AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ನಗರದ ಪೊಲೀಸರಿಂದ ಅಮಾನವೀಯ ನಡೆ; ಮಹಿಳೆ ಅಸ್ವಸ್ಥ

ಮಂಡ್ಯ ನಗರದ ಪೊಲೀಸರಿಂದ ಅಮಾನವೀಯ ನಡೆಯೊಂದು ನಡೆದಿದೆ. ದಂಡ ಕಟ್ಟುತ್ತೇನೆ ಎಂದು ಯುವಕ ಹೇಳಿದರು ಕೂಡ ಪೋಲಿಸರು ಬೈಕ್ ಕೀ ಕಿತ್ತುಕೊಂಡಿದ್ದಾರೆ. ಈ ಮಧ್ಯೆ ಯುವಕನ ತಾಯಿ ಅಸ್ವಸ್ಥ.

ಮಂಡ್ಯ ನಗರದ ಪೊಲೀಸರಿಂದ ಅಮಾನವೀಯ ನಡೆ; ಮಹಿಳೆ ಅಸ್ವಸ್ಥ
ಮಂಡ್ಯ ನಗರದ ಪೊಲೀಸರಿಂದ ಅಮಾನವೀಯ ನಡೆ; ಮಹಿಳೆ ಅಸ್ವಸ್ಥ
TV9 Web
| Edited By: |

Updated on: Jan 20, 2022 | 3:06 PM

Share

ಮಂಡ್ಯ: ಮಂಡ್ಯ ನಗರದ ಪೊಲೀಸರಿಂದ ಅಮಾನವೀಯ ನಡೆಯೊಂದು ನಡೆದಿದೆ. ಮಂಡ್ಯ ನಗರದ ಸಂಜಯ್ ವೃತ್ತದಲ್ಲಿ ಈ ಘಟನೆ ಸಂಭವಿಸಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗನೂರು ಯುವಕ ವಿನೋದ್ ತನ್ನ ತಾಯಿಯ ಜೊತೆ ಬೈಕ್​ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ. ಹೆಲ್ಮೆಟ್ ಧರಿಸದ ಕಾರಣ ಮಾರ್ಗಮಧ್ಯ ಮಂಡ್ಯ ಪೊಲೀಸರು ಬೈಕ್ ತಡೆದಿದ್ದಾರೆ. ಎಷ್ಟೂ ಬೇಕಾದರು ದಂಡ ಕಟ್ಟುತ್ತೇನೆ ಎಂದು ಯುವಕ ಹೇಳಿದರು ಕೂಡ ಪೋಲಿಸರು ಬೈಕ್ ಕೀ ಕಿತ್ತುಕೊಂಡು, ಯುವಕ ವಿನೋದ್ ನ​ನ್ನು ಸತಾಯಿಸಿದ್ದಾರೆ. ಈ ಮಧ್ಯೆ ಯುವಕನ ತಾಯಿ ಅಸ್ವಸ್ಥರಾಗಿದ್ದು, ಬೈಕ್ ಸವಾರ ಹಾಗು ಪೊಲೀಸ್ ನಡುವೆ ಮಾತಿನ ಚಕಮಕಿ ಉಂಟಾಗಿದೆ. 

ಬೈಕ್ ಕೀ ಕಿತ್ತುಕೊಂಡು, ಕೀ ವಾಪಸ್ಸು ಕೊಡದ ಸತಾಯಿಸುತ್ತಿದ್ದಾರೆ ಎಂದು ಬೈಕ್ ಸವಾರ ವಿನೋದ್ ಆರೋಪಿಸಿದ್ದಾನೆ. ಈ ವೇಳೆ ಏಕವಚನದಲ್ಲೆ ಪೊಲೀಸನಿಗೆ  ಯುವಕ ವಿನೋದ್ ತರಾಟೆ ತೆಗೆದುಕೊಂಡಿದ್ದಾನೆ. ಈ ವೇಳೆ ಬೈಕ್ ಹಿಂಬದಿ ಕುಳಿತಿದ್ದ ಯುವಕನ ತಾಯಿ ತಲೆ ಸುತ್ತಿ ಅಸ್ವಸ್ಥಗೊಂಡಿದ್ದು, ಯುವಕ ವಿನೋದ್ ಬೈಕ್ ಬಿಟ್ಟು ತನ್ನ ತಾಯಿಯನ್ನು ಆಟೋದಲ್ಲಿ ಆಸ್ಪತ್ರಗೆ ಕರೆದುಕೊಂಡು ಹೋದ ಎನ್ನಲಾಗುತ್ತಿದೆ. ಘಟನೆಯ ವಿಡಿಯೋವನ್ನು ಸಾರ್ವಜನಿಕರು ಮೊಬೈಲ್‌ನಲ್ಲಿ ಸೆರೆಹಿಡಿಯುವ ಜೊತೆಗೆ ಪೊಲೀಸನಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ:

ವಿಮಾನದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ: ಫೋಟೋ ವೈರಲ್​

ಧನುಷ್-ಐಶ್ವರ್ಯಾ ನಡುವೆ ಹೈದರಾಬಾದ್​ನಲ್ಲಿ ನಡೆದಿದ್ದೇನು? ಇಲ್ಲಿದೆ ಇನ್ಸೈಡ್​ ಮಾಹಿತಿ

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?