AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಬದಿಯಲ್ಲಿ ನೂರಾರು ಕಾರ್ಯಕರ್ತರೊಂದಿಗೆ ಚಹಾ ಸವಿದ ಹೆಚ್​ಡಿ ಕುಮಾರಸ್ವಾಮಿ

HD Kumaraswamy: ಬೆಂಗಳೂರಿಗೆ ತೆರಳುವ ಮಾರ್ಗಮಧ್ಯದಲ್ಲಿ ಟೀ ಸೇವಿಸಿದ್ದಾರೆ. ಟೀ ಕುಡಿದು ಕಾರ್ಯಕರ್ತರ ಕುಶಲೋಪರಿ ವಿಚಾರಿಸಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿಗೆ ಶಾಸಕ ಸುರೇಶ್ ಗೌಡ, ಎಂಎಲ್​ಸಿ ಅಪ್ಪಾಜಿಗೌಡ ಸಾಥ್ ಕೊಟ್ಟಿದ್ದಾರೆ.

ರಸ್ತೆ ಬದಿಯಲ್ಲಿ ನೂರಾರು ಕಾರ್ಯಕರ್ತರೊಂದಿಗೆ ಚಹಾ ಸವಿದ ಹೆಚ್​ಡಿ ಕುಮಾರಸ್ವಾಮಿ
ಚಹಾ ಸವಿದ ಹೆಚ್​ಡಿ ಕುಮಾರಸ್ವಾಮಿ
TV9 Web
| Edited By: |

Updated on:Sep 05, 2021 | 3:22 PM

Share

ಮಂಡ್ಯ: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ರಸ್ತೆ ಬದಿಯಲ್ಲಿ, ನೂರಾರು ಕಾರ್ಯಕರ್ತರ ಜೊತೆಗೂಡಿ ಚಹಾ ಸವಿದಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲದ ರಸ್ತೆ ಬದಿ ಟೀ ಕ್ಯಾಂಟೀನ್​ನಲ್ಲಿ ಕುಮಾರಸ್ವಾಮಿ ಟೀ ಸೇವನೆ ಮಾಡಿದ್ದಾರೆ. ಬೆಂಗಳೂರಿಗೆ ತೆರಳುವ ಮಾರ್ಗಮಧ್ಯದಲ್ಲಿ ಟೀ ಸೇವಿಸಿದ್ದಾರೆ. ಟೀ ಕುಡಿದು ಕಾರ್ಯಕರ್ತರ ಕುಶಲೋಪರಿ ವಿಚಾರಿಸಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿಗೆ ಶಾಸಕ ಸುರೇಶ್ ಗೌಡ, ಎಂಎಲ್​ಸಿ ಅಪ್ಪಾಜಿಗೌಡ ಸಾಥ್ ಕೊಟ್ಟಿದ್ದಾರೆ. ಈ ವೇಳೆ ಕುಮಾರಸ್ವಾಮಿ ಜೊತೆ ಸೆಲ್ಫಿ ತೆಗೆದುಕೊಳ್ಳಲು ಕಾರ್ಯಕರ್ತರು ಮುಗಿಬಿದ್ದಿದ್ದಾರೆ.

ಅಪಘಾತದಲ್ಲಿ ಮಕ್ಕಳಿಬ್ಬರು ಸೇರಿ ಮೂವರು ಸಾವು ಹಿನ್ನೆಲೆಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಕಾರ್ಯಕರ್ತನ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಈ ವೇಳೆ, ಕುಮಾರಸ್ವಾಮಿ ಭಾವುಕರಾಗಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಹೊಣಕೆರೆ ಗ್ರಾಮದಲ್ಲಿ ಕಾರ್ಯಕರ್ತನ ಅಂತಿಮ ದರ್ಶನವನ್ನು ಕುಮಾರಸ್ವಾಮಿ ಪಡೆದುಕೊಂಡಿದ್ದು, ಆ ವೇಳೆ ಅವರು ಭಾವುಕರಾಗಿದ್ದಾರೆ.

ನಿನ್ನೆ ರಾತ್ರಿ ನಿಂತಿದ್ದ ಲಾರಿಗೆ ಸ್ಕೂಟಿ ಡಿಕ್ಕಿ ಹೊಡೆದು ಜೆಡಿಎಸ್ ಮುಖಂಡ ಆನಂದ್ ಕುಮಾರ್ ಸಾವನ್ನಪ್ಪಿದ್ದರು. ಸ್ಕೂಟಿಯಲ್ಲಿ ಇದ್ದ ಇಬ್ಬರು ಮೊಮ್ಮಕ್ಕಳು ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಈ ದುರ್ಘಟನೆಗೆ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಇಂದು ಅಂತ್ಯಕ್ರಿಯೆಗೂ ಮುನ್ನ ಅಂತಿಮ ದರ್ಶನ ಪಡೆದಿದ್ದಾರೆ. ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಆನಂದ್‌ಕುಮಾರ್. ಅವರನ್ನು ಕಳೆದುಕೊಂಡು ತುಂಬಾ ನೋವು ಉಂಟಾಗಿದೆ. ಆ ಪುಟ್ಟ ಮಕ್ಕಳು ಸಾವನ್ನಪ್ಪಿರುವುದು ಬಹಳ ದುಃಖ ಎನಿಸುತ್ತಿದೆ. ದೇವರು ಯಾಕೆ ಇಷ್ಟು ಬೇಗ ಕರೆದುಕೊಳ್ಳುತ್ತಾನೆ ಎಂದು ನೋವಾಗುತ್ತದೆ ಎಂದು ಅಂತಿಮ‌ ದರ್ಶನದ ಬಳಿಕ ಕುಮಾರಸ್ವಾಮಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಸುಮಲತಾ ಮನೆ ನಿರ್ಮಾಣ: ಮೈಸೂರಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಏನಂದ್ರು?

ಇದನ್ನೂ ಓದಿ: ಬಾಗೇಪಲ್ಲಿ ಕ್ಷೇತ್ರಕ್ಕೆ ಟಿಕೆಟ್ ಘೋಷಿಸಿದ ಹೆಚ್​​ಡಿ ಕುಮಾರಸ್ವಾಮಿ! ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿಸಿದ ಜೆಡಿಎಸ್ ಮುಖಂಡ

Published On - 3:19 pm, Sun, 5 September 21

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ