆದ್ರೆ ಅರ್ಚಕರ ಮೈಮೇಲೆ ದೇವರು ಬಂದಿಲ್ಲ ಎಂದು ಹಬ್ಬವನ್ನು ನಿಲ್ಲಿಸಲಾಗಿತ್ತು. ಸದ್ಯ ಪೂಜಾರಿಗಳ ಆಯ್ಕೆ ವಿವಾದದಿಂದ ನಿಂತಿದ್ದ ಹಬ್ಬ ಆಚರಣೆ ಈಗ ಮತ್ತೆ ಶುರುವಾಗಲಿದೆ.

mandya god bull 1

ದೇವಾಲಯದ ಕೊಳಕ್ಕೆ ತಳ್ಳಿ ಅರ್ಚಕರ ಆಯ್ಕೆ ಮಾಡಿದ ಬಸಪ್ಪ

ಇದನ್ನೂ ಓದಿ: Coconut Water: ಹೆಚ್ಚು ಎಳನೀರು ಕುಡಿಯುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿ!

ನಾಳೆಯಿಂದ ಪಿಯು ಪ್ರಾಯೋಗಿಕ ಪರೀಕ್ಷೆ ಆರಂಭ; ಹಿಜಾಬ್ ವಿವಾದದಿಂದ ಗೈರಾದರೆ ಮತ್ತೆ ಅವಕಾಶ ಇಲ್ಲ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?