AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಕಂಗನಾ ರಣಾವತ್ ಬಾಡಿಗಾರ್ಡ್ ಮಂಡ್ಯದಲ್ಲಿ ಅರೆಸ್ಟ್​

ಸಂತ್ರಸ್ತ ಯುವತಿಯ ಜೊತೆ ಕುಮಾರ್​ ಹೆಗಡೆಗೆ ಕಳೆದ 8 ವರ್ಷಗಳ ಹಿಂದೆ ಪರಿಚಯ ಬೆಳೆದಿತ್ತು. ಕಳೆದ ವರ್ಷ ಜೂನ್​ನಲ್ಲಿ ಆತ ಮದುವೆ ಪ್ರಪೋಸ್​ ಕೂಡ ಮಾಡಿದ್ದ. ಅದಕ್ಕೆ ಯುವತಿಯಿಂದ ಸಮ್ಮತಿ ಸಿಕ್ಕಿತ್ತು. ಬಳಿಕ ಆತ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಲು ಶುರುಮಾಡಿದ್ದ.

ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಕಂಗನಾ ರಣಾವತ್ ಬಾಡಿಗಾರ್ಡ್ ಮಂಡ್ಯದಲ್ಲಿ ಅರೆಸ್ಟ್​
ಕಂಗನಾ-ಕುಮಾರ ಹೆಗಡೆ
ರಾಜೇಶ್ ದುಗ್ಗುಮನೆ
|

Updated on: May 29, 2021 | 9:29 PM

Share

ಮಂಡ್ಯ: ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಬಾಲಿವುಡ್ ಚಿತ್ರನಟಿ ಕಂಗನಾ ರಣಾವತ್ ಬಾಡಿಗಾರ್ಡ್ ಕುಮಾರಶೆಟ್ಟಿ ಅಲಿಯಾಸ್ ಕುಮಾರ ಹೆಗಡೆ ಅವರನ್ನು ಮುಂಬೈ ಪೊಲೀಸರು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಹೆಗ್ಗಡಹಳ್ಳಿಯಲ್ಲಿ ಬಂಧಿಸಿದ್ದಾರೆ.

ಸಂತ್ರಸ್ತ ಯುವತಿಯ ಜೊತೆ ಕುಮಾರ್​ ಹೆಗಡೆಗೆ ಕಳೆದ 8 ವರ್ಷಗಳ ಹಿಂದೆ ಪರಿಚಯ ಬೆಳೆದಿತ್ತು. ಕಳೆದ ವರ್ಷ ಜೂನ್​ನಲ್ಲಿ ಆತ ಮದುವೆ ಪ್ರಪೋಸ್​ ಕೂಡ ಮಾಡಿದ್ದ. ಅದಕ್ಕೆ ಯುವತಿಯಿಂದ ಸಮ್ಮತಿ ಸಿಕ್ಕಿತ್ತು. ಬಳಿಕ ಆತ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಲು ಶುರುಮಾಡಿದ್ದ. ಏ.27ರಂದು ಅವನು ತನ್ನ ತಾಯಿ ನಿಧನರಾಗಿದ್ದಾರೆ ಎಂದು ಹೇಳಿ ಯುವತಿಯಿಂದ 50 ಸಾವಿರ ರೂ. ಹಣ ಪಡೆದು ಅಪಾರ್ಟ್​ಮೆಂಟ್​ನಿಂದ ಪರಾರಿ ಆಗಿದ್ದ. ಮೂಲತಃ ಕರ್ನಾಟಕದವನಾದ ಕುಮಾರ್​ ಹೆಗಡೆ ತನ್ನ ಊರು ತಲುಪಿದ ಬಳಿಕ ಫೋನ್​ ಸ್ವಿಚ್​ ಆಫ್​ ಮಾಡಿಕೊಂಡಿದ್ದಾನೆ ಎಂದು ಯುವತಿ  ದೂರಿನಲ್ಲಿ ತಿಳಿಸಿದ್ದರು.

ಈ ದೂರನ್ನು ಆಧರಿಸಿ ಮುಂಬೈ ಪೊಲೀಸರು ಕುಮಾರ್​ ಹೆಗಡೆಗಾಗಿ ಹುಡುಕಾಟ ನಡೆಸಿದ್ದರು. ಈತ ಹೆಗ್ಗಡಹಳ್ಳಿಯಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ಬಂದು ಬಂಧಿಸಿದ್ದಾರೆ. ಸದ್ಯ, ಕೆಆರ್ ಪೇಟೆಯ ಜೆಎಂಎಫ್​ಸಿ ಕೋರ್ಟ್​​ಗೆ ಹಾಜರುಪಡಿಸಿ ಮುಂಬೈಗೆ ಕರೆದೊಯ್ದಿದ್ದಾರೆ.

ಕಂಗನಾ ರಣಾವತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಸದಾಕಾಲ ಆ್ಯಕ್ಟೀವ್​ ಆಗಿರುತ್ತಾರೆ. ತಮಗೆ ಸಂಬಂಧ ಇರಲಿ, ಇಲ್ಲದಿರಲಿ ಅನೇಕ ವಿಚಾರಗಳ ಬಗ್ಗೆ ಅವರು ಪ್ರತಿಕ್ರಿಯೆ ನೀಡುತ್ತಿರುತ್ತಾರೆ. ಆದರೆ ಅವರ ಬಾಡಿ ಗಾರ್ಡ್​ ಎಂದು ಹೇಳಲಾದ ವ್ಯಕ್ತಿಯ ಬಗ್ಗೆ ಇಂಥ ದೊಡ್ಡ ಆರೋಪ ಕೇಳಿಬಂದಿದ್ದರೂ ಕೂಡ ಅವರು ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆತ ತಮ್ಮ ಬಾಡಿ ಗಾರ್ಡ್​ ಹೌದೋ ಅಲ್ಲವೋ ಎಂಬುದನ್ನೂ ಅವರು ಈವರಗೆ ಖಚಿತಪಡಿಸಿಲ್ಲ.

ಇದನ್ನೂ ಓದಿ: Kangana Ranaut: ಕಂಗನಾ ಬಾಡಿಗಾರ್ಡ್​ ಎನ್ನಲಾದ ಕರ್ನಾಟಕ ಮೂಲದವನ ಮೇಲೆ ರೇಪ್​ ಆರೋಪ; 50 ಸಾವಿರ ಹಣದೊಂದಿಗೆ ಪರಾರಿ

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ