AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯ ಲೋಪ, ದುರ್ನಡತೆ ಆರೋಪದಡಿ ಮಂಡ್ಯ ತಹಶೀಲ್ದಾರ್ ಅಮಾನತು; ಸಿಹಿ ಹಂಚಿ ಸಂಭ್ರಮಿಸಿದ ಗ್ರಾಮಸ್ಥರು

ತಹಶೀಲ್ದಾರ್ ಅಮಾನತು ಆಗಿದ್ದಕ್ಕೆ ಮಂಡ್ಯ ಡಿಸಿ ಅಶ್ವಥಿಗೆ ಗ್ರಾಮಸ್ಥರು ಜೈಕಾರ ಕೂಗಿದ್ದಾರೆ. ಗ್ರಾಮಸ್ಥರು ಸ್ವಂತ ಮನೆಗಾಗಿ ಹಲವು ಭಾರಿ ಹೋರಾಟ ನಡೆಸಿದ್ದರು. ಈ ವೇಳೆ ನಿವೇಶನ ಹಂಚಿಕೆ ವಿಚಾರದಲ್ಲಿ ತಹಶೀಲ್ದಾರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಕರ್ತವ್ಯ ಲೋಪ, ದುರ್ನಡತೆ ಆರೋಪದಡಿ ಮಂಡ್ಯ ತಹಶೀಲ್ದಾರ್ ಅಮಾನತು; ಸಿಹಿ ಹಂಚಿ ಸಂಭ್ರಮಿಸಿದ ಗ್ರಾಮಸ್ಥರು
ಕರ್ತವ್ಯ ಲೋಪ, ದುರ್ನಡತೆ ಆರೋಪದಡಿ ಮಂಡ್ಯ ತಹಶೀಲ್ದಾರ್ ಅಮಾನತು; ಸಿಹಿ ಹಂಚಿ ಸಂಭ್ರಮಿಸಿದ ಗ್ರಾಮಸ್ಥರು
TV9 Web
| Edited By: |

Updated on: Mar 27, 2022 | 2:40 PM

Share

ಮಂಡ್ಯ: ತಹಶೀಲ್ದಾರ್(Tahsildar) ಅಮಾನತುಗೊಂಡಿದ್ದಕ್ಕೆ ಹಳೆ ಬೂದನೂರು ಗ್ರಾಮದಲ್ಲಿ ಗ್ರಾಮಸ್ಥರು ಸಿಹಿ ಹಂಚಿ ಸಂಭ್ರಮಿಸಿದ ಘಟನೆ ನಡೆದಿದೆ. ಕರ್ತವ್ಯ ಲೋಪ ಮತ್ತು ದುರ್ನಡತೆ ಆರೋಪದಡಿ ಮಂಡ್ಯ ತಹಶೀಲ್ದಾರ್ ಚಂದ್ರಶೇಖರ ಶಂಗಾಳಿ ಅವರನ್ನು ಕಂದಾಯ ಇಲಾಖೆ ಕಾರ್ಯದರ್ಶಿ ರಶ್ಮಿ ಅಮಾನತುಗೊಳಿಸಿದ್ದಾರೆ. ಹೀಗಾಗಿ ಬೂದನೂರು ಗ್ರಾಮಸ್ಥರು ಜನರಿಗೆಲ್ಲಾ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ತಹಶೀಲ್ದಾರ್ ಅಮಾನತು ಆಗಿದ್ದಕ್ಕೆ ಮಂಡ್ಯ ಡಿಸಿ ಅಶ್ವಥಿಗೆ ಗ್ರಾಮಸ್ಥರು ಜೈಕಾರ ಕೂಗಿದ್ದಾರೆ. ಗ್ರಾಮಸ್ಥರು ಸ್ವಂತ ಮನೆಗಾಗಿ ಹಲವು ಭಾರಿ ಹೋರಾಟ ನಡೆಸಿದ್ದರು. ಈ ವೇಳೆ ನಿವೇಶನ ಹಂಚಿಕೆ ವಿಚಾರದಲ್ಲಿ ತಹಶೀಲ್ದಾರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನ್ಯಾಯಕ್ಕಾಗಿ ಹೋರಾಟ ನಡೆಸಿದ್ದ ಗ್ರಾಮಸ್ಥರಿಗೆ ನ್ಯಾಯ ಕೊಡಿಸುವಲ್ಲಿ ತಹಶೀಲ್ದಾರ್ ಚಂದ್ರಶೇಖರ್ ಶಂಗಾಳಿ ವಿಫಲರಾಗಿದ್ದರು. ಗ್ರಾಮಸ್ಥರು ಹಲವು ಬಾರಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿದ್ದರು. ಆದ್ರೆ ಯಾವುದೇ ಪ್ರಯೋಜನವಾಗಿರಲಿಲ್ಲ. ಹೀಗಾಗಿ ಈ ಸಂಬಂಧ ಗ್ರಾಮಸ್ಥರು ತಹಶೀಲ್ದಾರ್ ವಿರುದ್ಧ ಮಂಡ್ಯ ಡಿಸಿಗೆ ದೂರು ನೀಡಿದ್ದರು. ಸದ್ಯ 13 ಕಾರಣ ನೀಡಿ ತಹಶೀಲ್ದಾರ್ನನ್ನು ಅಮಾನತುಗೊಳಿಸಲಾಗಿದೆ. ಹಳೆ ಬೂದನೂರು ಗ್ರಾಮಸ್ಥರು ಮಂಡ್ಯ ಡಿಸಿಗೆ ಅಭಿನಂದಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಇದನ್ನೂ ಓದಿ: ಗಣೇಶ್​ ಪುತ್ರಿ ಚಾರಿತ್ರ್ಯ ಬರ್ತ್​ಡೇ ಪಾರ್ಟಿ ಫೋಟೋಗಳು; ಮುದ್ದು ಮಗಳಿಗೆ ‘ಗೋಲ್ಡನ್​ ಸ್ಟಾರ್​’ ವಿಶ್​

ಕೆ.ಎಸ್​​.ಆರ್​.ಟಿ.ಸಿ ಬಸ್ ಹಾಗೂ ಬೈಕ್​ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್ ಸವಾರರು

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್