AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಆಸ್ತಿ ಆಸೆಗೆ ಪತ್ನಿಯನ್ನೇ ಕೊಂದ ಶಿಕ್ಷಕ, ಸಹಜ ಸಾವೆಂದು ಬಿಂಬಿಸಲು ಹೋಗಿ ಜೈಲು ಸೇರಿದ

ಮಂಡ್ಯದ ವಿವಿ ನಗರ ಬಡಾವಣೆಯಲ್ಲಿ ಆಸ್ತಿಗಾಗಿ ಸೋಮಶೇಖರ್ ತಮ್ಮ ಪತ್ನಿಯನ್ನೇ ಕೊಲೆ ಮಾಡಿದ್ದಾರೆ. ಶೃತಿ ಅವರು ಮಲಗಿದ್ದ ವೇಳೆ ಮುಖಕ್ಕೆ ದಿಂಬು, ಬೆಡ್ ಶೀಟ್ ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ನಂತರ ಇದೊಂದು ಸಹಜ ಸಾವೆಂದು ಬಿಂಬಿಸುವ ಯತ್ನ ಮಾಡಿದ್ದಾರೆ. ಆದರೆ ಯತ್ನ ವಿಫಲವಾಗಿದ್ದು ಜೈಲು ಸೇರಿದ್ದಾರೆ.

ಮಂಡ್ಯ: ಆಸ್ತಿ ಆಸೆಗೆ ಪತ್ನಿಯನ್ನೇ ಕೊಂದ ಶಿಕ್ಷಕ, ಸಹಜ ಸಾವೆಂದು ಬಿಂಬಿಸಲು ಹೋಗಿ ಜೈಲು ಸೇರಿದ
ಆರೋಪಿ ಟಿ.ಎನ್.ಸೋಮಶೇಖರ್, ಕೊಲೆಯಾದ ಎಸ್.ಶೃತಿ
ಪ್ರಶಾಂತ್​ ಬಿ.
| Edited By: |

Updated on: Nov 16, 2023 | 9:03 AM

Share

ಮಂಡ್ಯ, ನ.16: ಆಸ್ತಿ ಆಸೆಗೆ ಪತಿಯೇ ಪತ್ನಿಯ ಕೊಲೆ‌ ಮಾಡಲಾಗಿರುವ ಘಟನೆ ಮಂಡ್ಯದ ವಿವಿ ನಗರ ಬಡಾವಣೆಯಲ್ಲಿ ನಡೆದಿದೆ (Husband Killed Wife). ಮಂಡ್ಯದ (Mandya) ಖಾಸಗಿ‌ ಕಾಲೇಜಿನಲ್ಲಿ ಪ್ರಾಧ್ಯಪಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಹಣದ ದಾಹಕ್ಕೆ (Property) ಬಿದ್ದು ದಿಂಬು, ಬೆಡ್​ಶೀಟ್​​ನಿಂದ ಉಸಿರುಗಟ್ಟಿಸಿ ಪತ್ನಿಯನ್ನೇ ಕೊಲೆ ಮಾಡಿದ್ದಾನೆ. ಹತ್ಯೆ ಮಾಡಿ ಬಳಿಕ ಸಹಜ ಸಾವೆಂದು ನಾಟಕವಾಡಿದ್ದ, ಆದ್ರೆ ಈ ನಾಟಕ ಬಯಲಾಗಿದ್ದು ಹಂತಕ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್.ಶೃತಿ(32) ಕೊಲೆಯಾದವರು, ಟಿ.ಎನ್.ಸೋಮಶೇಖರ್(41) ಬಂಧಿತ ಆರೋಪಿ.

ಮಂಡ್ಯದ ವಿವಿ ನಗರ ಬಡಾವಣೆಯಲ್ಲಿ ಆಸ್ತಿಗಾಗಿ ಸೋಮಶೇಖರ್ ತಮ್ಮ ಪತ್ನಿಯನ್ನೇ ಕೊಲೆ ಮಾಡಿದ್ದಾರೆ. ಶೃತಿ ಅವರು ಮಲಗಿದ್ದ ವೇಳೆ ಮುಖಕ್ಕೆ ದಿಂಬು, ಬೆಡ್ ಶೀಟ್ ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ನಂತರ ಇದೊಂದು ಸಹಜ ಸಾವೆಂದು ಬಿಂಬಿಸುವ ಯತ್ನ ಮಾಡಿದ್ದಾರೆ. ಆದರೆ ಯತ್ನ ವಿಫಲವಾಗಿದ್ದು ಜೈಲು ಸೇರಿದ್ದಾರೆ. ಕೆಲ ವರ್ಷಗಳ ಹಿಂದೆ ಅನಾರೋಗ್ಯದಿಂದ ಶೃತಿ ಅವರ ತಂದೆ, ತಾಯಿ ಸಾವನ್ನಪ್ಪಿದ್ದರು. 2018ರಲ್ಲಿ ಅಪಘಾತದಲ್ಲಿ ಶೃತಿ ತಂಗಿ ಸುಶ್ಮಿತ ಕೂಡ ಮೃತಪಟ್ಟಿದ್ದರು. ಹೀಗಾಗಿ ಮೂವರ ಸಾವಿನ ಬಳಿಕ ಶೃತಿ ಹೆಸರಿಗೆ 10 ಕೋಟಿಗೂ ಹೆಚ್ಚು ಮೌಲ್ಯದ ಪ್ರಾಪರ್ಟಿ ವರ್ಗಾವಣೆಯಾಗಿತ್ತು. ಮೈಸೂರಿನ ಪ್ರಮುಖ ನಗರಗಳಲ್ಲಿದ್ದ ಕಮರ್ಷಿಯಲ್ ಬಿಲ್ಡಿಂಗ್ಸ್, ಮನೆ ಹಾಗೂ ಸೈಟ್‌ಗಳ ಮೇಲೆ ಆರೋಪಿ ಪತಿ ಸೋಮಶೇಖರನ ಕಣ್ಣು ಬಿದ್ದಿತ್ತು. ಆ ಆಸ್ತಿ ಮಾರಲು ಶೃತಿಗೆ ಒತ್ತಾಯಿಸುತ್ತಿದ್ದರು.

ಇದನ್ನೂ ಓದಿ: ಮೈಸೂರಿನಲ್ಲಿ ರೈಲು ಅಪಘಾತಕ್ಕೆ ಸಂಚು: ಹಳಿ ಮೇಲೆ ಮರದ ದಿಮ್ಮಿ, ಕಬ್ಬಿಣದ ರಾಡ್ ಇಟ್ಟವರು ಪೊಲೀಸ್ ವಶಕ್ಕೆ

ಮಾರಾಟ ಮಾಡಿ ಬೇರೆಡೆ ಪ್ರಾಪರ್ಟಿ ಖರೀದಿಗೆ ಪ್ಲಾನ್‌ ಮಾಡಿದ್ದ. ಆದರೆ ಆಸ್ತಿ ಮಾರಾಟ ಮಾಡಲು ಶೃತಿ ನಿರಾಕರಿಸಿದ್ದರು. ಇದೇ ವಿಚಾರಕ್ಕೆ ಹಲವು ಬಾರಿ ಇವರಿಬ್ಬರ ನಡುವೆ ಜಗಳ ನಡೆದಿತ್ತು. ಕಳೆದ ಶನಿವಾರ ಶೃತಿ ಮಲಗಿದ್ದ ವೇಳೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಳಿಕ ಪಲ್ಸ್ ರೇಟ್ ಕಮ್ಮಿಯಾಗಿ ಮಲಗಿದ್ದಲ್ಲೇ ಸಾವನ್ನಪ್ಪಿದ್ದಾಳೆಂದು ನಾಟಕವಾಡಿದ್ದಾನೆ. ಮೃತ ಶೃತಿ ಚಿಕ್ಕಪ್ಪನಿಗೆ ಕರೆ ಮಾಡಿ ಸಹಜ ಸಾವೆಂದು ತಿಳಿಸಿದ್ದಾನೆ. ಇದರಿಂದ ಅನುಮಾನಗೊಂಡ ಚಿಕ್ಕಪ್ಪ ಕುಮಾರಸ್ವಾಮಿ ಎಂಬುವವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅನುಮಾನಸ್ಪದ ಸಾವೆಂದು ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದು ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿಸಿ ಸಾಯಿಸಿರುವ ಸತ್ಯ ಬಯಲಾಗಿದೆ.

ಬಳಿಕ ಸೋಮಶೇಖರ್ ಬಂಧಿಸಿ ವಿಚಾರಣೆ ನಡೆಸಲಾಗಿದ್ದು ವಿಚಾರಣೆ ವೇಳೆ ತಾನೇ ಕೊಲೆ ಮಾಡಿರೋದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿ ಪತಿಯನ್ನ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ