ಹೆಚ್​ಡಿಕೆ ಅಪರೇಷನ್ ಬಗ್ಗೆ ಅನುಮಾನ; ತಂದೆ ವಿಚಾರ ಮಾತನಾಡುವಾಗ ನಿಖಿಲ್ ಕುಮಾರಸ್ವಾಮಿ ಭಾವುಕ

ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಹೆಚ್​ಡಿ ಕುಮಾರಸ್ವಾಮಿ ಅವರ ಅಪರೇಷನ್​ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು ಈ ಬಗ್ಗೆ ಪ್ರತಿಕ್ರಿಯೆ ನೀಡುವಾಗ ನಿಖಿಲ್ ಕುಮಾರಸ್ವಾಮಿ ಭಾವುಕರಾಗಿದ್ದಾರೆ. ಬೇರೆಯವರು ಈ ಬಗ್ಗೆ ಮಾತಾಡುವ ಅವಶ್ಯಕತೆ ಇಲ್ಲ ಎಂದು ಹೆಚ್​ಡಿಕೆ ಆಪರೇಷನ್​​ ವಿಚಾರ ಮಾತಾಡುವಾಗ ನಿಖಿಲ್ ಭಾವುಕರಾಗಿದ್ದಾರೆ.

Follow us
| Updated By: ಆಯೇಷಾ ಬಾನು

Updated on:Mar 30, 2024 | 2:07 PM

ಮಂಡ್ಯ, ಮಾರ್ಚ್​.30: ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಚುನಾವಣೆ ಬಂದ್ರೆ ಸಾಕು ಆಸ್ಪತ್ರೆಗೆ ಸೇರ್ತಾರೆ ಎಂಬ ಶಾಸಕ ರಮೇಶ್ ಬಂಡಿಸಿದ್ದೇಗೌಡ (Ramesh Bandisiddegowda) ಅನುಮಾನಕ್ಕೆ ನಿಖಿಲ್ ಕುಮಾರಸ್ವಾಮಿ ಭಾವುಕರಾಗಿದ್ದಾರೆ. ಬೇರೆಯವರು ಈ ಬಗ್ಗೆ ಮಾತಾಡುವ ಅವಶ್ಯಕತೆ ಇಲ್ಲ ಎಂದು ಹೆಚ್​ಡಿಕೆ ಆಪರೇಷನ್​​ ವಿಚಾರ ಮಾತಾಡುವಾಗ ನಿಖಿಲ್ (Nikhil Kumaraswamy) ಭಾವುಕರಾಗಿದ್ದಾರೆ.ತಂದೆಯ ವಿಚಾರದ ಬಗ್ಗೆ ಮಾತನಾಡುವಾಗ ಸಹಜ ಅಲ್ಲವೇ. ತಂದೆ-ಮಗನ ಸಂಬಂಧ ಅಂದ್ರೆ ಭಾವನೆಗಳು ಎಂದು ಮಂಡ್ಯದಲ್ಲಿ JDS ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಂದೆ ಬಗ್ಗೆ ಮಾತನಾಡುತ್ತ ಭಾವುಕರಾದರು.

ಮಂಡ್ಯದಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಮೊದಲ ಹಂತದ ಸಭೆಯನ್ನು ಇಂದು ನಾಗಮಂಗಲದಲ್ಲಿ ಮಾಡ್ತಾ ಇದ್ದೀವಿ. ಪ್ರತಾಪ್ ಸಿಂಹ ಸಹ ನಮ್ಮ ಜೊತೆ ಇರ್ತಾರೆ. ಮೂರು‌ ತಿಂಗಳಿಂದ ಹಲವು ಸಭೆಗಳು ನಡೆದಿವೆ. ಅನಿರೀಕ್ಷಿತ ಬೆಳವಣಿಗೆಯಲ್ಲಿ ಕುಮಾರಣ್ಣ ಮಂಡ್ಯ ಅಭ್ಯರ್ಥಿ ಆಗಿದ್ದಾರೆ. ಕಾರ್ಯಕರ್ತರ ಒತ್ತಾಸೆಗೆ ಸೋತು ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿಯಾಗಿ ಕುಮಾರಣ್ಣ ಸ್ಪರ್ಧೆ ಮಾಡ್ತಾ ಇದ್ದಾರೆ. ರಮೇಶ್ ಬಂಡಿಸಿದ್ದೇಗೌಡ ಅವರ ಹಿರಿತನಕ್ಕೆ ಈ ಮಾತು ಕ್ಷೋಭೆ ತರಲ್ಲ. ನಮ್ಮ ತಂದೆಯವರಿಗೆ ಆಗಿರುವ ಆಪರೇಷನ್ನು ಇವರಿಗೆ ಪ್ರೂ ಮಾಡುವ ಅಗತ್ಯವಿಲ್ಲ. ಆಪರೇಷನ್ ಆಗಿದೆ ಎಂಬ ಅನುಕಂಪದಲ್ಲಿ ಮತ ಕೇಳುವ ಪ್ರಮೇಯ ನಮಗೆ ಇಲ್ಲ. ನಮ್ಮ ತಂದೆಗೆ ಆಪರೇಷನ್ ಆಗಿರೋದು ನಿಜ. ಮೂರನೇ ಬಾರಿಗೆ ಅವರಿಗೆ ಹೃದಯದ ಶಸ್ತ್ರ ಚಿಕಿತ್ಸೆ ಆಗಿದೆ. ಇದನ್ನು ಸಾಬೀತು ಮಾಡುವ ಅವಶ್ಯಕತೆ ನಮಗೆ ಇಲ್ಲ ಎಂದು ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಚುನಾವಣೆ ಬಂದ್ರೆ ಸಾಕು ಕುಮಾರಸ್ವಾಮಿ ಹಾರ್ಟ್​​ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗುತ್ತಾರೆ: ವ್ಯಂಗ್ಯವಾಡಿದ ಕಾಂಗ್ರೆಸ್​ ಶಾಸಕ

6 ವರ್ಷದಲ್ಲಿ ಮೂರನೇ ಬಾರಿ ಹೃದಯದ ಆಪರೇಷನ್ ಆಗಿರೋದು ನಮಗೆ ನೋವು ಆಗಿದೆ. ನಮ್ಮ ಕುಟುಂಬ ಮೊಸಳೆ ಕಣ್ಣೀರು ಹಾಕಿಲ್ಲ. ಕುಮಾರಣ್ಣ ಭಾವನಾತ್ಮಕ ಜೀವಿ. ಜನರಿಗೆ ಕಷ್ಟಗಳಾದಾಗ ಕುಮಾಣ್ಣನಿಗೆ ಕಣ್ಣೀರು ಬರುತ್ತೆ. ಕುಮಾರಣ್ಣನ ಸ್ಪರ್ಧೆಯನ್ನು ಕಾಂಗ್ರೆಸ್ ಅವರಿಂದ ಸಹಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕಾಗಿ ಹೀಗೆ ಕಾಂಗ್ರೆಸ್ ನಾಯಕರು ಮಾತಾಡುತ್ತಾರೆ. ಜಿಲ್ಲೆಯ ಹಾಗೂ ರಾಜ್ಯದ ಜನರು ನೋಡುತ್ತಾ ಇದ್ದಾರೆ. ಮತದಾರ ತಂದೆ ತಾಯಿಗಳ ಕೈಯಲ್ಲಿ ಇದಕ್ಕೆ ಉತ್ತರ ನೀಡುವ ಶಕ್ತಿ ಇದೆ. ನಾವು ಮೊದಲಿಗೆ ಭಾರತೀಯರು, ಕನ್ನಡಿಗರು. ಕುಮಾರಣ್ಣ ಎಲ್ಲಿ ಹೋಗಿಬೇಕಾದ್ರು ಸ್ಪರ್ಧೆ ಮಾಡಿವಂತೆ ಈ ರಾಜ್ಯದ ಜನರು ಶಕ್ತಿ ಕೊಟ್ಟಿದ್ದಾರೆ. ಜನರು ಕುಮಾರಣ್ಣನ ಸ್ಪರ್ಧೆ ನಿರ್ಧಾರ ಮಾಡ್ತಾರೆ. ಬೇರೆ ಯಾರು ಅವರ ಸ್ಪರ್ಧೆ ನಿರ್ಣಯ ಮಾಡಲ್ಲ. ಜನರ ಆಶಯದಂತೆ ಕುಮಾರಣ್ಣ ಮಂಡ್ಯದಲ್ಲಿ ಸ್ಪರ್ಧೆ ಮಾಡ್ತಿದ್ದಾರೆ. ನಾವು ಬಿಜೆಪಿ ಅವರನ್ನು ಹೊಂದಾಣಿಕೆ ಮಾಡಿಕೊಂಡಿದ್ದೇವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿದ್ದೇವೆ. ಸುಮಲತಾ ಅವರನ್ನು ನಾವು ಬೆಂಬಲ ಕೇಳ್ತೀವಿ ಅವರನ್ನು ಹೋಗಿ ಮಾತಾಡಿಸುತ್ತೇವೆ ಎಂದರು.

ರಾಜ್ಯದ ಪಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:33 pm, Sat, 30 March 24

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು