AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಕಂಗನಾ ರಣಾವತ್ ಬಾಡಿಗಾರ್ಡ್ ಮಂಡ್ಯದಲ್ಲಿ ಅರೆಸ್ಟ್​

ಸಂತ್ರಸ್ತ ಯುವತಿಯ ಜೊತೆ ಕುಮಾರ್​ ಹೆಗಡೆಗೆ ಕಳೆದ 8 ವರ್ಷಗಳ ಹಿಂದೆ ಪರಿಚಯ ಬೆಳೆದಿತ್ತು. ಕಳೆದ ವರ್ಷ ಜೂನ್​ನಲ್ಲಿ ಆತ ಮದುವೆ ಪ್ರಪೋಸ್​ ಕೂಡ ಮಾಡಿದ್ದ. ಅದಕ್ಕೆ ಯುವತಿಯಿಂದ ಸಮ್ಮತಿ ಸಿಕ್ಕಿತ್ತು. ಬಳಿಕ ಆತ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಲು ಶುರುಮಾಡಿದ್ದ.

ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಕಂಗನಾ ರಣಾವತ್ ಬಾಡಿಗಾರ್ಡ್ ಮಂಡ್ಯದಲ್ಲಿ ಅರೆಸ್ಟ್​
ಕಂಗನಾ-ಕುಮಾರ ಹೆಗಡೆ
ರಾಜೇಶ್ ದುಗ್ಗುಮನೆ
|

Updated on: May 29, 2021 | 9:29 PM

Share

ಮಂಡ್ಯ: ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಬಾಲಿವುಡ್ ಚಿತ್ರನಟಿ ಕಂಗನಾ ರಣಾವತ್ ಬಾಡಿಗಾರ್ಡ್ ಕುಮಾರಶೆಟ್ಟಿ ಅಲಿಯಾಸ್ ಕುಮಾರ ಹೆಗಡೆ ಅವರನ್ನು ಮುಂಬೈ ಪೊಲೀಸರು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಹೆಗ್ಗಡಹಳ್ಳಿಯಲ್ಲಿ ಬಂಧಿಸಿದ್ದಾರೆ.

ಸಂತ್ರಸ್ತ ಯುವತಿಯ ಜೊತೆ ಕುಮಾರ್​ ಹೆಗಡೆಗೆ ಕಳೆದ 8 ವರ್ಷಗಳ ಹಿಂದೆ ಪರಿಚಯ ಬೆಳೆದಿತ್ತು. ಕಳೆದ ವರ್ಷ ಜೂನ್​ನಲ್ಲಿ ಆತ ಮದುವೆ ಪ್ರಪೋಸ್​ ಕೂಡ ಮಾಡಿದ್ದ. ಅದಕ್ಕೆ ಯುವತಿಯಿಂದ ಸಮ್ಮತಿ ಸಿಕ್ಕಿತ್ತು. ಬಳಿಕ ಆತ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಲು ಶುರುಮಾಡಿದ್ದ. ಏ.27ರಂದು ಅವನು ತನ್ನ ತಾಯಿ ನಿಧನರಾಗಿದ್ದಾರೆ ಎಂದು ಹೇಳಿ ಯುವತಿಯಿಂದ 50 ಸಾವಿರ ರೂ. ಹಣ ಪಡೆದು ಅಪಾರ್ಟ್​ಮೆಂಟ್​ನಿಂದ ಪರಾರಿ ಆಗಿದ್ದ. ಮೂಲತಃ ಕರ್ನಾಟಕದವನಾದ ಕುಮಾರ್​ ಹೆಗಡೆ ತನ್ನ ಊರು ತಲುಪಿದ ಬಳಿಕ ಫೋನ್​ ಸ್ವಿಚ್​ ಆಫ್​ ಮಾಡಿಕೊಂಡಿದ್ದಾನೆ ಎಂದು ಯುವತಿ  ದೂರಿನಲ್ಲಿ ತಿಳಿಸಿದ್ದರು.

ಈ ದೂರನ್ನು ಆಧರಿಸಿ ಮುಂಬೈ ಪೊಲೀಸರು ಕುಮಾರ್​ ಹೆಗಡೆಗಾಗಿ ಹುಡುಕಾಟ ನಡೆಸಿದ್ದರು. ಈತ ಹೆಗ್ಗಡಹಳ್ಳಿಯಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ಬಂದು ಬಂಧಿಸಿದ್ದಾರೆ. ಸದ್ಯ, ಕೆಆರ್ ಪೇಟೆಯ ಜೆಎಂಎಫ್​ಸಿ ಕೋರ್ಟ್​​ಗೆ ಹಾಜರುಪಡಿಸಿ ಮುಂಬೈಗೆ ಕರೆದೊಯ್ದಿದ್ದಾರೆ.

ಕಂಗನಾ ರಣಾವತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಸದಾಕಾಲ ಆ್ಯಕ್ಟೀವ್​ ಆಗಿರುತ್ತಾರೆ. ತಮಗೆ ಸಂಬಂಧ ಇರಲಿ, ಇಲ್ಲದಿರಲಿ ಅನೇಕ ವಿಚಾರಗಳ ಬಗ್ಗೆ ಅವರು ಪ್ರತಿಕ್ರಿಯೆ ನೀಡುತ್ತಿರುತ್ತಾರೆ. ಆದರೆ ಅವರ ಬಾಡಿ ಗಾರ್ಡ್​ ಎಂದು ಹೇಳಲಾದ ವ್ಯಕ್ತಿಯ ಬಗ್ಗೆ ಇಂಥ ದೊಡ್ಡ ಆರೋಪ ಕೇಳಿಬಂದಿದ್ದರೂ ಕೂಡ ಅವರು ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆತ ತಮ್ಮ ಬಾಡಿ ಗಾರ್ಡ್​ ಹೌದೋ ಅಲ್ಲವೋ ಎಂಬುದನ್ನೂ ಅವರು ಈವರಗೆ ಖಚಿತಪಡಿಸಿಲ್ಲ.

ಇದನ್ನೂ ಓದಿ: Kangana Ranaut: ಕಂಗನಾ ಬಾಡಿಗಾರ್ಡ್​ ಎನ್ನಲಾದ ಕರ್ನಾಟಕ ಮೂಲದವನ ಮೇಲೆ ರೇಪ್​ ಆರೋಪ; 50 ಸಾವಿರ ಹಣದೊಂದಿಗೆ ಪರಾರಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್