ಮಂಡ್ಯ: ಮತ್ತೆ ಮುನ್ನೆಲೆಗೆ ಬಂದ ಜಾಮಿಯಾ ಮಸೀದಿ ವಿವಾದ, ಶ್ರೀರಂಗಪಟ್ಟಣದಲ್ಲಿ ಪೊಲೀಸ್ ಕಣ್ಗಾವಲು

ಮಂಡ್ಯದ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯ ವಿವಾದ ಇದೀಗ ಮತ್ತೆ ಮುನ್ನಲೆಗೆ‌ ಬಂದಿದೆ. ಜಾಮಿಯಾ ಮಸೀದಿ‌ ಜಾಗದಲ್ಲಿ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನ ಪುನರ್ ನಿರ್ಮಾಣ ಮಾಡುವ ಪ್ರತಿಜ್ಞೆ ಮಾಡಿ ಇಂದು ಹನುಮ ಮಾಲಧಾರಿಗಳು ಬೃಹತ್ ಸಂಕೀರ್ತನಾ ಯಾತ್ರೆಯನ್ನು ಮಾಡುತ್ತಿದ್ದಾರೆ. ಹೀಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ.

ಮಂಡ್ಯ: ಮತ್ತೆ ಮುನ್ನೆಲೆಗೆ ಬಂದ ಜಾಮಿಯಾ ಮಸೀದಿ ವಿವಾದ, ಶ್ರೀರಂಗಪಟ್ಟಣದಲ್ಲಿ ಪೊಲೀಸ್ ಕಣ್ಗಾವಲು
ಮತ್ತೆ ಮುನ್ನೆಲೆಗೆ ಬಂದ ಜಾಮಿಯಾ ಮಸೀದಿ ವಿವಾದ, ಶ್ರೀರಂಗಪಟ್ಟಣದಲ್ಲಿ ಪೊಲೀಸ್ ಕಣ್ಗಾವಲು
Edited By:

Updated on: Dec 03, 2025 | 6:57 AM

ಮಂಡ್ಯ, ಡಿಸೆಂಬರ್ 3: ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಇಂದು ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆ ನಡೆಯಲಿದೆ. ಮೂಡಲ ಬಾಗಿಲು ಶ್ರೀ ಆಂಜನೇಯಸ್ವಾಮಿ ದೇಗುಲ ಮರು ಸ್ಥಾಪನೆ ಸಂಕಲ್ಪದೊಂದಿಗೆ, ನಿಮಿಷಾಂಬ ದೇಗುಲದಿಂದ ಜಾಮಿಯಾ ಮಸೀದಿ (Jamia Masjid) ಮುಂಭಾಗದ ರಂಗನಾಥಸ್ವಾಮಿ ದೇಗುಲದ ತನಕ ಯಾತ್ರೆ ನಡೆಯಲಿದೆ.

ಎಲ್ಲೆಡೆ ಸಿಸಿ ಕ್ಯಾಮರಾ, ಸಾವಿರಾರು ಪೊಲೀಸರು

ಮಂಡ್ಯ, ಮೈಸೂರು, ಕೊಡಗು, ಹಾಸನ, ರಾಮನಗರ ಜಿಲ್ಲೆಗಳಿಂದ್ಲೂ ಹನುಮ ಮಾಲಾಧಾರಿಗಳು ಬರುತ್ತಿದ್ದಾರೆ. ಬಿಜೆಪಿ-ಜೆಡಿಎಸ್‌ ನಾಯಕರೂ ಯಾತ್ರೆಯಲ್ಲಿ ಭಾಗಿಯಾಗುತ್ತಿದ್ದಾರೆ. ಹೀಗಾಗಿ, ಬಿಗಿ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿದೆ. ದಾರಿ ಉದ್ದಕ್ಕೂ ಸಿಸಿ ಕ್ಯಾಮರಾ ಕಣ್ಗಾವಲು ಹಾಕಲಾಗಿದೆ. ಮುಂಜಾಗ್ರತಾ ಕ್ರಮವಾಗಿ 1,000ಕ್ಕೂ ಹೆಚ್ಚು ಪೊಲೀಸರು ಯಾತ್ರೆ ತೆರೆಳುವ ದಾರಿಯುದ್ದಕ್ಕೂ ಮಂಗಳವಾರ ಪಥಸಂಚಲನ ನಡೆಸಿದ್ದಾರೆ.

ಜಾಮಿಯಾ ಮಸೀದಿ ವಿವಾದ ಹಿನ್ನೆಲೆ

ಶ್ರೀರಂಗಪಟ್ಟಣದಲ್ಲಿ ಇರುವ ಜಾಮಿಯಾ ಮಸೀದಿ ಜಾಗದಲ್ಲಿ ಹಿಂದೆ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನ ಇತ್ತು. ಆ ದೇವಸ್ಥಾನವನ್ನು ಕೆಡವಿ ಟಿಪ್ಪು ಸುಲ್ತಾನ್ ಜಾಮಿಯಾ ಮಸೀದಿ ನಿರ್ಮಾಣ ಮಾಡಿದ್ದ ಎನ್ನಲಾಗಿದೆ. ಈ ಪ್ರತಿಪಾದನೆಗೆ ಇಲ್ಲಿರುವ ಕಲ್ಯಾಣಿ, ನಾಗರ ಕಲ್ಲುಗಳು ಸೇರಿದಂತೆ ಇತರ ಕುರುಹುಗಳೇ ಸಾಕ್ಷಿಯಾಗಿವೆ. ಹೀಗಾಗಿ ಜಾಮಿಯಾ ಮಸೀದಿಯನ್ನು ಕೆಡವಿ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವನ್ನು ಮರು ಸ್ಥಾಪನೆ ಮಾಡಲೇಬೇಕೆಂದು ಸಂಕಲ್ಪ ಮಾಡಿ ಹಲವು ವರ್ಷಗಳಿಂದ ಹಿಂದೂ ಜಾಗರಣ ವೇದಿಕೆ ಹಾಗೂ ಹಿಂದೂ ಪರ ಸಂಘಟನೆಗಳು ಹನುಮ ಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆಯನ್ನು ಮಾಡಿಕೊಂಡು ಬಂದಿವೆ. ಅದೇ ರೀತಿ ಇಂದೂ ಸಹ ಶ್ರೀರಂಗಪಟ್ಟಣದಲ್ಲಿ ಬೃಹತ್ ಸಂಕೀರ್ತನಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ಹನುಮ‌ಮಾಲೆ ವಿಸರ್ಜನೆ ಕಾರ್ಯಕ್ರಮಕ್ಕೆ ಅಣಿಯಾದ ಅಂಜನಾದ್ರಿ; ಸಿದ್ಧತೆ ಹೇಗಿದೆ?

ಒಟ್ಟಿನಲ್ಲಿ ಪ್ರತಿ ವರ್ಷದಂತೆ ಇಂದೂ ಸಹ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನ ಮರು ಸ್ಥಾಪನೆಗೆ ಸಂಕಲ್ಪ ಮಾಡಿ ಹನುಮ ಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆ ಜರುಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
Follow Us