ಕೊಲೆ ಆರೋಪಿಗೆ ಕಸಾಪ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷ ಸ್ಥಾನ; ಸಾಹಿತ್ಯಾಸಕ್ತರಿಂದ ತೀವ್ರ ಅಸಮಾಧಾನ

ಕಸಾಪ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷರಾಗಿ ರೌಡಿಶೀಟರ್ ದೀಪು ಕೊಲೆ ಕೇಸ್​ನ 24ನೇ ಆರೋಪಿ ಎಂ.ಬಿ.ಕುಮಾರ್ ಆಯ್ಕೆ ಆಗಿದ್ದಾರೆ. ಶಾಸಕರ ಒತ್ತಡಕ್ಕೆ ಮಣಿದು ಎಂ.ಬಿ.ಕುಮಾರ್​ಗೆ ಕಸಾಪ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎನ್ನಲಾಗುತ್ತಿದೆ. ಇದಕ್ಕೆ ಈಗ ಭಾರಿ ವಿರೋಧ ವ್ಯಕ್ತವಾಗಿದೆ.

ಕೊಲೆ ಆರೋಪಿಗೆ ಕಸಾಪ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷ ಸ್ಥಾನ; ಸಾಹಿತ್ಯಾಸಕ್ತರಿಂದ ತೀವ್ರ ಅಸಮಾಧಾನ
ಕನ್ನಡ ಸಾಹಿತ್ಯ ಪರಿಷತ್
Edited By: ಆಯೇಷಾ ಬಾನು

Updated on: Sep 19, 2024 | 11:15 AM

ಮಂಡ್ಯ, ಸೆ.19: ಕೊಲೆ ಆರೋಪಿಗೆ‌ (Murder Accused) ತಾಲೂಕು ಅಧ್ಯಕ್ಷ ಸ್ಥಾನ ನೀಡಿ ಕಸಾಪ ಎಡವಟ್ಟು ಮಾಡಿಕೊಂಡಿದೆ. ಕಸಾಪ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷರಾಗಿ ರೌಡಿಶೀಟರ್ ದೀಪು ಕೊಲೆ ಕೇಸ್​ನ 24ನೇ ಆರೋಪಿ ಎಂ.ಬಿ.ಕುಮಾರ್ ಆಯ್ಕೆ ಆಗಿದ್ದಾರೆ. ಶಾಸಕರ ಒತ್ತಡಕ್ಕೆ ಮಣಿದು ಎಂ.ಬಿ.ಕುಮಾರ್​ಗೆ ಕಸಾಪ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎನ್ನಲಾಗುತ್ತಿದೆ. ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ (Kannada Sahitya Parishat)​​ ನಡೆಗೆ ಸಾಹಿತ್ಯಾಸಕ್ತರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಡಿಸೆಂಬರ್‌ನಲ್ಲಿ ನಡೆಯುವ ನುಡಿಜಾತ್ರೆಗೆ ಭರದ ಸಿದ್ಧತೆ ನಡೆಯುತ್ತಿದೆ. ಈ ನಡುವೆ ಕೊಲೆ ಆರೋಪಿಗೆ‌ ಅಧ್ಯಕ್ಷ ಸ್ಥಾನ ನೀಡಿ ಕಸಾಪ ಎಡವಟ್ಟು ಮಾಡಿಕೊಂಡಿದೆ. ಶಾಸಕನ ಒತ್ತಡಕ್ಕೆ ಮಣಿದ ಕನ್ನಡ ಸಾಹಿತ್ಯ ಪರಿಷತ್ ಕೊಲೆ ಆರೋಪಿಯನ್ನು ಕಸಾಪ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷರಾಗಿ ಆಯ್ಕೆ ಮಾಡಿದೆ. 2015ರ ಜನವರಿ 3ರಂದು ರೌಡಿಶೀಟರ್ ದೀಪು ಹತ್ಯೆ ನಡೆದಿತ್ತು. ಈ ಪ್ರಕರಣದಲ್ಲಿ ಎಂ.ಬಿ.ಕುಮಾರ್ 24ನೇ ಆರೋಪಿಯಾಗಿದ್ದರು. ಸದ್ಯ ಜಾಮೀನಿನ ಮೇಲೆ ಹೊರಗಿದ್ದು ವಿಚಾರಣೆ ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ: ಕಡಿದ ಹಾವಿನ ತಲೆ ಜಜ್ಜಿ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ

ಕುಮಾರ್ ಹಿನ್ನೆಲೆ ಗೊತ್ತಿದ್ದರೂ ಆತನ ಪರವಾಗಿ ಶಾಸಕರು ಶಿಫಾರಸು ಮಾಡಿದ್ದಾರೆ. ಕುಮಾರ್​ನನ್ನು ಶ್ರೀರಂಗಪಟ್ಟಣ ಕಸಾಪ ಅಧ್ಯಕ್ಷರನ್ನಾಗಿ ಮಾಡಲು ಶ್ರೀರಂಗಪಟ್ಟಣ ಕ್ಷೇತ್ರದ ‘ಕೈ’ ಶಾಸಕ ರಮೇಶ್​ ಬಂಡಿಸಿದ್ದೇಗೌಡ ಪತ್ರ ಬರೆದಿದ್ದಾರೆ. ಶಾಸಕರ ಒತ್ತಡಕ್ಕೆ ಮಣಿದ ಕಸಾಪ ಎಂ.ಬಿ.ಕುಮಾರ್​ಗೆ ತಾಲೂಕು ಅಧ್ಯಕ್ಷ ಸ್ಥಾನ ನೀಡಿದೆ. ಕನ್ನಡ ಸಾಹಿತ್ಯ ಪರಿಷತ್​​ ನಡೆಗೆ ಸಾಹಿತ್ಯಾಸಕ್ತರಿಂದ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. ತಾಲೂಕು ಅಧ್ಯಕ್ಷ ಸ್ಥಾನದಿಂದ ಎಂ.ಬಿ.ಕುಮಾರ್​ ಕೆಳಗಿಳಿಸಲು ಆಗ್ರಹ ಕೇಳಿ ಬಂದಿದೆ. ಸದ್ಯ ದಾಖಲೆ ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತೆ ಎಂದು ಕಸಾಪ ಅಧ್ಯಕ್ಷ ಮಹೇಶ್ ಜೋಶಿ ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:55 am, Thu, 19 September 24

Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
Follow Us