AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲೆಸೆತ; ಪೊಲೀಸ್ ಠಾಣೆ ಎದುರು ಹಿಂದೂಗಳಿಂದ ಪ್ರತಿಭಟನೆ

ನಾಗಮಂಗಲ(Nagamangala)ದ ಬದರಿಕೊಪ್ಪಲಿನಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ಮಾಡಿದ ಆರೋಪ ಕೇಳಿಬಂದಿದ್ದು, ಪೊಲೀಸ್ ಠಾಣೆ ಎದುರು ಗಣಪತಿ ಮೂರ್ತಿ ನಿಲ್ಲಿಸಿ ಹಿಂದೂಗಳು ಪ್ರತಿಭಟನೆ ನಡೆಸಿದ್ದಾರೆ. ಇತ್ತ ಮಧುಗಿರಿ ಪಟ್ಟಣದ ಮೇಕೆಬಂಡೆ ಬಳಿ ಗಣೇಶ ವಿಸರ್ಜನೆ ಬಳಿಕ ಪಟಾಕಿ ಹಚ್ಚಿದ ವಿಚಾರಕ್ಕೆ ಗಲಾಟೆಯಾಗಿ ಓರ್ವನಿಗೆ ಚಾಕು ಇರಿದ ಘಟನೆ ನಡೆದಿದೆ.

ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲೆಸೆತ; ಪೊಲೀಸ್ ಠಾಣೆ ಎದುರು ಹಿಂದೂಗಳಿಂದ ಪ್ರತಿಭಟನೆ
ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನವರಿಂದ ಕಲ್ಲೆಸೆತ
ಪ್ರಶಾಂತ್​ ಬಿ.
| Edited By: |

Updated on:Sep 12, 2024 | 9:17 AM

Share

ಮಂಡ್ಯ, ಸೆ.11: ಮಂಡ್ಯದ ನಾಗಮಂಗಲ(Nagamangala)ದ ಬದರಿಕೊಪ್ಪಲಿನಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ಮಾಡಿದ ಆರೋಪ ಕೇಳಿಬಂದಿದ್ದು, ಪೊಲೀಸ್ ಠಾಣೆ ಎದುರು ಗಣಪತಿ ಮೂರ್ತಿ ನಿಲ್ಲಿಸಿ ಹಿಂದೂಗಳು ಪ್ರತಿಭಟನೆ ನಡೆಸಿದ್ದಾರೆ. ಇಂದು ಅದ್ದೂರಿಯಾಗಿ ಗಣೇಶ ಮೂರ್ತಿ ವಿಸರ್ಜನೆ ಮಾಡಲಾಗುತ್ತಿತ್ತು. ನಾಗಮಂಗಲದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬಂದ ವೇಳೆ ಅನ್ಯಕೋಮಿನ ಯುವಕರು ಕಲ್ಲುತೂರಾಟ ನಡೆಸಿದ್ದಾರೆ.

ಈ ವೇಳೆ ಹಿಂದೂ-ಮುಸ್ಲಿಂ ಯುವಕರ ನಡುವೆ ವಾಕ್ಸಮರ, ತಳ್ಳಾಟ ನೂಕಾಟವಾಗಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ. ಬಳಿಕ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕಾಗಿ ಆಗ್ರಹಿಸಿ ಪೊಲೀಸ್ ಠಾಣೆ ಎದುರು ಗಣೇಶ ಮೂರ್ತಿ ನಿಲ್ಲಿಸಿ ಹಿಂದೂಗಳು ಪ್ರತಿಭಟನೆ ನಡೆಸಿದ್ದಾರೆ. ಕಳೆದ ವರ್ಷವೂ ಇದೇ ದರ್ಗಾ ಮುಂಭಾಗ ಗಲಾಟೆ ನಡೆದಿತ್ತು. ಮೆರವಣಿಗೆ ವೇಳೆ ದರ್ಗಾ ಮುಂದೆ ತಮಟೆ, ಡೊಳ್ಳು ಬಾರಿಸದಂತೆ ಕಿರಿಕ್ ಆಗಿತ್ತು. ಈ ಬಾರಿ ಕಲ್ಲೆಸೆತ ನಡೆದಿದ್ದು, ನಾಗಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Video: ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು

ಗಣೇಶ ವಿಸರ್ಜನೆ ಬಳಿಕ ಪಟಾಕಿ ಹಚ್ಚಿದ ವಿಚಾರಕ್ಕೆ ಗಲಾಟೆ; ಓರ್ವನಿಗೆ ಚಾಕು ಇರಿತ

ತುಮಕೂರು: ಜಿಲ್ಲೆಯ ಮಧುಗಿರಿ ಪಟ್ಟಣದ ಮೇಕೆಬಂಡೆ ಬಳಿ ಗಣೇಶ ವಿಸರ್ಜನೆ ಬಳಿಕ ಪಟಾಕಿ ಹಚ್ಚಿದ ವಿಚಾರಕ್ಕೆ ಗಲಾಟೆ ನಡೆದಿದ್ದು, ಈ ವೇಳೆ ಮಧು ಎಂಬುವನಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಗಲಾಟೆ ತೆಗೆದು ಚಾಕು ಇರಿದ ಆರೋಪ ಕೇಳಿಬಂದಿದೆ. ಮಧು ಹೊಟ್ಟೆ ಭಾಗಕ್ಕೆ ಇರಿತದಿಂದ ಗಂಭೀರ ಗಾಯಗೊಂಡಿದ್ದು, ಕೂಡಲೇ ಮಧುಗಿರಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:59 pm, Wed, 11 September 24

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್