AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ.ಕೆ.ಹಳ್ಳಿ ಯಂತ್ರಾಗಾರ ಜಲಾವೃತ: ಬೆಂಗಳೂರು ನಗರಕ್ಕೆ ಕಾವೇರಿ ನೀರು ಸರಬರಾಜಿಗೆ ತೊಂದರೆ

ಯಂತ್ರಾಗಾರಕ್ಕೆ ಹಾನಿಯಾದ ವಿಚಾರ ತಿಳಿದ ತಕ್ಷಣ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುರ್ತು ಪ್ರವಾಸ ಕೈಗೊಂಡಿದ್ದು, ಟಿ.ಕೆ.ಹಳ್ಳಿಗೆ ಧಾವಿಸುತ್ತಿದ್ದಾರೆ.

ಟಿ.ಕೆ.ಹಳ್ಳಿ ಯಂತ್ರಾಗಾರ ಜಲಾವೃತ: ಬೆಂಗಳೂರು ನಗರಕ್ಕೆ ಕಾವೇರಿ ನೀರು ಸರಬರಾಜಿಗೆ ತೊಂದರೆ
ಮಂಡ್ಯ ಜಿಲ್ಲೆ ಟಿ.ಕೆ.ಹಳ್ಳಿಯಲ್ಲಿರುವ ಕಾವೇರಿ ನೀರು ಸರಬರಾಜು ಕೇಂದ್ರ ಜಲಾವೃತಗೊಂಡಿದೆ.Image Credit source: Tv9Kannada
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Sep 05, 2022 | 11:20 AM

Share

ಮಂಡ್ಯ: ಜಿಲ್ಲೆಯ ಹಲಗೂರಿನಲ್ಲಿ ಧಾರಾಕಾರ ಮಳೆ ಸುರಿದಿರುವ ಹಿನ್ನೆಲೆಯಲ್ಲಿ (Rain in Mandya) ಮಳವಳ್ಳಿ ತಾಲ್ಲೂಕು ಟಿ.ಕೆ.ಹಳ್ಳಿಯಲ್ಲಿರುವ ಕಾವೇರಿ ನೀರಿನ ಜಲರೇಚಕ ಯಂತ್ರಾಗಾರ (ಪಂಪ್​ಸ್ಟೇಷನ್) ಜಲಾವೃತಗೊಂಡಿದ್ದು, ಬೆಂಗಳೂರಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ಏರುಪೇರಾಗಿದೆ. ಇಲ್ಲಿಂದಲೇ ಬೆಂಗಳೂರಿಗೆ ಕುಡಿಯುವ ನೀರು ಸರಬರಾಜು ಆಗುತ್ತಿತ್ತು. ಯಂತ್ರಾಗಾರಕ್ಕೆ ಹಾನಿಯಾದ ವಿಚಾರ ತಿಳಿದ ತಕ್ಷಣ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುರ್ತು ಪ್ರವಾಸ ಕೈಗೊಂಡಿದ್ದು, ಟಿ.ಕೆ.ಹಳ್ಳಿಗೆ ಧಾವಿಸುತ್ತಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಇಂದು (ಸೆ 5, ಸೋಮವಾರ) ಮಧ್ಯಾಹ್ನ ಮಂಡ್ಯಕ್ಕೆ ತೆರಳಲಿದ್ದು, ಟಿಕೆ ಹಳ್ಳಿಯಲ್ಲಿರುವ ಬೆಂಗಳೂರು ನೀರು ಸರಬರಾಜು ಮಂಡಳಿಯ ಘಟಕಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ಮಳೆ ನೀರು ನುಗ್ಗಿ ಯಂತ್ರೋಪಕರಣಗಳು ಮುಳುಗಡೆಯಾಗಿರುವ ಕಾರಣ ಬೆಂಗಳೂರಿಗೆ ನೀರು ಸರಬರಾಜು ಬಂದ್ ಆಗುವ ಸಾಧ್ಯತೆಯಿದೆ. ವಿಧಾನಸೌಧ ಹಾಗೂ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕೆಲ ಅಧಿಕೃತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವ ಮುಖ್ಯಮಂತ್ರಿ ಅಲ್ಲಿಂದ ನೇರವಾಗಿ ಮಂಡ್ಯಕ್ಕೆ ತೆರಳಲಿದ್ದಾರೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಜಾಲತಾಣದ ಪ್ರಕಾರ ಬೆಂಗಳೂರಿಗೆ ಕಾವೇರಿಯಿಂದ ಪ್ರಸ್ತುತ ಪ್ರತಿದಿನ 1,450 ದಶಲಕ್ಷ ಲೀಟರ್ ನೀರು ಸರಬರಾಜಾಗುತ್ತಿದೆ. 57 ನೆಲಮಟ್ಟದ ಜಲಾಶಯಗಳು ಹಾಗೂ 39 ಓವರ್​ಹೆಡ್​ ಟ್ಯಾಂಕ್​ಗಳು ಇವೆ. ಒಂದು ದಿನಕ್ಕೆ ಸರಾಸರಿ 10.15 ಲಕ್ಷ ಮನೆಗಳಿಗೆ ನೀರು ಸರಬರಾಜಾಗುತ್ತಿದೆ.

ಬೆಂಗಳೂರಿಗೆ ನೀರು ಪೂರೈಕೆ ಸಮಸ್ಯೆ: ಮುಖ್ಯಮಂತ್ರಿ ಪ್ರತಿಕ್ರಿಯೆ

ಮಂಡ್ಯದಲ್ಲಿ ಧಾರಾಕಾರ ಮಳೆಯಿಂದ ಟಿ.ಕೆ.ಹಳ್ಳಿ ಘಟಕದಲ್ಲಿ ತೊಂದರೆ ಆಗಿದೆ. ಟಿ.ಕೆ.ಹಳ್ಳಿ ಕುಡಿಯುವ ನೀರಿನ ಘಟಕಕ್ಕೆ ನಾನು ಭೇಟಿ ನೀಡುತ್ತೇನೆ. ಈಗಾಗಲೇ BWSSB ಸಿಬ್ಬಂದಿ ಮತ್ತು ಎಂಜಿನಿಯರ್​ಗಳು ಅಲ್ಲಿಗೆ ಹೋಗಿದ್ದಾರೆ. ಇಂದು ಸಂಜೆಯೊಳಗೆ ಎಲ್ಲಾ ಸಮಸ್ಯೆ ಬಗೆಹರಿಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನ ಮಹದೇವವಪುರ, ಬೊಮ್ಮನಹಳ್ಳಿಯಲ್ಲಿ ಹೆಚ್ಚು ಮಳೆ ಆಗಿದೆ. ಬಿಬಿಎಂಪಿ ಕಮಿಷನರ್​ ಜತೆಗೂ ಮಾತನಾಡಿದ್ದೇನೆ. ಎರಡು ಎಸ್​ಡಿಆರ್​ಎಫ್​ ತಂಡವನ್ನು ಸ್ಥಳಕ್ಕೆ ಕಳಿಸಲು ಸೂಚಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: Bangalore Rain: ಬೆಂಗಳೂರಿನಲ್ಲಿ ರಾತ್ರಿ ಸುರಿದ ಭಾರಿ ಮಳೆ: ಭಾಗಶಃ ಐಟಿ-ಬಿಟಿ ಕಂಪನಿಗಳಿಗೆ ರಜೆ ಘೋಷಣೆ

Published On - 11:20 am, Mon, 5 September 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?