AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಣ್ಯ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ನಾಗಮಂಗಲ ಶಾಸಕ ಸುರೇಶ್ ಗೌಡ ವಿರುದ್ಧ ಆರೋಪ

ನಿರಂತರ ಮಳೆಯಿಂದಾಗಿ ಕಾವೇರಿ ನದಿ‌ ಉಕ್ಕಿ ಹರಿಯುತ್ತಿದ್ದು, ಶ್ರೀರಂಗಪಟ್ಟಣದ ಹಲವು ಕಡೆ ಪ್ರವಾಹ ಭೀತಿ ಎದುರಾಗಿದೆ. ಸಂಗಮದ ಸ್ನಾನಘಟ ಮುಳುಗಡೆಯಾಗಿದ್ದು, ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

ಅರಣ್ಯ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ನಾಗಮಂಗಲ ಶಾಸಕ ಸುರೇಶ್ ಗೌಡ ವಿರುದ್ಧ ಆರೋಪ
ನಾಗಮಂಗಲ ಶಾಸಕ ಸುರೇಶ್ ಗೌಡ ವಿರುದ್ಧ ನಿಂದನೆ ಆರೋಪ
TV9 Web
| Edited By: |

Updated on: Aug 05, 2022 | 12:53 PM

Share

ಮಂಡ್ಯ: ಅರಣ್ಯ ಸಿಬ್ಬಂದಿಗಳನ್ನು ಅವಾಚ್ಯ ಶಬ್ದಗಳಿಂದ ಶಾಸಕ ನಿಂದಿಸಿರುವಂತಹ ಘಟನೆ ನಾಗಮಂಗಲ ತಾಲೂಕಿನ ಹಾಲತಿ ಗ್ರಾಮದಲ್ಲಿ ನಡೆದಿದೆ. ನಾಗಮಂಗಲ ಶಾಸಕ ಸುರೇಶ್ ಗೌಡ (MLA Suresh Gowda) ಅಧಿಕಾರಿಗಳ ವಿರುದ್ಧ ಅಸಭ್ಯ ಪದ ಬಳಕೆ ಮಾಡಲಾಗಿದೆ ಎನ್ನಲಾಗುತ್ತಿದೆ. ಜಮೀನು ವಿಚಾರವಾಗಿ ಅರಣ್ಯ ಇಲಾಖೆ ಹಾಗೂ ರೈತರ ನಡುವೆ ಘರ್ಷಣೆ ಉಂಟಾಗಿದೆ. ಸರ್ವೆ ನಂ 135ರಲ್ಲಿ ಅರಣ್ಯ ಇಲಾಖೆ ನೆಡು ತೋಪು ಬೆಳೆಸಿದೆ. ಅದೇ ಜಮೀನಿಗಾಗಿ ರೈತರು ಬಗರ್ ಹುಕುಂ ಸಾಗುವಳಿ ಅರ್ಜಿ ಸಲ್ಲಿಸಿದ್ದರು. ಜಮೀನು ವಶಪಡಿಸಿಕೊಳ್ಳಲು ಬಂದ ಅಧಿಕಾರಿಗಳ ವಿರುದ್ಧ ರೈತರ ಅಸಮಾಧಾನಗೊಂಡಿದ್ದು, ಗಾಳಿಯಲ್ಲಿ ಗುಂಡು ಹಾರಿಸಿ ರೈತರನ್ನು ಅಧಿಕಾರಿಗಳು ಬೆದರಿಸಿದ್ದಾರೆ. ಅಧಿಕಾರಿಗಳ ವರ್ತನೆಗೆ ಶಾಸಕ ಸುರೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದ್ದು, ಅವಾಚ್ಯ ಶಬ್ದಗಳಿಂದ ಬೈದು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ; Prostate Cancer: ಪುರುಷರಲ್ಲಿ ಈ ರೋಗ ಲಕ್ಷಣಗಳು ಪ್ರಾಸ್ಟೇಟ್ ಕ್ಯಾನ್ಸರ್ ಸಂಕೇತವಾಗಿರಬಹುದು, ಇರಲಿ ಎಚ್ಚರ

ಸಂಗಮ ಕ್ಷೇತ್ರಕ್ಕೆ ಪ್ರವಾಸಿಗರಿಗೆ ನಿರ್ಬಂಧ

ನಿರಂತರ ಮಳೆಯಿಂದಾಗಿ ಕಾವೇರಿ ನದಿ‌ ಉಕ್ಕಿ ಹರಿಯುತ್ತಿದ್ದು, ಶ್ರೀರಂಗಪಟ್ಟಣದ ಹಲವು ಕಡೆ ಪ್ರವಾಹ ಭೀತಿ ಎದುರಾಗಿದೆ. ಸಂಗಮದ ಸ್ನಾನಘಟ ಮುಳುಗಡೆಯಾಗಿದ್ದು, ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಕಳೆದ 15 ದಿನಗಳ ಹಿಂದೆ ನೀರಿನಲ್ಲಿ ಯುವಕ ಕೊಚ್ಚಿ ಹೋಗಿದ್ದ. ಈ ಕಾರಣದಿಂದ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಸಂಗಮ ಸ್ಥಳಕ್ಕೆ ಬಾರದಂತೆ ಬ್ಯಾರಿಕೇಡ್ ಹಾಕಲಾಗಿದೆ. ಸಂಗಮದಲ್ಲಿ ಪ್ರತಿ ನೂರಾರು ಜನರು ಬಂದು ಅಸ್ಥಿ ವಿಸರ್ಜನೆ ಮಾಡುತ್ತಿದ್ರು. ಈ‌ ಕಾರಣದಿಂದ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ. ಆದರೂ ಪ್ರವಾಹದ ನಡುವೆಯು ನದಿ ಬಳಿ ಬಂದು ಅಸ್ಥಿ ವಿಸರ್ಜನೆಗೆ ಜ‌ನರು‌ ಮುಂದಾಗಿದ್ದಾರೆ.

ಧುಮ್ಮಿಕ್ಕುತ್ತಿದೆ ಬೆಂಕಿ ಫಾಲ್ಸ್!

ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಹಿನ್ನೆಲೆ ಗಾಣಾಳು ಫಾಲ್ಸ್​​ನಲ್ಲಿ ಜಲ ವೈಭವ ಕಂಡುಬಂತು. ನದಿಯಲ್ಲಿ ನೀರು ಹೆಚ್ಚಾಗಿರೋದ್ರಿಂದ ಗಾಣಾಳು ಫಾಲ್ಸ್ ಕಳೆಗಟ್ಟಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಗಾಣಾಳು ಫಾಲ್ಸ್. ಶಿಂಷಾ ನದಿಯಲ್ಲಿ ನೀರು ಹೆಚ್ಚಾದ್ರೆ ಮಾತ್ರ ಗಾಣಾಳು ಫಾಲ್ಸ್ ಕಳೆಗಟ್ಟುತ್ತದೆ. ಈ ಗಾಣಾಳು ಫಾಲ್ಸ್ ಬೆಂಕಿ ಫಾಲ್ಸ್ ಎಂದೇ ಪ್ರಸಿದ್ದಿಯಾಗಿದೆ. ಮಣ್ಣು ಮಿಶ್ರಿತ ನೀರು ಬರೋದ್ರಿಂದ ಬೆಂಕಿ ಫಾಲ್ಸ್ ಎಂದು ಫೇಮಸ್ ಆಗಿದೆ. ಭೋರ್ಗರೆಯುತ್ತ ಹಾಲ್ನೋರೆಯಂತೆ ಧುಮ್ಮಿಕ್ಕಿರುವ ಬೆಂಕಿ ಫಾಲ್ಸ್​​ ಸೌಂದರ್ಯ ಸವಿಯಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಇನ್ನೂ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ಶ್ರೀರಂಗಪಟ್ಟಣದ ಧಾರ್ಮಿಕ ಸ್ಥಳವಾಗಿರುವ ಗೋಸಾಯಿ ಘಾಟ್​ ಮುಳುಗಡೆ ಹಂತ ತಲುಪಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್