AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೊಮ್ಮಟೇಶ್ವರ ಮೂರ್ತಿ ಬಗ್ಗೆ ಅವಹೇಳನಕಾರಿ ಹೇಳಿಕೆ: ಆಯೂಬ್ ಖಾನ್ ವಿರುದ್ಧ ಮೈಸೂರು, ಮಂಡ್ಯದಲ್ಲಿ ದೂರು ದಾಖಲಿಸಿದ ಜೈನ ಸಮಾಜ

ಮೈಸೂರಿನ ಸ್ಥಳೀಯ ನ್ಯೂಸ್ ಚಾನೆಲ್‌ನಲ್ಲಿ ಹಿಜಾಬ್ ಪರ ಹೇಳಿಕೆ ನೀಡುವಾಗ ನ್ಯೂ ಕಾಂಗ್ರೆಸ್ ಕಾರ್ಯಾಧ್ಯಕ್ಷ ಆಯೂಬ್ ಖಾನ್ ಗೊಮ್ಮಟೇಶ್ವರ ಮೂರ್ತಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಹೀಗಾಗಿ ಹೇಳಿಕೆ ಖಂಡಿಸಿ ದಿಗಂಬರ ಜೈನ ಸಮಾಜ ದೂರು ದಾಖಲಿಸಿದೆ.

ಗೊಮ್ಮಟೇಶ್ವರ ಮೂರ್ತಿ ಬಗ್ಗೆ ಅವಹೇಳನಕಾರಿ ಹೇಳಿಕೆ: ಆಯೂಬ್ ಖಾನ್ ವಿರುದ್ಧ ಮೈಸೂರು, ಮಂಡ್ಯದಲ್ಲಿ ದೂರು ದಾಖಲಿಸಿದ ಜೈನ ಸಮಾಜ
ನ್ಯೂ ಇಂಡಿಯನ್ ಕಾಂಗ್ರೆಸ್ ಪಾರ್ಟಿ ಅಧ್ಯಕ್ಷ ಆಯೂಬ್ ಖಾನ್
TV9 Web
| Updated By: ಆಯೇಷಾ ಬಾನು|

Updated on: Feb 10, 2022 | 3:15 PM

Share

ಮಂಡ್ಯ: ರಾಜ್ಯದಲ್ಲೆದ್ದ ಹಿಜಾಬ್(Hijab) ಕೇಸರಿ ಶಾಲು(Kesari) ವಿವಾದ ಅನೇಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಸದ್ಯ ಜೈನ ಸಮುದಾಯದ ಕೆಂಗೆಣ್ಣಿಗೂ ಹಿಜಾಬ್ ವಿವಾದ ಗುರಿಯಾಗಿದೆ. ನ್ಯೂ ಇಂಡಿಯನ್ ಕಾಂಗ್ರೆಸ್ ಪಾರ್ಟಿ ಅಧ್ಯಕ್ಷ ಆಯೂಬ್ ಖಾನ್(Ayub Khan) ನೀಡಿದ ಅವಹೇಳನಕಾರಿ ಹೇಳಿಕೆಯಿಂದಾಗಿ ಆಯೂಬ್ ಖಾನ್ ವಿರುದ್ಧ ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆ ಮತ್ತು ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೈಸೂರಿನ ಸ್ಥಳೀಯ ನ್ಯೂಸ್ ಚಾನೆಲ್‌ನಲ್ಲಿ ಹಿಜಾಬ್ ಪರ ಹೇಳಿಕೆ ನೀಡುವಾಗ ನ್ಯೂ ಕಾಂಗ್ರೆಸ್ ಕಾರ್ಯಾಧ್ಯಕ್ಷ ಆಯೂಬ್ ಖಾನ್ ಗೊಮ್ಮಟೇಶ್ವರ ಮೂರ್ತಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಹೀಗಾಗಿ ಹೇಳಿಕೆ ಖಂಡಿಸಿ ದಿಗಂಬರ ಜೈನ ಸಮಾಜ ದೂರು ದಾಖಲಿಸಿದೆ.

ನ್ಯೂ ಇಂಡಿಯನ್ ಕಾಂಗ್ರೆಸ್ ಪಾರ್ಟಿ ಅಧ್ಯಕ್ಷನಿಂದ ಅವಹೇಳನಕಾರಿ ಹೇಳಿಕೆ ಮೈಸೂರಿನ ಸ್ಥಳೀಯ ನ್ಯೂಸ್ ಚಾನೆಲ್‌ನಲ್ಲಿ ಹಿಜಾಬ್ ಪರ ಹೇಳಿಕೆ ನೀಡುವಾಗ ಆಯೂಬ್ ಖಾನ್ ಗೊಮ್ಮಟೇಶ್ವರ ಮೂರ್ತಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಶ್ರವಣಬೆಳಗೊಳದ ಬೆಟ್ಟದ ಮೇಲೆ ಗೊಮ್ಮಟೇಶ್ವರನನ್ನು ನಿಲ್ಲಿಸಿದ್ದೀರಿ, ನೀವು ಮೊದಲು ಗೊಮ್ಮಟೇಶ್ವರಿಗೆ ಚಡ್ಡಿಹಾಕಿ. ನಿಮಗೇನಾದರೂ ಈ ದೇಶದ ಮೇಲೆ ಅನುಕಂಪ ಇದ್ದರೆ ಮೊದಲು ಅಶ್ಲೀಲವಾಗಿ ನಿಂತಿರತಕ್ಕಂತ ಗೊಮ್ಮಟೇಶ್ವರನಿಗೆ ಚಡ್ಡಿ ಹಾಕಿಸಿ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಅನಂತನಾಥಸ್ವಾಮಿ ದಿಗಂಬರ ಜೈನ ಸಮಾಜ ಆಕ್ರೋಶ ಹೊರ ಹಾಕಿದೆ.

ಈ ಹೇಳಿಕೆ ಜೈನ ಧರ್ಮದ ಅನುಯಾಯಿಯಗಳಾದ ನಮಗೆ ನೋವಾಗಿದೆ. ನಾವು ಆರಾಧಿಸುವ ಬಾಹುಬಲಿಸ್ವಾಮಿಗೆ ಅವಹೇಳನಕಾರಿಯಾಗಿ ನಿಂದಿಸಿರುವುದು ಸರಿಯಲ್ಲ. ನಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಮೈಸೂರು ನಿವಾಸಿ ಆಯೂಬ್ ಖಾನ್ ಮೇಲೆ ಧಾರ್ಮಿಕ ನಿಂದನೆ, ಜಾತಿನಿಂದನೆ ಅಪರಾಧದಡಿ ಕಾನೂನು ಕ್ರಮಕ್ಕೆ ಆಗ್ರಹಿಸುತ್ತೇವೆ ಎಂದು ಜೈನ ಸಮಾಜದ ಮುಖಂಡರು ಮಂಡ್ಯ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಮೈಸೂರಿನ ಸ್ಥಳೀಯ ಚಾನಲ್ನಲ್ಲಿ ಪ್ರಸಾರವಾದ ಬೈಟ್ ಆಧಾರದ ಮೇಲೆ‌ ದೂರು ದಾಖಲಾಗಿದೆ. ಅಲ್ಲದೆ ಮೈಸೂರಿನಲ್ಲೂ ಈ ಬಗ್ಗೆ ವಿರೋಧ ವ್ಯಕ್ತವಾಗಿದ್ದು ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿದೆ.

ಇದನ್ನೂ ಓದಿ: Vivo T1 5G: T ಸರಣಿಯಲ್ಲಿ ಹೊಸ ಫೋನ್ ಪರಿಚಯಿಸಿದ ವಿವೋ: ಬಜೆಟ್ ಪ್ರಿಯರು ಫುಲ್ ಫಿದಾ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ