AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ದೇಗುಲದ ಎದುರು ಅಕ್ರಮವಾಗಿ ಮಸೀದಿ, ರಸ್ತೆ ನಿರ್ಮಾಣ; ಬಲಪಂಥೀಯ ಸಂಘಟನೆಗಳಿಂದ ಪ್ರತಿಭಟನೆ

Protest in Mandya against illegal mosque; ಸಾರ್ವಜನಿಕ ಆಸ್ತಿಯಲ್ಲಿ ರಸ್ತೆ ನಿರ್ಮಿಸುವುದು ಸರಿಯಲ್ಲ ಎಂದು ಸಂಘಟನೆ ಆಕ್ಷೇಪ ವ್ಯಕ್ತಪಡಿಸಿದೆ. ಇದು ಯುವಕರ ನಡುವೆ ಘರ್ಷಣೆಗೆ ಕಾರಣವಾಗಬಹುದು. ಜಿಲ್ಲಾಧಿಕಾರಿಯವರು ಮಧ್ಯ ಪ್ರವೇಶಿಸಿ ನಿರ್ಮಾಣ ಹಂತದಲ್ಲಿರುವ ರಸ್ತೆಯನ್ನು ತೆರವುಗೊಳಿಸಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದ್ದಾರೆ.

ಮಂಡ್ಯದಲ್ಲಿ ದೇಗುಲದ ಎದುರು ಅಕ್ರಮವಾಗಿ ಮಸೀದಿ, ರಸ್ತೆ ನಿರ್ಮಾಣ; ಬಲಪಂಥೀಯ ಸಂಘಟನೆಗಳಿಂದ ಪ್ರತಿಭಟನೆ
ಮಂಡ್ಯದಲ್ಲಿ ಬಜರಂಗ ಸೇನೆಯ ಸದಸ್ಯರಿಂದ ಪ್ರತಿಭಟನೆ
TV9 Web
| Edited By: |

Updated on: Aug 31, 2023 | 4:38 PM

Share

ಮಂಡ್ಯ, ಆಗಸ್ಟ್ 31: ದೇವಸ್ಥಾನದ ಎದುರು ಭಾಗದಲ್ಲಿ ಅಕ್ರಮವಾಗಿ ಮಸೀದಿಗೆ (Mosque) ರಸ್ತೆ ನಿರ್ಮಾಣ ಮಾಡಿದ ಆರೋಪದ ಮೇಲೆ ಹಿಂದೂಪರ ಸಂಘಟನೆಯ (Right-wing Organisation) ಸದಸ್ಯರು ಹಾಗೂ ಕೆಲ ಸ್ಥಳೀಯರು ಗುರುವಾರ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಭಜರಂಗ ಸೇನೆ ಮತ್ತು ಹಾಲಹಳ್ಳಿ ಸ್ಲಂ ಬೋರ್ಡ್‌ನ ಸದಸ್ಯರು ಎಂ ವಿಶ್ವೇಶ್ವರಯ್ಯ ಪ್ರತಿಮೆಯಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಮಂಜುನಾಥ್ ನೇತೃತ್ವದ ಹಿಂದೂಪರ ಸಂಘಟನೆಯವರು, ಮಸೀದಿಗೆ ಭೂಮಿ ಮಂಜೂರು ಮಾಡಿದ ಸ್ಥಳದಲ್ಲಿ ರಸ್ತೆ ನಿರ್ಮಿಸಬೇಕೇ ವಿನಃ ದೇವಸ್ಥಾನದ ಮುಂದೆ ಅಲ್ಲ ಎಂದು ಹೇಳಿದರು.

ಸಾರ್ವಜನಿಕ ಆಸ್ತಿಯಲ್ಲಿ ರಸ್ತೆ ನಿರ್ಮಿಸುವುದು ಸರಿಯಲ್ಲ ಎಂದು ಸಂಘಟನೆ ಆಕ್ಷೇಪ ವ್ಯಕ್ತಪಡಿಸಿದೆ. ಇದು ಯುವಕರ ನಡುವೆ ಘರ್ಷಣೆಗೆ ಕಾರಣವಾಗಬಹುದು. ಜಿಲ್ಲಾಧಿಕಾರಿಯವರು ಮಧ್ಯ ಪ್ರವೇಶಿಸಿ ನಿರ್ಮಾಣ ಹಂತದಲ್ಲಿರುವ ರಸ್ತೆಯನ್ನು ತೆರವುಗೊಳಿಸಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದ್ದಾರೆ.

ಮಂಡ್ಯದ ಹಾಲಹಳ್ಳಿ ಸ್ಲಂ ಬೋರ್ಡ್ ಬಡವಾಣೆಯಲ್ಲಿರುವ ಕರುಮಾರಿಯಮ್ಮ ದೇವಸ್ಥಾನದ ಎದುರು ಮಸೀದಿ ರಸ್ತೆ ನಿರ್ಮಿಸಲಾಗುತ್ತಿದೆ.

ಇದನ್ನೂ ಓದಿ: ಕಾವೇರಿ ವಿವಾದ: ಕರ್ನಾಟಕ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ, ಅರೆಬೆತ್ತಲೆ ಮೆರವಣಿಗೆ; ಚಾಮರಾಜನಗರದಲ್ಲೂ ಹೋರಾಟ

ಮಂಡ್ಯದಲ್ಲಿ ಕಾವೇರಿದ ಕಾವೇರಿ ಕಿಚ್ಚು

ಮತ್ತೊಂದೆಡೆ, ತಮಿಳುನಾಡಿಗೆ ನೀರು ಬಿಡುತ್ತಿರುವುದರ ವಿರುದ್ಧ ಮಂಡ್ಯದಲ್ಲಿ ವಿವಿಧ ಸಂಘಟನೆಗಳ ಮತ್ತು ರೈತರ ಪ್ರತಿಭಟನೆ ತೀವ್ರಗೊಂಡಿದೆ. ವಾಹನ ಸಂಚಾರ ತಡೆಗೆ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರ ಯತ್ನಿಸಿದ್ದು, ಪೊಲೀಸರು ಅವರನ್ನು ತಡೆದು ಪಕ್ಕಕ್ಕೆ ಕರೆದೊಯ್ದರು. ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಧರಣಿ ವೇಳೆ ಘಟನೆ ನಡೆಯಿತು. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಾವೇರಿ ಹೋರಾಟ ನಡೆಯುತ್ತಿತ್ತು. ಇದೇ ವೇಳೆ ಏಕಾಏಕಿ ಮೈಸೂರು – ಬೆಂಗಳೂರು ಹೆದ್ದಾರಿಯಲ್ಲಿ ಪ್ರತಿಭಟನಾಕಾರರು ಬಸ್ ತಡೆದಿದ್ದಾರೆ. ತಕ್ಷಣವೇ ಕಾರ್ಯಕರ್ತರನ್ನು ತಡೆದ ಪೊಲೀಸರು ಹೆದ್ದಾರಿ ತಡೆ ಹಾಗೂ ವಾಹನಗಳ ತಡೆಯದಂತೆ ಸೂಚನೆ ನೀಡಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು