AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಕಂಗನಾ ರಣಾವತ್ ಬಾಡಿಗಾರ್ಡ್ ಮಂಡ್ಯದಲ್ಲಿ ಅರೆಸ್ಟ್​

ಸಂತ್ರಸ್ತ ಯುವತಿಯ ಜೊತೆ ಕುಮಾರ್​ ಹೆಗಡೆಗೆ ಕಳೆದ 8 ವರ್ಷಗಳ ಹಿಂದೆ ಪರಿಚಯ ಬೆಳೆದಿತ್ತು. ಕಳೆದ ವರ್ಷ ಜೂನ್​ನಲ್ಲಿ ಆತ ಮದುವೆ ಪ್ರಪೋಸ್​ ಕೂಡ ಮಾಡಿದ್ದ. ಅದಕ್ಕೆ ಯುವತಿಯಿಂದ ಸಮ್ಮತಿ ಸಿಕ್ಕಿತ್ತು. ಬಳಿಕ ಆತ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಲು ಶುರುಮಾಡಿದ್ದ.

ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಕಂಗನಾ ರಣಾವತ್ ಬಾಡಿಗಾರ್ಡ್ ಮಂಡ್ಯದಲ್ಲಿ ಅರೆಸ್ಟ್​
ಕಂಗನಾ-ಕುಮಾರ ಹೆಗಡೆ
ರಾಜೇಶ್ ದುಗ್ಗುಮನೆ
|

Updated on: May 29, 2021 | 9:29 PM

Share

ಮಂಡ್ಯ: ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಬಾಲಿವುಡ್ ಚಿತ್ರನಟಿ ಕಂಗನಾ ರಣಾವತ್ ಬಾಡಿಗಾರ್ಡ್ ಕುಮಾರಶೆಟ್ಟಿ ಅಲಿಯಾಸ್ ಕುಮಾರ ಹೆಗಡೆ ಅವರನ್ನು ಮುಂಬೈ ಪೊಲೀಸರು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಹೆಗ್ಗಡಹಳ್ಳಿಯಲ್ಲಿ ಬಂಧಿಸಿದ್ದಾರೆ.

ಸಂತ್ರಸ್ತ ಯುವತಿಯ ಜೊತೆ ಕುಮಾರ್​ ಹೆಗಡೆಗೆ ಕಳೆದ 8 ವರ್ಷಗಳ ಹಿಂದೆ ಪರಿಚಯ ಬೆಳೆದಿತ್ತು. ಕಳೆದ ವರ್ಷ ಜೂನ್​ನಲ್ಲಿ ಆತ ಮದುವೆ ಪ್ರಪೋಸ್​ ಕೂಡ ಮಾಡಿದ್ದ. ಅದಕ್ಕೆ ಯುವತಿಯಿಂದ ಸಮ್ಮತಿ ಸಿಕ್ಕಿತ್ತು. ಬಳಿಕ ಆತ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಲು ಶುರುಮಾಡಿದ್ದ. ಏ.27ರಂದು ಅವನು ತನ್ನ ತಾಯಿ ನಿಧನರಾಗಿದ್ದಾರೆ ಎಂದು ಹೇಳಿ ಯುವತಿಯಿಂದ 50 ಸಾವಿರ ರೂ. ಹಣ ಪಡೆದು ಅಪಾರ್ಟ್​ಮೆಂಟ್​ನಿಂದ ಪರಾರಿ ಆಗಿದ್ದ. ಮೂಲತಃ ಕರ್ನಾಟಕದವನಾದ ಕುಮಾರ್​ ಹೆಗಡೆ ತನ್ನ ಊರು ತಲುಪಿದ ಬಳಿಕ ಫೋನ್​ ಸ್ವಿಚ್​ ಆಫ್​ ಮಾಡಿಕೊಂಡಿದ್ದಾನೆ ಎಂದು ಯುವತಿ  ದೂರಿನಲ್ಲಿ ತಿಳಿಸಿದ್ದರು.

ಈ ದೂರನ್ನು ಆಧರಿಸಿ ಮುಂಬೈ ಪೊಲೀಸರು ಕುಮಾರ್​ ಹೆಗಡೆಗಾಗಿ ಹುಡುಕಾಟ ನಡೆಸಿದ್ದರು. ಈತ ಹೆಗ್ಗಡಹಳ್ಳಿಯಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ಬಂದು ಬಂಧಿಸಿದ್ದಾರೆ. ಸದ್ಯ, ಕೆಆರ್ ಪೇಟೆಯ ಜೆಎಂಎಫ್​ಸಿ ಕೋರ್ಟ್​​ಗೆ ಹಾಜರುಪಡಿಸಿ ಮುಂಬೈಗೆ ಕರೆದೊಯ್ದಿದ್ದಾರೆ.

ಕಂಗನಾ ರಣಾವತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಸದಾಕಾಲ ಆ್ಯಕ್ಟೀವ್​ ಆಗಿರುತ್ತಾರೆ. ತಮಗೆ ಸಂಬಂಧ ಇರಲಿ, ಇಲ್ಲದಿರಲಿ ಅನೇಕ ವಿಚಾರಗಳ ಬಗ್ಗೆ ಅವರು ಪ್ರತಿಕ್ರಿಯೆ ನೀಡುತ್ತಿರುತ್ತಾರೆ. ಆದರೆ ಅವರ ಬಾಡಿ ಗಾರ್ಡ್​ ಎಂದು ಹೇಳಲಾದ ವ್ಯಕ್ತಿಯ ಬಗ್ಗೆ ಇಂಥ ದೊಡ್ಡ ಆರೋಪ ಕೇಳಿಬಂದಿದ್ದರೂ ಕೂಡ ಅವರು ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆತ ತಮ್ಮ ಬಾಡಿ ಗಾರ್ಡ್​ ಹೌದೋ ಅಲ್ಲವೋ ಎಂಬುದನ್ನೂ ಅವರು ಈವರಗೆ ಖಚಿತಪಡಿಸಿಲ್ಲ.

ಇದನ್ನೂ ಓದಿ: Kangana Ranaut: ಕಂಗನಾ ಬಾಡಿಗಾರ್ಡ್​ ಎನ್ನಲಾದ ಕರ್ನಾಟಕ ಮೂಲದವನ ಮೇಲೆ ರೇಪ್​ ಆರೋಪ; 50 ಸಾವಿರ ಹಣದೊಂದಿಗೆ ಪರಾರಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?