AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮ ಧ್ವಜ ವಿವಾದ ಪ್ರಕರಣ; ಶಾಸಕ ರವಿಕುಮಾರ್​ ಗಣಿಗ ಪರ ನಿಂತ ಬೇರೆ ಗ್ರಾಮದ ಜನರು

ಕೆರಗೋಡಿನಲ್ಲಿ ಹನುಮ ಧ್ವಜ (Keragodu Hanuman Flag) ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಒಂದೆಡೆ ಮಂಡ್ಯದ ಕಾಂಗ್ರೆಸ್‌ ಶಾಸಕ ರವಿಕುಮಾರ ಗಣಿಗ (Ravikumar Ganiga) ಅವರ ಫ್ಲೆಕ್ಸ್, ಬ್ಯಾನರ್ ಕಿತ್ತೆಸೆದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಮತ್ತೊಂದೆಡೆ ಶಾಸಕರಿಗೆ ಜೈ ಭಾರತ್ ಎಂದು ಘೋಷಣೆ ಕೂಗಿ ತ್ರಿವರ್ಣ ಧ್ವಜ ನೀಡಿ ಸ್ವಾಗತಿಸಿದ್ದಾರೆ.

ಹನುಮ ಧ್ವಜ ವಿವಾದ ಪ್ರಕರಣ; ಶಾಸಕ ರವಿಕುಮಾರ್​ ಗಣಿಗ ಪರ ನಿಂತ ಬೇರೆ ಗ್ರಾಮದ ಜನರು
ಶಾಸಕ ರವಿಕುಮಾರ್​ ಗಣಿಗ
TV9 Web
| Edited By: |

Updated on: Jan 29, 2024 | 8:00 PM

Share

ಮಂಡ್ಯ, ಜ.29: ತಾಲೂಕಿನ ಕೆರಗೋಡಿನಲ್ಲಿ ಹನುಮ ಧ್ವಜ (Keragodu Hanuman Flag) ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಒಂದೆಡೆ ಮಂಡ್ಯದ ಕಾಂಗ್ರೆಸ್‌ ಶಾಸಕ ರವಿಕುಮಾರ ಗಣಿಗ (Ravikumar Ganiga) ಅವರ ಫ್ಲೆಕ್ಸ್, ಬ್ಯಾನರ್ ಕಿತ್ತೆಸೆದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಮತ್ತೊಂದೆಡೆ ರವಿಕುಮಾರ್ ಹಳ್ಳಿಗಳಿಗೆ ತೆರಳಿದ್ದ ವೇಳೆ​ ಬೇರೆ ಬೇರೆ ಗ್ರಾಮದ ಜನರು ಜೈ ಭೀಮ್, ಜೈ ಭಾರತ್ ಎಂದು ಘೋಷಣೆ ಕೂಗಿ ತ್ರಿವರ್ಣ ಧ್ವಜ ನೀಡಿ ಸ್ವಾಗತಿಸಿದ್ದಾರೆ.

ಈ ವೇಳೆ ರಾಷ್ಟ್ರ ಧ್ವಜ ನೀಡಿ ಮಾತನಾಡಿದ ವ್ಯಕ್ತಿಯೋರ್ವ ‘ನಮ್ಮ ದೇಶದ ಬಗ್ಗೆ ಶಾಸಕ ರವಿಕುಮಾರ್ ಗಣಿಗ ಅಭಿಮಾನ ಇಟ್ಟಿದ್ದಾರೆ. ಕ್ಷೇತ್ರವನ್ನು ಅಭಿವೃದ್ಧಿ ಮಾಡ್ತಿದ್ದಾರೆ. ಜೊತೆಗೆ ಕ್ಷೇತ್ರವನ್ನ‌ ಉನ್ನತಮಟ್ಟಕ್ಕೆ ತೆಗೆದುಕೊಂಡು ಹೋಗುತ್ತಾರೆ ಎಂದು ಹೊಗಳಿದ್ದಾರೆ.

ಇದನ್ನೂ ಓದಿ:Hanuman Flag: ಕಾಂಗ್ರೆಸ್‌ ಶಾಸಕ ರವಿ ಗಣಿಗ ಫ್ಲೆಕ್ಸ್‌ ಹರಿದು ಛಿದ್ರಗೊಳಿಸಿದ ಜೆಡಿಎಸ್, ಬಿಜೆಪಿ ಕಾರ್ಯಕರ್ತರು, ಲಾಠಿ ಚಾರ್ಜ್

ಇನ್ನು ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ‘ಒಂದು ಊರಿಗೆ ಬೆಂಕಿ ಹಚ್ಚಲೇಬೇಕು ಎಂದು ಡಿಸೈಡ್ ಮಾಡಿದಾಗ ಏನೇನು ಆಗಬೇಕೋ ಅದು ಆಗಿದೆ. ಭಾರತದಲ್ಲಿ ರಾಷ್ಟ್ರಧ್ವಜ ಹಾರಿಸಿದ್ರೂ ಈ ರೀತಿಯ ವಿರೋಧ ಆಗುತ್ತೆ ಅಂದ್ರೆ ಏನು?, ನಾನು ಕೆರಗೋಡು ಗ್ರಾಮದ ಬಸ್ ಸ್ಯ್ಟಾಂಡ್ ಜಾಗ ನೋಡಲು ಹೋದಾಗ ಆ ಸ್ಥಳ ನೋಡಿದ್ದೆ. ಹನುಮ ದೇವಾಲಯದ ಎದುರು ಆ ಧ್ವಜಸ್ಥಂಬ ಇದೆ. ಇಲ್ಲಿ ಬಸ್ ನಿಲ್ದಾಣ ಆಗುತ್ತದೆ. ಆ ಜಾಗದಲ್ಲಿ ನಾನು ಸ್ತಂಭ ಬೇಡ ಅಂತ ಹೇಳಿದ್ದೆ. ಇದಾದ ಬಳಿಕವೂ ಗೌರಿಶಂಕರ ಟ್ರಸ್ಟ್ ನವರು ಧ್ವಜಸ್ಥಂಬ ನಿರ್ಮಾಣಕ್ಕೆ ಅರ್ಜಿ ಕೊಟ್ಟರು.

16ನೇ ತಾರೀಖು ರಾಷ್ಟ್ರಧ್ವಜ ಹಾಗೂ ಕನ್ನಡ ಧ್ವಜಕ್ಕೆ ಅನುಮತಿ ತಗೆದುಕೊಂಡಿದ್ದಾರೆ. 20ನೇ ತಾರೀಖು ಇವರು ಮತ್ತೊಂದು ಕಾರ್ಡ್ ಪ್ಲೇ ಮಾಡಿ, ಹನುಮಧ್ವಜ ಹಾಕಿಕೊಳ್ಳುತ್ತೇವೆ ಎಂದು ಕೇಳಿ 23ನೇ ತಾರೀಖು ಇಳಿಸೋದಾಗಿ ಅನುಮತಿ ಪಡೆದರು. ಆದರೆ, ಅದನ್ನ ಇಳಿಸದೇ ಉದ್ದಟತನ ಮಾಡಿದ್ದಾರೆ. ಆ ಜಾಗದಲ್ಲಿ ಡಿಎಸ್ಎಸ್ ನವರು ಬಂದು ಅಲ್ಲಿ ಅಂಬೇಡ್ಕರ್ ಬಾವುಟ ಹಾಕುತ್ತೇವೆ ಎಂದರು. ಅದಾದ ಬಳಿಕ ಒಕ್ಕಲಿಗರು ಬಂದು ಕೆಂಪೇಗೌಡರ ಬಾವುಟ, ಕುರುಬ ಸಂಘಟನೆ ಅವ್ರು ಬಂದು ರಾಯಣ್ಣನ ಬಾವುಟ ಹಾಕ್ತೀವಿ ಅಂದರು, ಹಾಗಾಗಿ ಎಲ್ಲರಿಗೂ ಅವಕಾಶ ಕೊಡಲು ಆಗುತ್ತಾ?, ಇದಕ್ಕೆ ಸ್ಥಳೀಯ ಆಡಳಿತ ತಡೆಯೊಡ್ಡಿ ಹನುಮಾನ್ ಧ್ವಜ ತೆರವು ಮಾಡಿದ್ದಾರೆ. ಆದ್ರೆ, ಕೆಲವರು ಕ್ರಿಮಿನಲ್ ಮೈಂಡ್ ನವರು ಇದನ್ನ ರಾಜಕೀಯಕ್ಕೆ ಬಳಸಿಕೊಂಡರು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ