AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್ ಬೆಟ್ಟಿಂಗ್ ಸಾಲಕ್ಕೆ ಹೆದರಿ ಪತಿ ಪರಾರಿ, 20 ದಿನದ ಹಸುಗೂಸು, ವಯೋವೃದ್ಧ ತಂದೆಯೊಂದಿಗೆ ಬೀದಿಯಲ್ಲಿ ಜೀವನ ನಡೆಸುತ್ತಿರುವ ಬಾಣಂತಿ

ಐಪಿಎಲ್ ಬೆಟ್ಟಿಂಗ್ ನಲ್ಲಿ ಹಣ ಸೋತು ಪತಿ ಮನೆ ಬಿಟ್ಟು ಪರಾರಿಯಾಗಿದ್ದಾನೆ. ಪತಿಯ ಆಸರೆಯಲ್ಲಿ ಜೀವನ ನಡೆಸುತ್ತಿದ್ದ ಹೆಂಡತಿ ಅನ್ನಪೂರ್ಣ ಮತ್ತು ಮಕ್ಕಳು ಈಗ ಅನಾಥರಾಗಿ ಬೀದಿಗೆ ಬಿದ್ದಿದ್ದಾರೆ.

ಐಪಿಎಲ್ ಬೆಟ್ಟಿಂಗ್ ಸಾಲಕ್ಕೆ ಹೆದರಿ ಪತಿ ಪರಾರಿ, 20 ದಿನದ ಹಸುಗೂಸು, ವಯೋವೃದ್ಧ ತಂದೆಯೊಂದಿಗೆ ಬೀದಿಯಲ್ಲಿ ಜೀವನ ನಡೆಸುತ್ತಿರುವ ಬಾಣಂತಿ
ಐಪಿಎಲ್ ಬೆಟ್ಟಿಂಗ್ ದಂಧೆಗೆ ಬೀದಿಗೆ ಬಿದ್ದ ಕುಟುಂಬ
TV9 Web
| Edited By: |

Updated on:Nov 14, 2022 | 10:24 AM

Share

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಐಪಿಎಲ್ ಬೆಟ್ಟಿಂಗ್(IPL Betting) ದಂಧೆಯಿಂದಾಗಿ ಇಡೀ ಕುಟುಂಬವೇ ಬೀದಿಗೆ ಬಿದ್ದಿದೆ. ಐಪಿಎಲ್ ಪಂದ್ಯಗಳ ಮೇಲೆ ಬೆಟ್ಟಿಂಗ್ ಕಟ್ಟುವ ಪ್ರತಿಯೊಬ್ಬರೂ ಈ ಸುದ್ದಿಯನ್ನು ಓದಲೇ ಬೇಕು. ಇದು ಬೆಟ್ಟಿಂಗ್ ಭೂತಕ್ಕೆ ಸಿಲುಕಿ ಕುಟುಂಬವನ್ನೆ ಬೀದಿಗೆ ತಂದ ಮಹಾಪುರುಷನ ಕಥೆ.

ಐಪಿಎಲ್ ಬೆಟ್ಟಿಂಗ್ ನಲ್ಲಿ ಹಣ ಸೋತು ಪತಿ ಮನೆ ಬಿಟ್ಟು ಪರಾರಿಯಾಗಿದ್ದಾನೆ. ಪತಿಯ ಆಸರೆಯಲ್ಲಿ ಜೀವನ ನಡೆಸುತ್ತಿದ್ದ ಹೆಂಡತಿ ಅನ್ನಪೂರ್ಣ ಮತ್ತು ಮಕ್ಕಳು ಈಗ ಅನಾಥರಾಗಿ ಬೀದಿಗೆ ಬಿದ್ದಿದ್ದಾರೆ. 20 ದಿನದ ಪುಟ್ಟ ಹಸುಗೂಸಿನೊಂದಿಗೆ ಬಾಣಂತಿ ಅನ್ನಪೂರ್ಣ ಅನ್ನ ನೀರಿಲ್ಲದೆ ನಡು ಬೀದಿಯಲ್ಲಿ ಕಾಲ ಕಳೆಯುತ್ತಿದ್ದಾರೆ. ತಿನ್ನಲು ಆಹಾರವಿಲ್ಲದೆ, ಮಲಗಲು ಸ್ಥಳವಿಲ್ಲದೆ ಕಣ್ಣೀರು ಹಾಕುತ್ತಿದ್ದಾರೆ. ಜೊತೆಗೆ ಅನ್ನಪೂರ್ಣ ತಮ್ಮ ವಯೋ ವೃದ್ಧ ತಂದೆ, ಇಬ್ಬರು ಮಕ್ಕಳೊಂದಿಗೆ ಬೀದಿಯಲ್ಲೇ ಜೀವನ ನಡೆಸುವಂತಹ ಸ್ಥಿತಿ ಎದುರಾಗಿದೆ.

ಇದನ್ನೂ ಓದಿ: Gandhada Gudi: ವಿಶೇಷಚೇತನ ಮಕ್ಕಳಿಗೆ ‘ಗಂಧದ ಗುಡಿ’ ಪ್ರದರ್ಶನ; ಸಹಾಯಕರ ನೆರವಿನಿಂದ ಸಾರಾಂಶ ತಿಳಿದ ಮಕ್ಕಳು

ಐಪಿಎಲ್ ಬೆಟ್ಟಿಂಗ್ ಚಟಕ್ಕೆ ಬಿದ್ದು ಮೈ ತುಂಬಾ ಸಾಲ ಮಾಡಿಕೊಂಡಿದ್ದ ಸುರೇಶ್, ಸಾಲಗಾರರ ಕಾಟ ತಾಳಲಾರದೆ ರಾತ್ರೋ ರಾತ್ರಿ ಮನೆ ಬಿಟ್ಟು ಪರಾರಿಯಾಗಿದ್ದಾನೆ. ಮೂರು ತಿಂಗಳ ಗರ್ಭಿಣಿ ಇರುವಾಗ್ಲೆ ಪತ್ನಿ ಅನ್ನಪೂರ್ಣಗೆ ಕೈ ಕೊಟ್ಟು ಸುರೇಶ್ ಎಸ್ಕೇಪ್ ಆಗಿದ್ದು ಹೊಟ್ಟೆಪಾಡಿಗಾಗಿ ಕುಣಿಗಲ್ ನಿಂದ ಮದ್ದೂರಿನ ಹೆಮ್ಮನಹಳ್ಳಿಗೆ ಅನ್ನಪೂರ್ಣ ವಲಸೆ ಬಂದಿದ್ದಾರೆ. ಆಗಿನಿಂದಲೂ ಬಟ್ಟೆ ವ್ಯಾಪಾರ, ಕೂಲಿ ಮಾಡ್ಕೊಂಡು ಜೀವನ ಸಾಗಿಸುತ್ತಿದ್ದಾರೆ. ಈಗ ಅನ್ನಪೂರ್ಣಗೆ 20 ದಿನಗಳ ಹಿಂದೆಯಷ್ಟೇ ಡೆಲಿವರಿಯಾಗಿದ್ದು ಇರಲು ಮನೆಯಿಲ್ಲದೆ, ತಿನ್ನಲು ಅನ್ನವಿಲ್ಲದೆ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಹೆಮ್ಮನಹಳ್ಳಿ ಗ್ರಾಮಸ್ಥರು ಕೊಟ್ಟ ಊಟ ತಿಂಡಿಯಿಂದಲೇ ಜೀವನ ಸಾಗಿಸುತ್ತಿದ್ದಾರೆ. ಬಾಣಂತಿ ಅನ್ನಪೂರ್ಣ ಸಹಾಯದ ನಿರೀಕ್ಷೆಯಲ್ಲಿದ್ದಾರೆ.

Published On - 9:09 am, Mon, 14 November 22

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್