AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಬದಿಯಲ್ಲಿ ನೂರಾರು ಕಾರ್ಯಕರ್ತರೊಂದಿಗೆ ಚಹಾ ಸವಿದ ಹೆಚ್​ಡಿ ಕುಮಾರಸ್ವಾಮಿ

HD Kumaraswamy: ಬೆಂಗಳೂರಿಗೆ ತೆರಳುವ ಮಾರ್ಗಮಧ್ಯದಲ್ಲಿ ಟೀ ಸೇವಿಸಿದ್ದಾರೆ. ಟೀ ಕುಡಿದು ಕಾರ್ಯಕರ್ತರ ಕುಶಲೋಪರಿ ವಿಚಾರಿಸಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿಗೆ ಶಾಸಕ ಸುರೇಶ್ ಗೌಡ, ಎಂಎಲ್​ಸಿ ಅಪ್ಪಾಜಿಗೌಡ ಸಾಥ್ ಕೊಟ್ಟಿದ್ದಾರೆ.

ರಸ್ತೆ ಬದಿಯಲ್ಲಿ ನೂರಾರು ಕಾರ್ಯಕರ್ತರೊಂದಿಗೆ ಚಹಾ ಸವಿದ ಹೆಚ್​ಡಿ ಕುಮಾರಸ್ವಾಮಿ
ಚಹಾ ಸವಿದ ಹೆಚ್​ಡಿ ಕುಮಾರಸ್ವಾಮಿ
TV9 Web
| Edited By: |

Updated on:Sep 05, 2021 | 3:22 PM

Share

ಮಂಡ್ಯ: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ರಸ್ತೆ ಬದಿಯಲ್ಲಿ, ನೂರಾರು ಕಾರ್ಯಕರ್ತರ ಜೊತೆಗೂಡಿ ಚಹಾ ಸವಿದಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲದ ರಸ್ತೆ ಬದಿ ಟೀ ಕ್ಯಾಂಟೀನ್​ನಲ್ಲಿ ಕುಮಾರಸ್ವಾಮಿ ಟೀ ಸೇವನೆ ಮಾಡಿದ್ದಾರೆ. ಬೆಂಗಳೂರಿಗೆ ತೆರಳುವ ಮಾರ್ಗಮಧ್ಯದಲ್ಲಿ ಟೀ ಸೇವಿಸಿದ್ದಾರೆ. ಟೀ ಕುಡಿದು ಕಾರ್ಯಕರ್ತರ ಕುಶಲೋಪರಿ ವಿಚಾರಿಸಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿಗೆ ಶಾಸಕ ಸುರೇಶ್ ಗೌಡ, ಎಂಎಲ್​ಸಿ ಅಪ್ಪಾಜಿಗೌಡ ಸಾಥ್ ಕೊಟ್ಟಿದ್ದಾರೆ. ಈ ವೇಳೆ ಕುಮಾರಸ್ವಾಮಿ ಜೊತೆ ಸೆಲ್ಫಿ ತೆಗೆದುಕೊಳ್ಳಲು ಕಾರ್ಯಕರ್ತರು ಮುಗಿಬಿದ್ದಿದ್ದಾರೆ.

ಅಪಘಾತದಲ್ಲಿ ಮಕ್ಕಳಿಬ್ಬರು ಸೇರಿ ಮೂವರು ಸಾವು ಹಿನ್ನೆಲೆಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಕಾರ್ಯಕರ್ತನ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಈ ವೇಳೆ, ಕುಮಾರಸ್ವಾಮಿ ಭಾವುಕರಾಗಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಹೊಣಕೆರೆ ಗ್ರಾಮದಲ್ಲಿ ಕಾರ್ಯಕರ್ತನ ಅಂತಿಮ ದರ್ಶನವನ್ನು ಕುಮಾರಸ್ವಾಮಿ ಪಡೆದುಕೊಂಡಿದ್ದು, ಆ ವೇಳೆ ಅವರು ಭಾವುಕರಾಗಿದ್ದಾರೆ.

ನಿನ್ನೆ ರಾತ್ರಿ ನಿಂತಿದ್ದ ಲಾರಿಗೆ ಸ್ಕೂಟಿ ಡಿಕ್ಕಿ ಹೊಡೆದು ಜೆಡಿಎಸ್ ಮುಖಂಡ ಆನಂದ್ ಕುಮಾರ್ ಸಾವನ್ನಪ್ಪಿದ್ದರು. ಸ್ಕೂಟಿಯಲ್ಲಿ ಇದ್ದ ಇಬ್ಬರು ಮೊಮ್ಮಕ್ಕಳು ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಈ ದುರ್ಘಟನೆಗೆ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಇಂದು ಅಂತ್ಯಕ್ರಿಯೆಗೂ ಮುನ್ನ ಅಂತಿಮ ದರ್ಶನ ಪಡೆದಿದ್ದಾರೆ. ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಆನಂದ್‌ಕುಮಾರ್. ಅವರನ್ನು ಕಳೆದುಕೊಂಡು ತುಂಬಾ ನೋವು ಉಂಟಾಗಿದೆ. ಆ ಪುಟ್ಟ ಮಕ್ಕಳು ಸಾವನ್ನಪ್ಪಿರುವುದು ಬಹಳ ದುಃಖ ಎನಿಸುತ್ತಿದೆ. ದೇವರು ಯಾಕೆ ಇಷ್ಟು ಬೇಗ ಕರೆದುಕೊಳ್ಳುತ್ತಾನೆ ಎಂದು ನೋವಾಗುತ್ತದೆ ಎಂದು ಅಂತಿಮ‌ ದರ್ಶನದ ಬಳಿಕ ಕುಮಾರಸ್ವಾಮಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಸುಮಲತಾ ಮನೆ ನಿರ್ಮಾಣ: ಮೈಸೂರಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಏನಂದ್ರು?

ಇದನ್ನೂ ಓದಿ: ಬಾಗೇಪಲ್ಲಿ ಕ್ಷೇತ್ರಕ್ಕೆ ಟಿಕೆಟ್ ಘೋಷಿಸಿದ ಹೆಚ್​​ಡಿ ಕುಮಾರಸ್ವಾಮಿ! ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿಸಿದ ಜೆಡಿಎಸ್ ಮುಖಂಡ

Published On - 3:19 pm, Sun, 5 September 21

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?