AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Good News: ಇನ್ನೊಂದು ವಾರದಲ್ಲಿ ಮಂಡ್ಯ ಮೈಶುಗರ್ ಕಾರ್ಖಾನೆ ಆರಂಭ: ರೈತರಿಗೆ ಹರ್ಷ

ಸರ್ಕಾರಿ ಸ್ವಾಮ್ಯದ ರಾಜ್ಯದ ಏಕೈಕ ಸಕ್ಕರೆ ಕಾರ್ಖಾನೆ ಮೈಶುಗರ್​ ಆರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಆ.17 ಅಥವಾ 18ಕ್ಕೆ ಅಧಿಕೃತವಾಗಿ ಕಾರ್ಖಾನೆ ಪುನರಾರಂಭ ಸಾಧ್ಯತೆ ಎನ್ನಲಾಗುತ್ತಿದೆ.

Good News: ಇನ್ನೊಂದು ವಾರದಲ್ಲಿ ಮಂಡ್ಯ ಮೈಶುಗರ್ ಕಾರ್ಖಾನೆ ಆರಂಭ: ರೈತರಿಗೆ ಹರ್ಷ
ಮಂಡ್ಯದ ಮೈಶುಗರ್ ಕಾರ್ಖಾನೆ (ಸಂಗ್ರಹ ಚಿತ್ರ)
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Aug 11, 2022 | 12:34 PM

ಮಂಡ್ಯ: ಸರ್ಕಾರಿ ಸ್ವಾಮ್ಯದ ರಾಜ್ಯದ ಏಕೈಕ ಸಕ್ಕರೆ ಕಾರ್ಖಾನೆ ಮೈಶುಗರ್ (Mysugar factory) ಆರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಆ.17 ಅಥವಾ 18ಕ್ಕೆ ಅಧಿಕೃತವಾಗಿ ಕಾರ್ಖಾನೆ ಪುನರಾರಂಭ ಸಾಧ್ಯತೆ ಎನ್ನಲಾಗುತ್ತಿದ್ದು, ಸಿಎಂ ಅವರಿಂದಲೇ ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆಗೆ ಚಿಂತನೆ ನಡೆಸಲಾಗುತ್ತಿದೆ. 4 ವರ್ಷಗಳ ಬಳಿಕ ಕಾರ್ಖಾನೆಯಲ್ಲಿ ಯಂತ್ರಗಳ ಸದ್ದು ಮಾಡಲು ಸಿದ್ಧವಾಗಿವೆ. ಕಬ್ಬು ನುರಿಸುವ ಕಾರ್ಯಕ್ಕೆ ಮೈಶುಗರ್ ಕಾರ್ಖಾನೆ ಸಜ್ಜಾಗಿದ್ದು, ಇಂದು ಕಾರ್ಖಾನೆಯಲ್ಲಿ ಪೂಜೆ, ಹೋಮ-ಹವನ ನಡೆಯಲಿದೆ. ಜೊತೆಗೆ ಇಂದೇ ಬಾಯ್ಲರ್​ಗೆ ಅಗ್ನಿ ಸ್ಪರ್ಶ ನಡೆಯಲಿದೆ. ಯಂತ್ರೋಪಕರಣಗಳು ಕೆಟ್ಟು ಹೋಗಿದ್ದ ಹಿನ್ನೆಲೆ 4 ವರ್ಷಗಳಿಂದ ಮೈಶುಗರ್ ಕಾರ್ಖಾನೆ ಮುಚ್ಚಿತ್ತು. ಮೈಶುಗರ್ ಕಾರ್ಖಾನೆ ಪುನರಾರಂಭಕ್ಕೆ ಸಾಕಷ್ಟು ಹೋರಾಟಗಳು ನಡೆದಿದ್ದು, ಹೋರಾಟಕ್ಕೆ ಮಣಿದು ಕಾರ್ಖಾನೆ ಪುನರಾರಂಭಕ್ಕೆ ಸರ್ಕಾರ ಭರವಸೆ ನೀಡಿತ್ತು. ಸರ್ಕಾರದ ಭರವಸೆಯಂತೆ ಪುನರಾರಂಭಕ್ಕೆ ಮೈಶುಗರ್ ಸಜ್ಜಾಗಿದ್ದು, ಮಂಡ್ಯ ಜನರಲ್ಲಿ ಸಂತಸ ಮನೆ ಮಾಡಿದೆ.

ಇದನ್ನೂ ಓದಿ: ಅರಣ್ಯಾಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಆರೋಪ: ಶಾಸಕ ಸುರೇಶಗೌಡ ಸೇರಿದಂತೆ 10 ಜನರ ವಿರುದ್ಧ FIR ದಾಖಲು

ಇಂದು ಆಗುತ್ತಿರುವ ಖುಷಿ ನನಗೆ ಯಾವತ್ತೂ ಆಗಿಲ್ಲ: ಸಂಸದೆ ಸುಮಲತಾ ಅಂಬರೀಶ್ 

ಮೈಶುಗರ್ ಕಾರ್ಖಾನೆಯಲ್ಲಿನ ಪೂಜೆ ಬಳಿಕ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್ ನಾನು ಸಂಸದೆಯಾಗಿ 3 ವರ್ಷಗಳು ಕಳೆದಿವೆ. ಇಂದು ಆಗುತ್ತಿರುವ ಸಂತೋಷ ಯಾವತ್ತೂ ಆಗಿಲ್ಲ. ನನ್ನ ಚುನಾವಣೆಯ ವೇಳೆಯಲ್ಲಿ ಮಂಡ್ಯದ ರೈತರಿಗೆ ಮೈಶುಗರ್ ಚಾಲನೆ ಮಾಡೇ ಮಾಡಿಸುತ್ತೇನೆಂದು ವಾಗ್ದಾನ ಕೊಟ್ಟಿದ್ದೆ. ನನಗೆ ಸರ್ಕಾರದಿಂದ ಸಾಕಷ್ಟು ಸಹಕಾರ ಸಿಕ್ಕಿದೆ. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಗೋಪಾಲಯ್ಯ ಅವರ ಸಹಕಾರ ಸಿಕ್ಕಿದೆ. ಒಬ್ಬರ ಹೋರಾಟದ ಫಲದಿಂದ ಇದು ಆಗಿಲ್ಲ. ಸಾಕಷ್ಟು ಜನರ ಫಲದಿಂದ ಪ್ರಾರಂಭವಾಗುತ್ತಿದೆ. ಅಂಬರೀಶ್ ಅವರ ಕನಸು ಇದಾಗಿತ್ತು.

ಎಷ್ಟೋ ವರ್ಷಗಳ ಹೋರಾಟದ ಫಲವಿದು‌. ಮಂಡ್ಯ ಜಿಲ್ಲೆಯ ರೈತರಿಗೆ ಐತಿಹಾಸಿಕ ಹಾಗೂ ಸಂಭ್ರಮದ ದಿನ ಇದು. ಕೊರೋನಾ, ಪ್ರವಾಹದ ನಂತರ ಸಂಭ್ರಮಿಸಲು ಇದು ಅವಕಾಶ. ಮೈಶುಗರ್ ಆರಂಭಕ್ಕೆ ಸಹಕಾರ ಕೊಟ್ಟಿರುವ ಎಲ್ಲರಿಗೂ ನನ್ನ ಧನ್ಯವಾದಗಳು ಎಂದು ಹೇಳಿದರು.

ಬಾಯ್ಲರ್​ಗೆ ಅಗ್ನಿ ಸ್ಪರ್ಶ ಮಾಡಿದ ಮಂತ್ರಿ ಮಹೋದಯರು

ಐತಿಹಾಸಿಕ ಘಟನೆಗೆ ಮಂಡ್ಯ ಜಿಲ್ಲೆ ಸಾಕ್ಷಿಯಾಗಿದ್ದು, ಮೈ ಶುಗರ್ ಕಾರ್ಖಾನೆಯ ಬಾಯ್ಲರ್​ಗೆ ಉಸ್ತುವಾರಿ ಸಚಿವ ಗೋಪಾಲಯ್ಯ, ಕ್ರೀಡಾ ಸಚಿವ ನಾರಾಯಣಗೌಡ, ಸಂಸದೆ ಸುಮಲತಾ ಅಂಬರೀಪ್​ರಿಂದ ಅಗ್ನಿ ಸ್ಪರ್ಶ ಮಾಡಲಾಯಿತು. ರಾಜ್ಯದ ಏಕೈಕ ಸರ್ಕಾರಿ ಸ್ವಾಮ್ಯದ ಮಂಡ್ಯದ ಮೈ ಶುಗರ್ ಕಾರ್ಖಾನೆ ನಾಲ್ಕು ವರ್ಷಗಳಿಂದ ಬಂದ್ ಆಗಿತ್ತು. ಇಂದು ಬಾಯ್ಲರ್ ಗೆ ಮಂತ್ರಿ ಮಹೋದಯರು ಅಗ್ನಿ ಸ್ಪರ್ಶ ಮಾಡಿದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 12:32 pm, Thu, 11 August 22

ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು