AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ ಫಾರಂ ಕೊಡದಿದ್ದಕ್ಕೆ ಜೆಡಿಎಸ್ ಅಭ್ಯರ್ಥಿ ಅಸಮಾಧಾನ, ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧೆ ಮಾಡ್ತಾರಾ?

ನಾಮಪತ್ರ ಸಲ್ಲಿಕೆ ಅಂತಿಮ ದಿನಕ್ಕೆ ಕೇವಲ ಮೂರು ದಿನ ಮಾತ್ರ ಬಾಕಿ ಇದ್ದು ಬಿ ಫಾರಂ ಕೊಡದ ಪಕ್ಷದ ವರಿಷ್ಠರ ವಿರುದ್ದ ಶಾಸಕ ಎಂ ಶ್ರೀನಿವಾಸ್ ಅಸಮಾಧಾನ ಹೊರ ಹಾಕಿದ್ದಾರೆ.

ಬಿ ಫಾರಂ ಕೊಡದಿದ್ದಕ್ಕೆ ಜೆಡಿಎಸ್ ಅಭ್ಯರ್ಥಿ ಅಸಮಾಧಾನ, ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧೆ ಮಾಡ್ತಾರಾ?
ಶಾಸಕ ಎಂ ಶ್ರೀನಿವಾಸ್
ಆಯೇಷಾ ಬಾನು
|

Updated on:Apr 17, 2023 | 3:03 PM

Share

ಮಂಡ್ಯ: ಕರ್ನಾಟಕ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ದಿನಗಳು ಹತ್ತಿರವಾಗುತ್ತಿದ್ದು ರಾಜಕೀಯ ನಾಯಕರು ಫುಲ್ ಅಲರ್ಟ್ ಆಗಿದ್ದಾರೆ. ಏಪ್ರಿಲ್ 17ರ ಶುಭ ಸೋಮವಾರದಂದು ಅನೇಕ ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸಿ ಮುಂದಿನ ಕಾರ್ಯಕ್ಕೆ ತಯಾರಿ ನಡೆಸಿದ್ದಾರೆ. ಇನ್ನು ನಾಮಪತ್ರ ಸಲ್ಲಿಕೆ ಅಂತಿಮ ದಿನಕ್ಕೆ ಕೇವಲ ಮೂರು ದಿನ ಮಾತ್ರ ಬಾಕಿ ಇದ್ದು ಬಿ ಫಾರಂ ಕೊಡದ ಪಕ್ಷದ ವರಿಷ್ಠರ ವಿರುದ್ದ ಶಾಸಕ ಎಂ ಶ್ರೀನಿವಾಸ್(M Srinivas) ಅಸಮಾಧಾನ ಹೊರ ಹಾಕಿದ್ದಾರೆ. ಇದರ ನಡುವೆ ಮಂಡ್ಯದಿಂದ ಹೆಚ್​ಡಿ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂಬ ಚರ್ಚೆಗಳು ಶುರುವಾಗಿವೆ.

ಬಿ ಫಾರಂ ನನಗೆ ಕೊಡಿ ಇಲ್ಲವೇ ನೀವೆ ಬಂದು ಕ್ಷೇತ್ರದಲ್ಲಿ ನಿಲ್ಲುವಂತೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಿದ್ದಾರೆ. ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿದ ಜೆಡಿಎಸ್ ಶಾಸಕ ಎಂ‌.ಶ್ರೀನಿವಾಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನನ್ನ ಹೆಸರು ಘೋಷಣೆ ಮಾಡಿದ್ದೀರಿ ಆದರೆ ಬಿ ಫಾರಂ ಇನ್ನು ಕೊಡದೆ ಹಾಗೆ ಇಟ್ಟುಕೊಂಡಿದ್ದೀರಿ. ನನಗೆ ಟಿಕೆಟ್ ಕೊಡದಿದ್ರು ಪರವಾಗಿಲ್ಲ, ಕ್ಷೇತ್ರಕ್ಕೆ ನೀವೆ ಬಂದು ನಿಲ್ಲಿ. ನೀವು ಬಂದು ನಿಂತರೆ ಮಂಡ್ಯ ಕ್ಷೇತ್ರ ಹಾಸನ, ತುಮಕೂರು ರೀತಿ ಅಭಿವೃದ್ಧಿ ಆಗುತ್ತೆ. ನಾವೇ ಎಲ್ಲಾ ನಾಯಕರು ನಾವೇ ಬಂದು ನಿಮಗೆ ಆಹ್ವಾನ ಕೊಟ್ಟಿದ್ದೀವಿ. ನೀವು ನಿಂತುಕೊಂಡ್ರೆ ಪಕ್ಷದ ತತ್ವ ಸಿದ್ದಾಂತಕ್ಕೆ ನಾನು ಬದ್ದನಾಗಿರ್ತಿನಿ. ನೀವು ನಿಂತುಕೊಳ್ಳಿ ಇಲ್ಲ ನನಗೆ ಬಿ ಫಾರಂ ಕೊಡಿ. ನೀವು ನಿಂತ್ರೆ ನಾನು ಹಿಂದೆ ಸುರಿಯುತ್ತೇನೆ, ಬೇರೆಯವರಿಗೆ ಕೊಟ್ರೆ ನಾನೇ ಅಭ್ಯರ್ಥಿ ಆಗ್ತಿನಿ ಎಂದು ಪಕ್ಷದ ವರಿಷ್ಠ ನಾಯಕ ಹೆಚ್​ಡಿ ಕುಮಾರಸ್ವಾಮಿ ವಿರುದ್ದ ಜೆಡಿಎಸ್ ಶಾಸಕ ಎಂ.ಶ್ರೀನಿವಾಸ್ ಅಸಮಾಧಾನ ಹೊರ ಹಾಕಿದ್ದಾರೆ.

ಇದನ್ನೂ ಓದಿ: ವರಿಷ್ಠರು ಸೂಚಿಸಿದರೆ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ: ಸುಮಲತಾ ಅಂಬರೀಶ್ ಅಚ್ಚರಿ ಹೇಳಿಕೆ

ಇನ್ನು ಮತ್ತೊಂದೆಡೆ ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20ರ ವರೆಗೆ ಮಾತ್ರ ಅವಕಾಶವಿದ್ದು ಮೇಲುಕೋಟೆ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಇಂದ್ರೇಶ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಮದ್ದೂರು ಬಿಜೆಪಿ ಅಭ್ಯರ್ಥಿಯಾಗಿ ಎಸ್.ಪಿ.ಸ್ವಾಮಿ ಕೂಡ ನಾಮಪತ್ರ ಸಲ್ಲಿಸಿದ್ದಾರೆ. ಹಾಗೂ ನಾಗಮಂಗಲ ಜೆಡಿಎಸ್​ ಅಭ್ಯರ್ಥಿ ಕೆ.ಸುರೇಶ್​ ಗೌಡ ಮಂಡ್ಯ ಜಿಲ್ಲೆ ನಾಗಮಂಗಲದ ಮಿನಿ ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಶಾಸಕ ಎಂ ಶ್ರೀನಿವಾಸ್ ಅವರಿಗೆ ಜೆಡಿಎಸ್ ಪಕ್ಷ ಇನ್ನೂ ಕೂಡ ಬಿ ಫಾರಂ ನೀಡಿಲ್ಲ. ಹಾಗಾಗಿ ನಾಮಪತ್ರ ಸಲ್ಲಿಸಲು ತಡವಾಗುತ್ತಿದ್ದು ಶ್ರೀನಿವಾಸ್ ಅವರು ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧೆ ಮಾಡ್ತಾರಾ?

ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎಂಬುವುದು ಖಚಿತವಾಗಿದೆ. ಆದ್ರೆ ಮಂಡ್ಯದಿಂದಲೂ ಚುನಾವಣೆ ಎದುರಿಸಲಿದ್ದಾರೆ ಎಂಬ ಮಾತುಗಳು ಹೇಳಿ ಬರುತ್ತಿವೆ. ಇದರ ನಡುವೆ ಶಾಸಕ ಎಂ ಶ್ರೀನಿವಾಸ್​ಗೆ ಬಿ ಫಾರಂ ನೀಡದೆ ಪೆಂಡಿಂಗ್ ಇಟ್ಟಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿದೆ. ಜೊತೆಗೆ ಎಂ ಶ್ರೀನಿವಾಸ್ ಅವರು ಕೂಡ ಮಂಡ್ಯದಿಂದ ನಿಲ್ಲುವಂತೆ ಆಹ್ವಾನ ನೀಡಿದ್ದಾರೆ.

ಕರ್ನಾಟಕಕ್ಕೆ ಸಂಬಂಧಿಸಿದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:03 pm, Mon, 17 April 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!