AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಬದಿಯಲ್ಲಿ ನೂರಾರು ಕಾರ್ಯಕರ್ತರೊಂದಿಗೆ ಚಹಾ ಸವಿದ ಹೆಚ್​ಡಿ ಕುಮಾರಸ್ವಾಮಿ

HD Kumaraswamy: ಬೆಂಗಳೂರಿಗೆ ತೆರಳುವ ಮಾರ್ಗಮಧ್ಯದಲ್ಲಿ ಟೀ ಸೇವಿಸಿದ್ದಾರೆ. ಟೀ ಕುಡಿದು ಕಾರ್ಯಕರ್ತರ ಕುಶಲೋಪರಿ ವಿಚಾರಿಸಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿಗೆ ಶಾಸಕ ಸುರೇಶ್ ಗೌಡ, ಎಂಎಲ್​ಸಿ ಅಪ್ಪಾಜಿಗೌಡ ಸಾಥ್ ಕೊಟ್ಟಿದ್ದಾರೆ.

ರಸ್ತೆ ಬದಿಯಲ್ಲಿ ನೂರಾರು ಕಾರ್ಯಕರ್ತರೊಂದಿಗೆ ಚಹಾ ಸವಿದ ಹೆಚ್​ಡಿ ಕುಮಾರಸ್ವಾಮಿ
ಚಹಾ ಸವಿದ ಹೆಚ್​ಡಿ ಕುಮಾರಸ್ವಾಮಿ
TV9 Web
| Edited By: |

Updated on:Sep 05, 2021 | 3:22 PM

Share

ಮಂಡ್ಯ: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ರಸ್ತೆ ಬದಿಯಲ್ಲಿ, ನೂರಾರು ಕಾರ್ಯಕರ್ತರ ಜೊತೆಗೂಡಿ ಚಹಾ ಸವಿದಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲದ ರಸ್ತೆ ಬದಿ ಟೀ ಕ್ಯಾಂಟೀನ್​ನಲ್ಲಿ ಕುಮಾರಸ್ವಾಮಿ ಟೀ ಸೇವನೆ ಮಾಡಿದ್ದಾರೆ. ಬೆಂಗಳೂರಿಗೆ ತೆರಳುವ ಮಾರ್ಗಮಧ್ಯದಲ್ಲಿ ಟೀ ಸೇವಿಸಿದ್ದಾರೆ. ಟೀ ಕುಡಿದು ಕಾರ್ಯಕರ್ತರ ಕುಶಲೋಪರಿ ವಿಚಾರಿಸಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿಗೆ ಶಾಸಕ ಸುರೇಶ್ ಗೌಡ, ಎಂಎಲ್​ಸಿ ಅಪ್ಪಾಜಿಗೌಡ ಸಾಥ್ ಕೊಟ್ಟಿದ್ದಾರೆ. ಈ ವೇಳೆ ಕುಮಾರಸ್ವಾಮಿ ಜೊತೆ ಸೆಲ್ಫಿ ತೆಗೆದುಕೊಳ್ಳಲು ಕಾರ್ಯಕರ್ತರು ಮುಗಿಬಿದ್ದಿದ್ದಾರೆ.

ಅಪಘಾತದಲ್ಲಿ ಮಕ್ಕಳಿಬ್ಬರು ಸೇರಿ ಮೂವರು ಸಾವು ಹಿನ್ನೆಲೆಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಕಾರ್ಯಕರ್ತನ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಈ ವೇಳೆ, ಕುಮಾರಸ್ವಾಮಿ ಭಾವುಕರಾಗಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಹೊಣಕೆರೆ ಗ್ರಾಮದಲ್ಲಿ ಕಾರ್ಯಕರ್ತನ ಅಂತಿಮ ದರ್ಶನವನ್ನು ಕುಮಾರಸ್ವಾಮಿ ಪಡೆದುಕೊಂಡಿದ್ದು, ಆ ವೇಳೆ ಅವರು ಭಾವುಕರಾಗಿದ್ದಾರೆ.

ನಿನ್ನೆ ರಾತ್ರಿ ನಿಂತಿದ್ದ ಲಾರಿಗೆ ಸ್ಕೂಟಿ ಡಿಕ್ಕಿ ಹೊಡೆದು ಜೆಡಿಎಸ್ ಮುಖಂಡ ಆನಂದ್ ಕುಮಾರ್ ಸಾವನ್ನಪ್ಪಿದ್ದರು. ಸ್ಕೂಟಿಯಲ್ಲಿ ಇದ್ದ ಇಬ್ಬರು ಮೊಮ್ಮಕ್ಕಳು ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಈ ದುರ್ಘಟನೆಗೆ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಇಂದು ಅಂತ್ಯಕ್ರಿಯೆಗೂ ಮುನ್ನ ಅಂತಿಮ ದರ್ಶನ ಪಡೆದಿದ್ದಾರೆ. ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಆನಂದ್‌ಕುಮಾರ್. ಅವರನ್ನು ಕಳೆದುಕೊಂಡು ತುಂಬಾ ನೋವು ಉಂಟಾಗಿದೆ. ಆ ಪುಟ್ಟ ಮಕ್ಕಳು ಸಾವನ್ನಪ್ಪಿರುವುದು ಬಹಳ ದುಃಖ ಎನಿಸುತ್ತಿದೆ. ದೇವರು ಯಾಕೆ ಇಷ್ಟು ಬೇಗ ಕರೆದುಕೊಳ್ಳುತ್ತಾನೆ ಎಂದು ನೋವಾಗುತ್ತದೆ ಎಂದು ಅಂತಿಮ‌ ದರ್ಶನದ ಬಳಿಕ ಕುಮಾರಸ್ವಾಮಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಸುಮಲತಾ ಮನೆ ನಿರ್ಮಾಣ: ಮೈಸೂರಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಏನಂದ್ರು?

ಇದನ್ನೂ ಓದಿ: ಬಾಗೇಪಲ್ಲಿ ಕ್ಷೇತ್ರಕ್ಕೆ ಟಿಕೆಟ್ ಘೋಷಿಸಿದ ಹೆಚ್​​ಡಿ ಕುಮಾರಸ್ವಾಮಿ! ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿಸಿದ ಜೆಡಿಎಸ್ ಮುಖಂಡ

Published On - 3:19 pm, Sun, 5 September 21

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ