AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಅಸಭ್ಯ ವರ್ತನೆ ತೋರಿದ ಮುಖ್ಯ ಶಿಕ್ಷಕನಿಗೆ ಕೋಲು, ದೊಣ್ಣೆ ಹಿಡಿದು ಚಳಿ ಬಿಡಿಸಿದ ವಿದ್ಯಾರ್ಥಿನಿಯರು

ಹಾಸ್ಟೆಲ್ ವಿದ್ಯಾರ್ಥಿನಿಯರ ಜತೆ ಅಸಭ್ಯ ವರ್ತನೆ ತೋರಿದ ಹಿನ್ನೆಲೆ ವಿದ್ಯಾರ್ಥಿನಿಯರು ಗುಂಪಾಗಿ ಕಾಮುಕ, ಮುಖ್ಯ ಶಿಕ್ಷಕನಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.

ಮಂಡ್ಯ: ಅಸಭ್ಯ ವರ್ತನೆ ತೋರಿದ ಮುಖ್ಯ ಶಿಕ್ಷಕನಿಗೆ ಕೋಲು, ದೊಣ್ಣೆ ಹಿಡಿದು ಚಳಿ ಬಿಡಿಸಿದ ವಿದ್ಯಾರ್ಥಿನಿಯರು
ಒಂದು ಚಿತ್ರದಲ್ಲಿ ಮುಖ್ಯ ಶಿಕ್ಷಕ, ಮತ್ತೊಂದರಲ್ಲಿ ವಿದ್ಯಾರ್ಥಿನಿಯಲು ಶಿಕ್ಷಕನನ್ನು ಹಲ್ಲೆ ಮಾಡುತ್ತಿರುವುದು
TV9 Web
| Edited By: ಆಯೇಷಾ ಬಾನು|

Updated on:Dec 15, 2022 | 12:25 PM

Share

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ವಿದ್ಯಾರ್ಥಿನಿಯರು ಪಾಠ ಕಲಿಸುವ ಶಿಕ್ಷಕನ(Teacher) ಮೇಲೆಯೇ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿಯರ(Students) ಬಳಿ ಬಾಲ ಬಿಚ್ಚಿದ ಶಿಕ್ಷನಿಗೆ ಚಳಿ ಬಿಡಿಸಲು ಕೈಯಲ್ಲಿ ಕೋಲು, ದೊಣ್ಣೆ ಹಿಡಿದು ವಿದ್ಯಾರ್ಥಿನಿಯರು ಉಗ್ರವತಾರ ತಾಳಿದ್ದಾರೆ. ವಿದ್ಯಾರ್ಥಿನಿಯರ ಏಟಿಗೆ ಮುಖ್ಯ ಶಿಕ್ಷಕ ಬೆಳಲಿ ಬೆಂಡಾಗಿದ್ದಾರೆ.

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿ ಹಾಸ್ಟೆಲ್ ವಿದ್ಯಾರ್ಥಿನಿಯರ ಜತೆ ಅಸಭ್ಯ ವರ್ತನೆ ತೋರಿದ ಹಿನ್ನೆಲೆ ವಿದ್ಯಾರ್ಥಿನಿಯರು ಗುಂಪಾಗಿ ಕಾಮುಕ, ಮುಖ್ಯ ಶಿಕ್ಷಕನಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಎಣ್ಣೆ ಏಟಲ್ಲಿ ರಾತ್ರಿ ವಿದ್ಯಾರ್ಥಿನಿಯರ ಜತೆ ಶಿಕ್ಷಕ ಆನಂದ ಚಿನ್ಮಯ ಮೂರ್ತಿ ಅಸಭ್ಯವರ್ತನೆ ತೋರಿದ್ದ. ಇದರಿಂದ ತಕ್ಷಣವೇ ಎಚ್ಚೆತ್ತ ವಿದ್ಯಾರ್ಥಿನಿಯರು ಶಿಕ್ಷಕನ ಮೇಲೆ ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ: ಪ್ರೀತಿಸಿದ ಹುಡುಗಿಯ ಬೈಕ್ ಸುಟ್ಟು ಹಾಕಿದ ಪಾಗಲ್ ಪ್ರೇಮಿ

ಪದೇ ಪದೇ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಮಂಡ್ಯ ಜಿಲ್ಲೆ ಸಾಕ್ಷಿಯಾಗುತ್ತಿದೆ. ಕೆಲ ದಿನಗಳ ಹಿಂದೆ ಮಳವಳ್ಳಿ ರೇಪ್ ಎಂಡ್ ಮರ್ಡರ್ ಪ್ರಕರಣ ನಡೆದಿತ್ತು. ಬಳಿಕ ಬೇಬಿ ಗ್ರಾಮದ ಶಿಕ್ಷಕನ ಲೈಂಗಿಕ ದೌರ್ಜನ ಪ್ರಕರಣ ಆಯ್ತು, ಈಗ ಕಟ್ಟೇರಿ ಗ್ರಾಮದ ಸರದಿ. ಕತ್ತಲಿಂದ ಬೆಳಕಿನಡೆಗೆ ದಾರಿ ತೋರಿಸಬೇಕಿದ್ದ ಗುರುವಿನ ಸ್ಥಾನಕ್ಕೆ ಈ ಕಾಮ ಕ್ರಿಮಿಗಳು ಧಕ್ಕೆ ತರುತ್ತಿದ್ದಾರೆ. ಸದ್ಯ ಕೆ.ಆರ್.ಎಸ್ ಠಾಣಾ ಪೊಲೀಸರು ಕಾಮುಕ ಶಿಕ್ಷಕನನ್ನ ವಶಕ್ಕೆ ಪಡೆದಿದ್ದಾರೆ.

ಕಾಮುಕ ಶಿಕ್ಷಕನ ವಿರುದ್ಧ ಎಫ್​ಐಆರ್

ಹೆಡ್ ಮಾಸ್ಟರ್ ಚಿನ್ಮಯಾನಂದ ಮೂರ್ತಿ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಹಾಸ್ಟೆಲ್ ವಾರ್ಡನ್ ಕೊಟ್ಟ ದೂರಿನ ಅನ್ವಯ ಕೆ.ಆರ್.ಎಸ್ ಠಾಣಾ ಪೊಲೀಸರು ಐಪಿಸಿ 354(A), 354(D),506,509 ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಹೆಡ್ ಮಾಸ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಚಿನ್ಮಾಯಾನಂದ ಮೂರ್ತಿ ವಿದ್ಯಾರ್ಥಿನಿಯರಿಗೆ ತನ್ನ ಕಚೇರಿಗೆ ಕರೆಸಿಕೊಂಡು ದೌರ್ಜನ್ಯ ಎಸಗುತ್ತಿದ್ದನಂತೆ. ಖಾಸಗಿ ಅಂಗಾಂಗ ಮುಟ್ಟಿ ಮುತ್ತು ಕೊಡುತ್ತಿದ್ದನಂತೆ. ತನ್ನ ಮೊಬೈಲ್​ನಲ್ಲಿರುವ ಬ್ಲೂ ಫಿಲ್ಮ್ ತೋರಿಸಿ ಲೈಂಗಿಕ ಕ್ರಿಯೆಗೆ ಪ್ರೇರಣೆ ಮಾಡುತ್ತಿದ್ದ. ಸೆಕ್ಸ್ ಗೆ ಸಹಕರಿಸದಿದ್ರೆ ಪರೀಕ್ಷೆಯಲ್ಲಿ ಅನುರ್ತಿರ್ಣ ಮಾಡೋದಾಗಿ ಧಮ್ಕಿ ಹಾಕುತ್ತಿದ್ದ. ಇತರೆ ಸಹ ಶಿಕ್ಷಕಿಯರ ಫೋಟೋ ತೋರಿಸಿ ಅಶ್ಲೀಲವಾಗಿ ವಿದ್ಯಾರ್ಥಿನಿಯರ ಜೊತೆ ಮಾತಾಡುತ್ತಿದ್ದ. ಮುಖ್ಯ ಶಿಕ್ಷಕನ ಕಾಟ ತಾಳಲಾರದೆ ರಾತ್ರಿ ವಿದ್ಯಾರ್ಥಿನಿಯರು ಕೈಯಲ್ಲಿ ಕೋಲು ಹಾಗೂ ದೊಣ್ಣೆ ಹಿಡಿದು ಮನಸೋಯಿಚ್ಚೆ ಥಳಿಸಿದ್ದಾರೆ. ವಿದ್ಯಾರ್ಥಿನಿಯರು ಕೊಟ್ಟ ಏಟಿಗೆ ಶಿಕ್ಷಕ ತಬ್ಬಿಬ್ಬಾಗಿದ್ದಾನೆ. ಸದ್ಯ ಕಾಮುಕ ಶಿಕ್ಷಕನ ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:22 am, Thu, 15 December 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ