AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಜಿಲ್ಲೆಯಲ್ಲಿ ಶುರುವಾಯ್ತು ಜೆಡಿಎಸ್ V/S ಬಿಜೆಪಿ ಫೈಟ್: ನಾರಾಯಣಗೌಡ ವಿರುದ್ಧ JDS ಜಿಲ್ಲಾಧ್ಯಕ್ಷ ರಮೇಶ್ ವಾಗ್ದಾಳಿ

ಸಚಿವ ನಾರಾಯಣಗೌಡ ವಿರುದ್ಧ ವಾಗ್ದಾಳಿ ನಡೆಸಿರುವ ಮಂಡ್ಯ ಜೆಡಿಎಸ್‌ ಜಿಲ್ಲಾಧ್ಯಕ್ಷ ರಮೇಶ್​ಗೆ ಸಚಿವ ನಾರಾಯಣ ಗೌಡರಿಂದ ಖಡಕ್ ವಾರ್ನಿಂಗ್ ನೀಡಿದ್ದು, ಜೆಡಿಎಸ್ ಜಿಲ್ಲಾಧ್ಯಕ್ಷನಿಗೆ‌ ಕ್ಲಾಸ್ ತೆಗೆದುಕೊಂಡರು.

ಮಂಡ್ಯ ಜಿಲ್ಲೆಯಲ್ಲಿ ಶುರುವಾಯ್ತು ಜೆಡಿಎಸ್ V/S ಬಿಜೆಪಿ ಫೈಟ್: ನಾರಾಯಣಗೌಡ ವಿರುದ್ಧ JDS ಜಿಲ್ಲಾಧ್ಯಕ್ಷ ರಮೇಶ್ ವಾಗ್ದಾಳಿ
ಸಚಿವ ನಾರಾಯಣಗೌಡ, ಜೆಡಿಎಸ್‌ ಜಿಲ್ಲಾಧ್ಯಕ್ಷ ರಮೇಶ್
TV9 Web
| Edited By: |

Updated on: May 30, 2022 | 12:12 PM

Share

ಮಂಡ್ಯ: ಎಂಎಲ್‌ಸಿ ಚುನಾವಣೆಯಲ್ಲಿ ಜೆಡಿಎಸ್ ಸೋಲಲು ಸಚಿವ ನಾರಾಯಣಗೌಡ ಕಾರಣ. ನಾರಾಯಣಗೌಡನ ಹಿಂಬಾಗಿಲ‌ ರಾಜಕೀಯದಿಂದ ಸೋಲಾಯಿತು. ಹೇಡಿ ಕೆಲಸ ಮಾಡ್ಕೋಂಡು ಇದ್ದಾರೆ, ಮಾನ ಮರ್ಯಾದೆ ಇದೀಯಾ ಎಂದು ಮಂಡ್ಯದ ಖಾಸಗಿ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಸಚಿವ ನಾರಾಯಣಗೌಡ ವಿರುದ್ಧ ಜೆಡಿಎಸ್‌ ಜಿಲ್ಲಾಧ್ಯಕ್ಷ ರಮೇಶ್ ವಾಗ್ದಾಳಿ ಮಾಡಿದರು. ಕಳೆದ ಎಂಎಲ್‌ಸಿ ಚುನಾವಣೆಯಲ್ಲಿ ಮಾಡಿದ ರೀತಿ ಈ ಎಂಎಲ್‌ಸಿ ಚುನಾವಣೆಯಲ್ಲಿ ಮಾಡೋಕೆ ಆಗಲ್ಲ. ತಾಕತ್ತು ಇದರೆ ಈ ಚುನಾವಣೆಯಲ್ಲಿ ಹಾಗೆ ಮಾಡಿ. ಜೆಡಿಎಸ್‌ನಲ್ಲಿರುವವರು ಅಪ್ಪನಿಗೆ ಹುಟ್ಟಿದ ಮಕ್ಕಳು ಎಂದು ಹೇಳಿದರು. ಈ ಹಿನ್ನೆಲೆ ಜಿಲ್ಲೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಮತ್ತು ಸಚಿವರ ನಡುವೆ ವಾಕ್ ಸಮರ ಉಂಟಾಗಿದ್ದು, ಜೆಡಿಎಸ್ v/s ಬಿಜೆಪಿ ಫೈಟ್ ಶುರುವಾದಂತ್ತಾಗಿದೆ.

ಇದನ್ನೂ ಓದಿ: ಮೊಸಳೆ ರೀತಿ ಹೋಲುವ ದ್ವೀಪ, ಚಿತ್ರ ನೋಡಿ ಚಕಿತಗೊಂಡ ನೆಟ್ಟಿಗರು

ಇನ್ನೂ ಸಚಿವ ನಾರಾಯಣಗೌಡ ವಿರುದ್ಧ ವಾಗ್ದಾಳಿ ನಡೆಸಿರುವ ಮಂಡ್ಯ ಜೆಡಿಎಸ್‌ ಜಿಲ್ಲಾಧ್ಯಕ್ಷ ರಮೇಶ್​ಗೆ ಸಚಿವ ನಾರಾಯಣ ಗೌಡರಿಂದ ಖಡಕ್ ವಾರ್ನಿಂಗ್ ನೀಡಿದ್ದು, ಜೆಡಿಎಸ್ ಜಿಲ್ಲಾಧ್ಯಕ್ಷನಿಗೆ‌ ಕ್ಲಾಸ್ ತೆಗೆದುಕೊಂಡರು. ನಿನ್ನ ಕುಟುಂಬದ ಒಬ್ಬ ಕಳ್ಳತನ ಮಾಡಿ ಸಸ್ಪೆಂಡ್ ಆಗಿದ್ದರು. ಆಗ ನೀನು ನನ್ನ ಕಾಲು ಹಿಡಿದುಕೊಂಡಿದ್ದು ಮರೆತು ಬಿಟ್ಟಾ. ಏಯ್ ಬಾ ತಾಕತ್ ಇದರೆ ಒಂದು ಚುನಾವಣೆ ಎದುರಿಸು. 3 ಗಂಟೆ ಟ್ರೈನ್‌ಗೆ ಹೋಗಿ ದೇವೇಗೌಡರ ಮನೆಗೆ ಹೋಗಿ ಚಾಡಿ ಹೇಳೋದು ನಿನ್ನ ಕೆಲಸ. ನಾನು ಯಾರಿಗೂ ಹೆದರಿಲ್ಲ, ಬಗ್ಗಿಲ್ಲ. ನನ್ನ ಬಗ್ಗೆ ಮಾತಾಡಬೇಕು ಅಂದ್ರೆ ಹುಷಾರ್, ನಿನ್ನದೆಲ್ಲಾ ಓಪನ್ ಮಾಡುತ್ತೇನೆ ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷನಿಗೆ ಸಚಿವ ನಾರಾಯಣಗೌಡ ವಾರ್ನ್ ಮಾಡಿದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ